ದಂಪತಿ ಮತ್ತು ಮಗಳ ಭೀಕರ ಕೊಲೆ
Triple murder in Delhi's Deoli
ನವದೆಹಲಿ 04: ದೆಹಲಿಯ ದಿಯೋಲಿಯಲ್ಲಿ ತ್ರಿವಳಿ ಕೊಲೆ ನಡೆದಿದೆ. ದಂಪತಿ ಮತ್ತು ಪುತ್ರಿಯನ್ನು ಚಾಕುವಿನಿಂದ ಇರಿದು ಬರ್ಬರವಾಗಿ ಹತ್ಯೆ ಮಾಡಿದ್ದಾರೆ. ಮೊದಲ ಮಹಡಿಯಲ್ಲಿ ಗಂಡನ ಶವ ಪತ್ತೆಯಾಗಿದ್ದು, ನೆಲ ಮಹಡಿಯಲ್ಲಿ ಪತ್ನಿ ಮತ್ತು ಮಗಳ ಶವ ಪತ್ತೆಯಾಗಿದೆ.
ಮಾಧ್ಯಮಗಳೊಂದಿಗೆ ಮಾತನಾಡಿದ ದಕ್ಷಿಣ ದೆಹಲಿ ಜಿಲ್ಲೆಯ ಡಿಸಿಪಿ ಅಂಕಿತ್ ಚೌಹಾಣ್, ಬೆಳಿಗ್ಗೆ 7:00ರ ಸುಮಾರಿಗೆ ಕರೆ ಬಂದಿದ್ದು, ಅದರಲ್ಲಿ ಮೂವರಿಗೆ ಇರಿದು ಕೊಲೆ ಮಾಡಲಾಗಿದೆ ಎಂದು ಹೇಳಲಾಗಿತ್ತು. ಮನೆಯ ಮಗನೇ ಕರೆ ಮಾಡಿದ್ದನು. ವಿಚಾರಿಸಿದಾಗ ತಾನೂ ಬೆಳಗಿನ ವಾಕಿಂಗ್ಗೆ ಹೋಗಿದ್ದೆ ಎಂದು ಮಗ ಹೇಳಿದ್ದು ಮನೆಗೆ ಹಿಂತಿರುಗಿ ಬಂದಾಗ ಮೂವರೂ ಕೊಲೆಯಾಗಿರುವುದು ಕಂಡೆ ಎಂದು ಹೇಳಿದ್ದನು. ಸ್ಥಳಕ್ಕೆ ಎಫ್ಎಸ್ಎಲ್ ತಂಡವನ್ನು ಕರೆಸಲಾಗಿದ್ದು, ಎಲ್ಲ ಸಂಗತಿಗಳನ್ನು ಆಳವಾಗಿ ಪರಿಶೀಲಿಸಲಾಗುತ್ತಿದೆ ಎಂದು ಡಿಸಿಪಿ ಅಂಕಿತ್ ಚೌಹಾಣ್ ತಿಳಿಸಿದ್ದಾರೆ.
ಮನೆಯಲ್ಲಿ ಯಾವುದೇ ರೀತಿಯ ವಿಧ್ವಂಸಕ ಕೃತ್ಯ ನಡೆದಿರುವ ಕುರುಹುಗಳು ಪತ್ತೆಯಾಗಿಲ್ಲ ಎಂದು ಡಿಸಿಪಿ ತಿಳಿಸಿದ್ದಾರೆ. ಹಂತಕನು ಮನೆಗೆ ಹೇಗೆ ಪ್ರವೇಶಿಸಿದ್ದಾನೆ ಎಂಬುದನ್ನು ಕಂಡುಹಿಡಿಯಲು ನಾವು ತನಿಖೆ ನಡೆಸುತ್ತಿದ್ದೇವೆ. ಎಲ್ಲಾ ಬೀಗಗಳು ಒಳಗಿನಿಂದ ಲಾಕ್ ಆಗಿದ್ದವು, ಆದರೆ ಮೇಲಿನ ಛಾವಣಿಯ ಬೀಗ ಒಳಗಿನಿಂದ ತೆರೆದಿರುವುದು ಕಂಡು ಬಂದಿದೆ ಎಂದು ಡಿಸಿಪಿ ತಿಳಿಸಿದ್ದಾರೆ. ಕೊಲೆಗಾರ ಹರಿತವಾದ ಆಯುಧ ಬಳಸಿದ್ದಾನೆ ಎಂದು ಡಿಸಿಪಿ ತಿಳಿಸಿದ್ದಾರೆ. ಸುಮಾರು ಒಂದೂಕಾಲು ಗಂಟೆಯಲ್ಲಿ ಇಷ್ಟೆಲ್ಲಾ ಘಟನೆ ನಡೆದಿದೆ.
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ 