ಡಾ. ಬಿ.ಎಫ್. ದಂಡಿನ್ ಸ್ಮರಣಾರ್ಥ ನುಡಿನಮನ ಹಾಗೂ ಸ್ಮಾರಕ ಭೂಮಿಪೂಜೆ
Tribute Meeting and Ground-breaking Ceremony for the Memorial of Dr. B.F. Dandin
ಗದಗ, ಆ.3: 65 ಶಿಕ್ಷಣ ಸಂಸ್ಥೆಗಳನ್ನು ಸ್ಥಾಪಿಸಿ ಶಿಕ್ಷಣ ಕ್ಷೇತ್ರಕ್ಕೆ ಅಪಾರ ಕೊಡುಗೆ ನೀಡಿದ ಕನಕದಾಸ ಶಿಕ್ಷಣ ಸಮಿತಿಯ ಸಂಸ್ಥಾಪಕ ಡಾ. ಬಿ.ಎಫ್. ದಂಡಿನ್ ಹಾಗೂ ಶಕುಂತಲಾಬಾಯಿ ದಂಡಿನ್ ಅವರ ಸ್ಮರಣಾರ್ಥ ಸಾರ್ವಜನಿಕ ನುಡಿನಮನ ಸಭೆ ಮತ್ತು ಸ್ಮಾರಕ ಭೂಮಿಪೂಜೆ ಕಾರ್ಯಕ್ರಮವು ಆಗಸ್ಟ್ 5ರಂದು ಬೆಳಿಗ್ಗೆ 10.30ಕ್ಕೆ ನಗರದ ಗಾಣಿಗರ ಭವನದಲ್ಲಿ ನಡೆಯಲಿದೆ ಎಂದು ಪ್ರೊ. ಎಂ.ಎನ್. ಕಾಮನಹಳ್ಳಿ ತಿಳಿಸಿದರು.
ನಗರದ ಪತ್ರಿಕಾ ಭವನದಲ್ಲಿ ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾರ್ಯಕ್ರಮದಲ್ಲಿ ನಾಲ್ಕು ಸಾವಿರಕ್ಕೂ ಹೆಚ್ಚು ಹಳೆಯ ವಿದ್ಯಾರ್ಥಿಗಳು ಹಾಗೂ ಅಭಿಮಾನಿಗಳು ಭಾಗವಹಿಸುವ ನೀರೀಕ್ಷೆಯಿದೆ ಎಂದರು.
ಕಾರ್ಯಕ್ರಮದ ದಿವ್ಯ ಸಾನ್ನಿಧ್ಯವನ್ನು ಕಾಗಿನೆಲೆ ಮಹಾಸಂಸ್ಥಾನದ ಶ್ರೀ ನಿರಂಜನಾನಂದಪುರಿ ಮಹಾಸ್ವಾಮೀಜಿ, ಶ್ರೀ ಸದಾಶಿವಾನಂದ ಮಹಾಸ್ವಾಮೀಜಿ, ನಾಗಸಾಧು ಮಹಾಂತ ಸಹದೇವಾನಂದ ಗಿರಿ ಮಹಾರಾಜ್, ಶ್ರೀ ಶಾಂತಲಿಂಗ ಮಹಾಸ್ವಾಮೀಜಿ ಹಾಗೂ ಶ್ರೀ ಮುಕೇಶ್ವರ ಸ್ವಾಮೀಜಿಗಳು ವಹಿಸಲಿದ್ದಾರೆ ಎಂದು ತಿಳಿಸಿದರು.
ಮುಖ್ಯ ಅತಿಥಿಗಳಾಗಿ ಆರ್ಎಸ್ಎಸ್ ಭಾರತೀಯ ವ್ಯವಸ್ಥಾ ಪ್ರಮುಖ ಮಂಗೇಶ್ ಭೇಂಡೆ, ಬಸವರಾಜ ಬೊಮ್ಮಾಯಿ, ಸಿ.ಸಿ. ಪಾಟೀಲ, ಡಾ. ಎಚ್.ಕೆ. ಪಾಟೀಲ, ಎಸ್.ಎಸ್. ಪಾಟೀಲ, ಡಿ.ಆರ್. ಪಾಟೀಲ, ದೊಡ್ಡನಗೌಡ ಪಾಟೀಲ, ಪಿ.ಜಿ.ಆರ್. ಸಿಂಧ್ಯಾ, ಎಂ.ಆರ್. ಹುಲಿನಾಯಕರ್, ಡಾ. ತೇಜಸ್ವಿ ಕಟ್ಟಿಮನಿ ಹಾಗೂ ಮಲ್ಲಿಕಾರ್ಜುನ ಸಿದ್ದಣ್ಣವರ ಭಾಗವಹಿಸಲಿದ್ದಾರೆ ಎಂದರು.
ಈ ಸಂದರ್ಭದಲ್ಲಿ ಮಾತನಾಡಿದ ಡಾ. ಡಿ.ಬಿ. ಗವಾನಿ, ಗ್ರಾಮೀಣ ಭಾಗದ ಸಾವಿರಾರು ವಿದ್ಯಾರ್ಥಿಗಳಿಗೆ ಕನಕದಾಸ ಶಿಕ್ಷಣ ಸಮಿತಿ ಗುಣಮಟ್ಟದ ಶಿಕ್ಷಣ ನೀಡಿದೆ. ಈ ಸಂಸ್ಥೆಯಲ್ಲಿ ವಿದ್ಯಾಭ್ಯಾಸ ಮಾಡಿದ ಅನೇಕರು ಇಂದು ಶಿಕ್ಷಕರು, ಸಮಾಜಸೇವಕರು ಹಾಗೂ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ್ದಾರೆ. ಡಾ. ದಂಡಿನ್ ಅವರ ಅಗಲಿಕೆಯಿಂದ ಶಿಕ್ಷಣ ಕ್ಷೇತ್ರಕ್ಕೆ ತುಂಬಲಾರದ ನಷ್ಟವಾಗಿದೆ. ಅವರ ನೆನಪಿಗಾಗಿ ಸ್ಮಾರಕ ಭವನ ನಿರ್ಮಿಸುವ ಉದ್ದೇಶ ಹೊಂದಲಾಗಿದೆ ಎಂದು ಹೇಳಿದರು.
ಮೈದುಂಬಿ ಹರಿಯುತ್ತಿರುವ ಘಟಪ್ರಭಾ ನದಿ: ಭರ್ತಿ ಹಂತದಲ್ಲಿ ಹಿಡಕಲ್ ಜಲಾಶಯ
ಎಚ್ಚರ ಅನಾಹುತಕ್ಕೆ ಕೈ ಮಾಡಿ ಕರೆಯುತ್ತಿದೆ: ರಸ್ತೆಯ ಭೂಗತ ವಿದ್ಯುತ್ ತಂತಿಯಿಂದ ಹೊರಬರುತ್ತಿದೆ ಬೆಂಕಿ ಕಿಡಿ-ಹೊಗೆ
ಹುಕ್ಕೇರಿ ತಾಲೂಕಿನ ಅತಿ ಹಿರಿಯ 107 ವಯಸ್ಸಿನ ನಾಗರಿಕ ನಿಜಪ್ಪ ಜಾಡರ್ ವಿಧಿವಶ
ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕಾಗಿ ಜೋರಾದ ಮುಸುಕಿನ ಗುದ್ದಾಟ: ಕೆಪಿಸಿಸಿ ಅಧ್ಯಕ್ಷರ ಮುಂದೆ ಲಾಬಿ
ಒಬ್ಬರ ಆಸ್ತಿ ಇನ್ನೊಬ್ಬರಿಗೆ ಮಾರಾಟ: ನೋಂದಣಿ ಕಚೇರಿಯಲ್ಲಿ ನಕಲಿ ಮಾಲೀಕನಾಗಿ ವಂಚಿಸಿದ ಆರೋಪಿ ಬಂಧನ
ಮಾಡಿಗುಂಜಿ ಗ್ರಾಮದಲ್ಲಿ ಚಿರತೆ ಪ್ರತ್ಯಕ್ಷ; ಗ್ರಾಮಸ್ಥರಲ್ಲಿ ಆತಂಕ, ಚಿರತೆ ಸೆರೆಗೆ ಅರಣ್ಯ ಇಲಾಖೆ ಬೋನ್ ಅಳವಡಿಕೆ 