ನದಿ ದಾಟುವಾಗ ನದಿಗೆ ಉರುಳಿದ ಟ್ರ್ಯಾಕ್ಟರ್
Tractor falls into river while crossing
ಜಮಖಂಡಿ 08: ತಾಲೂಕಿನ ಕಂಕಣವಾಡಿ ಗ್ರಾಮದ ಕೃಷ್ಣಾ ನದಿಯಲ್ಲಿ ಕಬ್ಬು ತುಂಬಿದ ಎರಡು ದೋಣಿಯಲ್ಲಿ ಟ್ರ್ಯಾಕ್ಟರ್ ತುಂಬಿಸಿಕೊಂಡು ನದಿಯನ್ನು ದಾಟುವ ಸಮಯದಲ್ಲಿ ದೋಣಿಯೊಂದು ನದಿಗೆ ಉರುಳಿದೆ.
ಕಂಕಣವಾಡಿ ಗ್ರಾಮದ ಗುಹೇಶ್ವರ ನಡುಗಡ್ಡೆ ಪ್ರದೇಶದಲ್ಲಿ ಬೆಳೆದ ಕಬ್ಬಿನ ಬೆಳೆಯನ್ನು ಸಕ್ಕರೆ ಕಾರ್ಖಾನೆಗಳಿಗೆ ಸಾಗಿಸಲು ರೈತರು ಪ್ರತಿವರ್ಷ ಹರಸಾಹಸ ಪಡಬೇಕಾಗುತ್ತದೆ. ಪರ್ಯಾಯ ಮಾರ್ಗವಿಲ್ಲದೇ ರೈತರು ಬೋಟ್ (ದೋಣಿ)ಗಳ ಸಹಾಯದಿಂದ ಕಬ್ಬನ್ನು ಸಾಗಿಸುತ್ತ ಬಂದಿದ್ದಾರೆ. ಹೀಗೆ ಸಾಗಿಸುವಾಗ ಕಬ್ಬು ತುಂಬಿದ ದೋಣಿಯೊಂದು ನದಿಗೆ ಉರುಳಿದೆ. ಇಲ್ಲಿಯ ರೈತರು ಕಬ್ಬನ್ನು ಸಾಗಿಸಲು ಎರಡು ಬೋಟ್ಗಳನ್ನು ಜೋಡಿಸಿಕೊಂಡು ಅದರಲ್ಲಿ ಕಬ್ಬು ತುಂಬಿದ ಟ್ರ್ಯಾಕ್ಟರ್ ಅಥವಾ ಲಾರಿಯನ್ನು ಹತ್ತಿಸಿಕೊಂಡು ನದಿಯನ್ನು ದಾಟಿಸುತ್ತಾರೆ. ರೈತರ ಪಾಲಿಗೆ ಇದೊಂದು ಹರಸಾಹಸವೇ ಆಗಿದೆ.
ಕಬ್ಬು ತುಂಬಿದ ಟ್ಯ್ರಾಕ್ಟರನ್ನು ಸಾಗಿಸುತ್ತಿದ್ದ ಬೋಟ್ ಹಾನಿಗೊಳಗಾದ ಪರಿಣಾಮ ಕಬ್ಬು ತುಂಬಿದ ಟ್ರ್ಯಾಕ್ಟರ್ ನೀರಿನಲ್ಲಿ ಮುಳುಗಿ ಹೋಗಿದ್ದು, ಕಬ್ಬು ಬೆಳೆದ ರೈತನಿಗೆ ಸಾಕಷ್ಟು ಹಾನಿಯಾಗಿದೆ. ಅದೃಷ್ಟವಶಾತ್ ಯಾವುದೇ ಪ್ರಾಣ ಹಾನಿಯಾಗಿಲ್ಲ ಎಂದು ಗ್ರಾಮಸ್ಥರು ನಿಟ್ಟುಸಿರು ಬಿಟ್ಟಿದ್ದಾರೆ.
ಕಂಕಣವಾಡಿ ಗ್ರಾಮದ ಗುಹೇಶ್ವರ ನಡುಗಡ್ಡೆ ಸಂಪರ್ಕಕ್ಕೆ ಶಾಶ್ವತ ಪರಿಹಾರ ಒದಗಿಸಿಕೊಡಬೇಕು. ಇಲ್ಲವಾದಲ್ಲಿ ಕೃಷ್ಣಾ ಮೋಲ್ದಂಡೆ ಯೋಜನೆಯನ್ನು ಸಂಪೂರ್ಣ ಜಾರಿಗೊಳಿಸುವ ಮೂಲಕ ಮುಳುಗಡೆಯ ಪರಿಹಾರ ಸಂದಾಯ ಮಾಡಬೇಕು ಎಂದು ಗ್ರಾಮಸ್ಥರು ಆಗ್ರಹಿಸಿದ್ದಾರೆ.
ಪುನರ್ ಅಭಿವೃದ್ಧಿಗೊಂಡ ಚೆನ್ನೈ ಪಾರ್ಕ್ ಅಮೃತ್ ರೈಲು ನಿಲ್ದಾಣವನ್ನು ಜುಲೈ 17ರಂದು ಉದ್ಘಾಟಿಸಲಿರುವ ಪ್ರಧಾನಿ ಮೋದಿ
ಅನಾಮಧೇಯ ಶವ ಪತ್ತೆ: ಮಹಿಳೆ ಕೊಲೆ ಪ್ರಕರಣ ಭೇದಿಸಿದ ಸಂಕೇಶ್ವರ ಪೊಲೀಸರು : ಆರೋಪಿ ಬಂಧನ
ಶಿವಕುಮಾರ್–ಸಿದ್ದರಾಮಯ್ಯ ಚರ್ಚೆ; ಕರ್ನಾಟಕ ಸಂಪುಟ ವಿಸ್ತರಣೆ ಕುರಿತ ಊಹಾಪೋಹಗಳಿಗೆ ಮತ್ತಷ್ಟು ಬಲ
ಶ್ರೀವಾರಿ ದರ್ಶನ, ವಸತಿ ಹಾಗೂ ಸೇವೆಗಳ ಬುಕ್ಕಿಂಗ್ಗೆ ಅಧಿಕೃತ ಟಿಟಿಡಿ ವೆಬ್ಸೈಟ್ನ್ನೇ ಬಳಸುವಂತೆ ಭಕ್ತರಿಗೆ ಟಿಟಿಡಿ ಮನವಿ
ಗಿಲ್ ಗಾಯದ ಆತಂಕದ ನಡುವೆ ಭಾರತಕ್ಕೆ ಏಕದಿನ ಸರಣಿ ಗೆಲ್ಲುವ ಅವಕಾಶ
ಜಿಎಸ್ಟಿ ಇಳಿಕೆ, ಸುಲಭ ಹಣಕಾಸು ನೆರವಿನಿಂದ ಆಟೋ ಉದ್ಯಮದ ಪ್ರಮುಖ ವಿಭಾಗಗಳಲ್ಲಿ ದಾಖಲೆಯ ಮೊದಲ ತ್ರೈಮಾಸಿಕ ಮಾರಾಟ 