ಕೇರಳ ರೋಗಿಗಳಿಗೆ ಚಿಕಿತ್ಸೆ: ಆರೋಗ್ಯ ಇಲಾಖೆ ಸ್ಪಷ್ಟನೆ
ಮಂಗಳೂರು,
ಏಪ್ರಿಲ್ 13, ಕೇರಳ ರಾಜ್ಯ ಕಾಸರಗೋಡು ಜಿಲ್ಲೆಯಿಂದ ತುರ್ತು ಚಿಕಿತ್ಸೆಗಾಗಿ
ಮಂಗಳೂರಿನ ಕೆ.ಎಸ್.ಹೆಗ್ಡೆ ಮೆಡಿಕಲ್ ಕಾಲೇಜು ಆಸ್ಪತ್ರೆ ದೇರಳಕಟ್ಟೆ ಇಲ್ಲಿಗೆ
ಬಂದವರಿಗೆ ಸೂಕ್ತ ಚಿಕಿತ್ಸೆ ನೀಡಲಾಗುತ್ತಿದೆ.ತಸ್ಲೀಮ ಎಂಬವರು ಎಪ್ರಿಲ್ 8
ರಂದು ಮಧ್ಯಾಹ್ನ 12.15 ಗಂಟೆಗೆ ತೀವ್ರವಾದ ತಲೆನೋವಿನ ಸಂಬಂಧ ಆಸ್ಪತ್ರೆಯಲ್ಲಿ
ಚಿಕಿತ್ಸೆಯನ್ನು ಪಡೆದು ಹಿಂದಿರುಗಿದ್ದಾರೆ. ಎರಡನೇ ಪ್ರಕರಣದಲ್ಲಿ ಬಿ. ಫಾತಿಮಾ (65)
ಎಂಬ ಮಹಿಳೆ ಎಪ್ರಿಲ್ 8 ರಂದು ಮಧ್ಯಾಹ್ನ 12.50 ಗಂಟೆಗೆ ಹೃದಯ ಸಂಬಂಧಿ ಖಾಯಿಲೆಗೆ
ಒಳರೋಗಿಯಾಗಿ ದಾಖಲಾಗಿ ಚಿಕಿತ್ಸೆಯನ್ನು ಪಡೆಯುತ್ತಿದ್ದಾರೆ. ಮೂರನೇ ಪ್ರಕರಣದಲ್ಲಿ
ರೀಶಾನ ತೀವ್ರವಾದ ಹೊಟ್ಟೆನೋವಿಗೆ ಸಂಬಂಧಿಸಿ ಆಸ್ಪತ್ರೆಗೆ ಬಂದು ಚಿಕಿತ್ಸೆ ಪಡೆದು
ಹಿಂದಿರುಗಿದ್ದಾರೆ.ಜೈನಾಭಿ ಎಂಬ ಮಹಿಳೆ ತಲೆನೋವು ಮತ್ತು ವಾಂತಿ ಇರುವ
ಕಾರಣ ಕೆ.ಎಸ್.ಹೆಗ್ಡೆ ಆಸ್ಪತ್ರೆಗೆ ಬಂದು ಚಿಕಿತ್ಸೆಗಾಗಿ ದಾಖಲಾಗಲು ಸೂಚಿಸಿದ್ದರೂ
ಅದನ್ನು ನಿರಾಕರಿಸಿ ಹಿಂದಿರುಗಿರುತ್ತಾರೆ. ಈ ಎಲ್ಲಾ ಪ್ರಕರಣಗಳು ಕೋವಿಡ್- 19
ಗೆ ಸಂಬಂಧಪಟ್ಟಿರುವುದಿಲ್ಲ ಎಂದು ದಕ್ಷಿಣ ಕನ್ನಡ ಜಿಲ್ಲಾ ಆರೋಗ್ಯ ಮತ್ತು ಕುಟುಂಬ
ಕಲ್ಯಾಣ ಅಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಚಿನ್ನ ದೋಚಿದ್ದ ಖದೀಮನ ಬಂಧನ : 15.73 ಲಕ್ಷ ಮೌಲ್ಯದ 103.97 ಗ್ರಾಂ ಚಿನ್ನ ವಶ
ಕಣಗಲಾ ಬಳಿ ಲಾರಿ, ದ್ವಿಚಕ್ರವಾಹನ ನಡುವೆ ಅಪಘಾತ : ಇಬ್ಬರ ಸಾವು
ಗಾಂಜಾ ಮಾರಾಟಗಾರರ ಮೇಲೆ ದಾಳಿ; 9,21 ಲಕ್ಷದ ವಸ್ತುಗಳ ವಶ, ಐವರ ಬಂಧನ
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್ 