ಶಬರಿಮಲೆ ಯಾತ್ರಿಕರ ಅನುಕೂಲಕ್ಕಾಗಿ ವಿಶೇಷ ರೈಲುಗಳ ಸಂಚಾರ
ಚೆನ್ನೈ, ನ 9: ಶಬರಿಮಲೆ ಯಾತ್ರಿಕರ ಅನುಕೂಲಕ್ಕಾಗಿ ದಕ್ಷಿಣ ರೈಲ್ವೆ ಚೆನ್ನೈನಿಂದ ನವೆಂಬರ್ ಮತ್ತು ಡಿಸೆಂಬರ್ ಅವಧಿಯಲ್ಲಿ ವಿಶೇಷ ರೈಲುಗಳನ್ನು ಓಡಿಸಲಿದೆ. ಚೆನ್ನೈ- ತಿರುವನಂತಪುರಂ ಮತ್ತು ಚೆನ್ನೈ-ಕೊಲ್ಲಂ ನಡುವೆ ನವೆಂಬರ್ ಮಧ್ಯಭಾಗದಿಂದ ದಿಂದ ಡಿಸೆಂಬರ್ ಮೊದಲ ವಾರದವರೆಗೆ ಈ ರೈಲುಗಳು ಸಂಚರಿಸಲಿವೆ. ದಕ್ಷಿಣ ರೈಲ್ವೆ ಚೆನ್ನೈ ಮತ್ತು ತಿರುವನಂತಪುರಂ ನಡುವೆ ಎರಡು ವಿಶೇಷ ರೈಲು ಸಂಚಾರ ಮಾಡಲಿದೆ. ಈ ರೈಲುಗಳು ನ.21 ಮತ್ತು 28 ರಂದು ಚೆನ್ನೈ ಸೆಂಟ್ರಲ್ ನಿಂದ ಹೊರಡಲಿದ್ದು, ನ.22 ಮತ್ತು 29ರಂದು ಬೆಳಗ್ಗೆ ತಿರುವನಂತಪುರ ತಲುಪಲಿವೆ. ವಿಶೇಷ ರೈಲುಗಳು ಅರಕ್ಕೋಣಂ, ಕಟ್ಪಾಡಿ, ಜೋಲಾರ್ ಪೇಟ್ , ಸೇಲಂ, ಕೊಯಮತ್ತೂರು ಮತ್ತು ಪಾಲಕ್ಕಾಡಿ ನಲ್ಲಿ ನಿಲುಗಡೆ ಮಾಡಲಿವೆ. ಇನ್ನು ತಿರುವನಂತಪುರದಿಂದ ಇದೇ .20, 27ರಂದು ಮಧ್ಯಾಹ್ನ 3.45ಕ್ಕೆ ಹೊರಡುವ ರೈಲುಗಳು 21, 28ರಂದು ಬೆಳಿಗ್ಗೆ ಚೆನ್ನೈಸೆಂಟ್ರಲ್ ತಲುಪಲಿದ್ದು . ಚೆನ್ನೈ ಮತ್ತು ಕೊಲ್ಲಂ ನಡುವೆ ಮೂರು ವಿಶೇಷ ರೈಲು ಸಂಚರಿಸಲಿವೆ ಎಂದೂ ರೈಲ್ವೆ ಇಲಾಖೆ ಪ್ರಕಟಣೆ ತಿಳಿಸಿದೆ.
ಕಣಗಲಾ ಬಳಿ ಲಾರಿ, ದ್ವಿಚಕ್ರವಾಹನ ನಡುವೆ ಅಪಘಾತ : ಇಬ್ಬರ ಸಾವು
ಗಾಂಜಾ ಮಾರಾಟಗಾರರ ಮೇಲೆ ದಾಳಿ; 9,21 ಲಕ್ಷದ ವಸ್ತುಗಳ ವಶ, ಐವರ ಬಂಧನ
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ 