ಜೊಯಿಡಾ ಗಣೇಶಗುಡಿ ಬಳಿ ಪ್ರವಾಸಿ ಬಸ್ ಪಲ್ಟಿ: 40 ವಿದ್ಯಾರ್ಥಿಗಳಿಗೆ ಗಾಯ
Tourist bus overturns near Zoida Ganeshgudi: 40 students injured
ಜೊಯಿಡಾ ಗಣೇಶಗುಡಿ ಬಳಿ ಪ್ರವಾಸಿ ಬಸ್ ಪಲ್ಟಿ: 40 ವಿದ್ಯಾರ್ಥಿಗಳಿಗೆ ಗಾಯ
ಕಾರವಾರ 08 : ಜೊಯಿಡಾ ತಾಲ್ಲೂಕಿನ ಗಣೇಶಗುಡಿ ಬಳಿ ಪ್ರವಾಸಿ ಬಸ್ ಪಲ್ಟಿ ಯಾದ ಘಟನೆ ನಡೆದಿದೆ. ಬಸ್ ಚಿತ್ರದುರ್ಗ ಜಿಲ್ಲೆಯ ಹೊಸನಗರದ ಸೇಂಟ್ ಅಂಟೋನಿ ಪ್ರೌಢ ಶಾಲಾ ವಿದ್ಯಾರ್ಥಿಗಳನ್ನು ಕರೆ ತಂದಿತ್ತು. ಖಾಸಗಿ ಬಸ್ ಚಾಲಕನ ನಿಯಂತ್ರಣ ತಪ್ಪಿ ಬಸ್ ರಾಜ್ಯ ಹೆದ್ದಾರಿಯಲ್ಲಿ ಪಲ್ಟಿಯಾಗಿದೆ.40 ವಿದ್ಯಾರ್ಥಿಗಳಿಗೆ ಸಣ್ಣ ಪುಟ್ಟ ಗಾಯಗಳಾಗಿವೆ ಎಂದು ರಾಮನಗರ (ಜೊಯಿಡಾ) ಪಿಎಸ್ ಐ ಬಸವರಾಜ ತಿಳಿಸಿದ್ದಾರೆ. ವಿದ್ಯಾರ್ಥಿಗಳನ್ನು ದಾಂಡೇಲಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಗಣೇಶ ಗುಡಿಗೆ ವಿದ್ಯಾರ್ಥಿಗಳು ರಾಫ್ಟಿಂಗ್ ಮಾಡಲು ಬರುತ್ತಿದ್ದಾಗ ಬಸ್ ಪಲ್ಟಿಯಾಗಿದೆ.ವಿದ್ಯಾರ್ಥಿಗಳು ಅಪಾಯದಿಂದ ಪಾರಾಗಿದ್ದಾರೆಂದು ಪಿಎಸ್ ಐ ಬಸವರಾಜ ಹೇಳಿದ್ದಾರೆ......
ಗಾಂಜಾ ಮಾರಾಟಗಾರರ ಮೇಲೆ ದಾಳಿ; 9,21 ಲಕ್ಷದ ವಸ್ತುಗಳ ವಶ, ಐವರ ಬಂಧನ
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ 