ಕೇರಳ ರೋಗಿಗಳಿಗೆ ಚಿಕಿತ್ಸೆ: ಆರೋಗ್ಯ ಇಲಾಖೆ ಸ್ಪಷ್ಟನೆ
ಮಂಗಳೂರು,
ಏಪ್ರಿಲ್ 13, ಕೇರಳ ರಾಜ್ಯ ಕಾಸರಗೋಡು ಜಿಲ್ಲೆಯಿಂದ ತುರ್ತು ಚಿಕಿತ್ಸೆಗಾಗಿ
ಮಂಗಳೂರಿನ ಕೆ.ಎಸ್.ಹೆಗ್ಡೆ ಮೆಡಿಕಲ್ ಕಾಲೇಜು ಆಸ್ಪತ್ರೆ ದೇರಳಕಟ್ಟೆ ಇಲ್ಲಿಗೆ
ಬಂದವರಿಗೆ ಸೂಕ್ತ ಚಿಕಿತ್ಸೆ ನೀಡಲಾಗುತ್ತಿದೆ.ತಸ್ಲೀಮ ಎಂಬವರು ಎಪ್ರಿಲ್ 8
ರಂದು ಮಧ್ಯಾಹ್ನ 12.15 ಗಂಟೆಗೆ ತೀವ್ರವಾದ ತಲೆನೋವಿನ ಸಂಬಂಧ ಆಸ್ಪತ್ರೆಯಲ್ಲಿ
ಚಿಕಿತ್ಸೆಯನ್ನು ಪಡೆದು ಹಿಂದಿರುಗಿದ್ದಾರೆ. ಎರಡನೇ ಪ್ರಕರಣದಲ್ಲಿ ಬಿ. ಫಾತಿಮಾ (65)
ಎಂಬ ಮಹಿಳೆ ಎಪ್ರಿಲ್ 8 ರಂದು ಮಧ್ಯಾಹ್ನ 12.50 ಗಂಟೆಗೆ ಹೃದಯ ಸಂಬಂಧಿ ಖಾಯಿಲೆಗೆ
ಒಳರೋಗಿಯಾಗಿ ದಾಖಲಾಗಿ ಚಿಕಿತ್ಸೆಯನ್ನು ಪಡೆಯುತ್ತಿದ್ದಾರೆ. ಮೂರನೇ ಪ್ರಕರಣದಲ್ಲಿ
ರೀಶಾನ ತೀವ್ರವಾದ ಹೊಟ್ಟೆನೋವಿಗೆ ಸಂಬಂಧಿಸಿ ಆಸ್ಪತ್ರೆಗೆ ಬಂದು ಚಿಕಿತ್ಸೆ ಪಡೆದು
ಹಿಂದಿರುಗಿದ್ದಾರೆ.ಜೈನಾಭಿ ಎಂಬ ಮಹಿಳೆ ತಲೆನೋವು ಮತ್ತು ವಾಂತಿ ಇರುವ
ಕಾರಣ ಕೆ.ಎಸ್.ಹೆಗ್ಡೆ ಆಸ್ಪತ್ರೆಗೆ ಬಂದು ಚಿಕಿತ್ಸೆಗಾಗಿ ದಾಖಲಾಗಲು ಸೂಚಿಸಿದ್ದರೂ
ಅದನ್ನು ನಿರಾಕರಿಸಿ ಹಿಂದಿರುಗಿರುತ್ತಾರೆ. ಈ ಎಲ್ಲಾ ಪ್ರಕರಣಗಳು ಕೋವಿಡ್- 19
ಗೆ ಸಂಬಂಧಪಟ್ಟಿರುವುದಿಲ್ಲ ಎಂದು ದಕ್ಷಿಣ ಕನ್ನಡ ಜಿಲ್ಲಾ ಆರೋಗ್ಯ ಮತ್ತು ಕುಟುಂಬ
ಕಲ್ಯಾಣ ಅಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 