ಧಾರವಾಡ ಜಿಲ್ಲೆಯಲ್ಲಿ ಇಬ್ಬರು ಕೊರೊನಾ ಪೀಡಿತರು ಗುಣಮುಖ-ಆಸ್ಪತ್ರೆಯಿಂದ ಬಿಡುಗಡೆ
ಧಾರವಾಡ ಮೇ.20, ಕೋವಿಡ್-19 ವೈರಸ್ ನಿಂದ ಗುಣಮುಖರಾಗಿರುವ ಇಬ್ಬರು ವ್ಯಕ್ತಿಗಳನ್ನು ಹುಬ್ಬಳ್ಳಿಯ ಕಿಮ್ಸ್ ನಿಂದ ಮಂಗಳವಾರ ಬಿಡುಗಡೆ ಮಾಡಲಾಗಿದೆ ಎಂದು ಜಿಲ್ಲಾಧಿಕಾರಿಗಳಾದ ದೀಪಾ ಚೋಳನ್ ತಿಳಿಸಿದ್ದಾರೆ.ಕೋವಿಡ್ ಪಾಸಿಟಿವ್ ದೃಢಪಟ್ಟಿದ್ದ ಹುಬ್ಬಳ್ಳಿ ಮುಲ್ಲಾ ಓಣಿಯ ಪೀಡಿತ-430 (30 ವರ್ಷ, ಮಹಿಳೆ) ಹಾಗೂ ಆಝಾದ್ ಕಾಲನಿಯ ಪೀಡಿತ-431( 13 ವರ್ಷ,ಬಾಲಕಿ) ಇಬ್ಬರು ಸಂಪೂರ್ಣ ಗುಣಮುಖರಾಗಿದ್ದಾರೆ.24 ಗಂಟೆಗಳ ಅಂತರದಲ್ಲಿ ಎರಡು ಬಾರಿ ಅವರು ಗಂಟಲು ದ್ರವ ಪರೀಕ್ಷೆ ಮಾಡಿದಾಗ ಕೋವಿಡ್ ನೆಗೆಟಿವ್ ವರದಿ ಬಂದಿದೆ. ಎಕ್ಸ್ ರೇ ಮೂಲಕ ಪರೀಕ್ಷೆ ಮಾಡಿ ಶ್ವಾಸಕೋಶದ ತೊಂದರೆ ಇಲ್ಲ ಎಂಬುದನ್ನು ವೈದ್ಯರು ದೃಢಪಡಿಸಿದ್ದರಿಂದ ಇವರನ್ನು ಆಸ್ಪತ್ರೆಯಿಂದ ಬಿಡುಗಡೆ ಮಾಡಲಾಗಿದೆ. ಜಿಲ್ಲೆಯಲ್ಲಿ ಇದುವರೆಗೆ 09 ಜನ ಕೋವಿಡ್ ನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ.ಸದ್ಯ ಜಿಲ್ಲೆಯ 17 ಜನ ಕಿಮ್ಸ್ ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಚೇತರಿಸಿಕೊಳ್ಳುತ್ತಿದ್ದಾರೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 