ಮಹಾಲಿಂಗಪುರದಲ್ಲಿ ರಾಷ್ಟ್ರೋತ್ಥಾನ ಪರಿಷತ್ ವತಿಯಿಂದ ಎರಡು ಕೃತಿಗಳ ಲೋಕಾರೆ್ಣ
Two books released by Rashtrotthana Parishat in Mahalingapura
ಲೋಕದರ್ಶನ ವರದಿ
ಮಹಾಲಿಂಗಪುರ, ಜು. 12: ರಾಷ್ಟ್ರಭಕ್ತಿ, ಭಾರತೀಯ ಸಂಸ್ಕೃತಿ, ಇತಿಹಾಸ, ಶಿಕ್ಷಣ ಹಾಗೂ ಸಮಾಜಮುಖಿ ಚಿಂತನೆಗಳನ್ನು ಯುವಜನರಲ್ಲಿ ಬೆಳೆಸುವ ಉದ್ದೇಶದಿಂದ ರಾಷ್ಟ್ರೋತ್ಥಾನ ಪರಿಷತ್, ಬೆಂಗಳೂರು ಹಾಗೂ ರಾಷ್ಟ್ರೋತ್ಥಾನ ಬಳಗ, ಬಾಗಲಕೋಟೆ ಜಿಲ್ಲೆ ಆಶ್ರಯದಲ್ಲಿ ಸ್ಥಳೀಯ ಕೆಎಲ್ಇ ಪಾಲಿಟೆಕ್ನಿಕ್ ಕಾಲೇಜಿನ ಸಭಾಂಗಣದಲ್ಲಿ ಭಾನುವಾರ ಎರಡು ಕೃತಿಗಳ ಲೋಕಾರೆ್ಣ ಕಾರ್ಯಕ್ರಮ ನಡೆಯಿತು.
ಡಾ. ಬಾಬು ಕೃಷ್ಣಮೂರ್ತಿ ಮತ್ತು ಬೆಳೂರು ಸುದರ್ಶನ ರಚಿಸಿರುವ ‘ಅವಿಶ್ರಾಂತ ಧ್ಯೇಯಜೀವಿ ಎಂ.ಸಿ. ಜಯದೇವ: ೈ್ದು್ದೂಹಿ್ಪೂೂ್ದೃ' ಹಾಗೂ ಎಸ್.ಆರ್. ರಾಮಸ್ವಾಮಿ ಅವರ ‘ಇತಿಹಾಸದ ಸೆರೆಗು’ ಕೃತಿಗಳನ್ನು ಲೋಕಾರೆ್ಣ ಮಾಡಲಾಯಿತು.
ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಮಾತನಾಡಿದ ಯುವ ಬ್ರಿಗೇಡ್ ರಾಜ್ಯ ಪ್ರಖಲ್ಪ ಪ್ರಮುಖ ಹಾಗೂ ಪ್ರಶಿಕ್ಷಣಾರ್ಥಿ ಸಂಪನ್ಮೂಲ ವ್ಯಕ್ತಿ ಕಿರಣ್ ರಾಮ್, “ಎಂ.ಸಿ. ಜಯದೇವ ಅವರ ಜೀವನವು ಕೇವಲ ವ್ಯಕ್ತಿಯ ಬದುಕಿನ ಕಥೆಯಲ್ಲ; ರಾಷ್ಟ್ರಸೇವೆಗೆ ಸಮರ್ಿತವಾದ ಆದರ್ಶ ಜೀವನಗಾಥೆಯಾಗಿದೆ” ಎಂದು ಹೇಳಿದರು.
ಜಯದೇವ ಅವರು ಯಾವುದೇ ಪ್ರಚಾರ ಅಥವಾ ಪ್ರಶಂಸೆಯನ್ನು ಬಯಸದ ನಿಸ್ವಾರ್ಥ ಸಮಾಜಸೇವಕರಾಗಿದ್ದು, ತಮ್ಮ ಜೀವನವನ್ನು ರಾಷ್ಟ್ರಸೇವೆಗೆ ಅರ್ಿಸಿದ್ದರು. “ಮೊದಲು ದೇಶ, ನಂತರ ಮನೆ; ದೇಶ ಉಳಿದರೆ ಮನೆ ಉಳಿಯುತ್ತದೆ” ಎಂಬ ಅವರ ಧ್ಯೇಯವಾಕ್ಯ ಇಂದಿನ ಯುವಜನತೆಗೆ ಮಾರ್ಗದರ್ಶಿಯಾಗಬೇಕು ಎಂದು ಅವರು ತಿಳಿಸಿದರು.
ಎಸ್.ಆರ್. ರಾಮಸ್ವಾಮಿ ಅವರ ‘ಇತಿಹಾಸದ ಸೆರೆಗು’ ಕೃತಿಯ ಕುರಿತು ಮಾತನಾಡಿದ ಅವರು, ಭಾರತದ ಸಾಂಸ್ಕೃತಿಕ ಪರಂಪರೆ, ವಿದೇಶಿ ಆಕ್ರಮಣಗಳು, ಸ್ವಾತಂತ್ರ್ಯ ಹೋರಾಟ, ರಾಷ್ಟ್ರೀಯ ಪುನರುತ್ಥಾನ ಹಾಗೂ ಸಮಕಾಲೀನ ರಾಷ್ಟ್ರೀಯ ವಿಚಾರಗಳನ್ನು ಸಮಗ್ರವಾಗಿ ವಿಶ್ಲೇಷಿಸಿರುವ ಈ ಕೃತಿ ಇತಿಹಾಸ ಮಾತ್ರವಲ್ಲ, ಭವಿಷ್ಯದ ಭಾರತ ನಿರ್ಮಾಣಕ್ಕೂ ಮಾರ್ಗದರ್ಶಿಯಾಗಿದೆ ಎಂದು ಹೇಳಿದರು.
ಅನಾಮಧೇಯ ಶವ ಪತ್ತೆ: ಮಹಿಳೆ ಕೊಲೆ ಪ್ರಕರಣ ಭೇದಿಸಿದ ಸಂಕೇಶ್ವರ ಪೊಲೀಸರು : ಆರೋಪಿ ಬಂಧನ
ಶಿವಕುಮಾರ್–ಸಿದ್ದರಾಮಯ್ಯ ಚರ್ಚೆ; ಕರ್ನಾಟಕ ಸಂಪುಟ ವಿಸ್ತರಣೆ ಕುರಿತ ಊಹಾಪೋಹಗಳಿಗೆ ಮತ್ತಷ್ಟು ಬಲ
ಶ್ರೀವಾರಿ ದರ್ಶನ, ವಸತಿ ಹಾಗೂ ಸೇವೆಗಳ ಬುಕ್ಕಿಂಗ್ಗೆ ಅಧಿಕೃತ ಟಿಟಿಡಿ ವೆಬ್ಸೈಟ್ನ್ನೇ ಬಳಸುವಂತೆ ಭಕ್ತರಿಗೆ ಟಿಟಿಡಿ ಮನವಿ
ಗಿಲ್ ಗಾಯದ ಆತಂಕದ ನಡುವೆ ಭಾರತಕ್ಕೆ ಏಕದಿನ ಸರಣಿ ಗೆಲ್ಲುವ ಅವಕಾಶ
ಜಿಎಸ್ಟಿ ಇಳಿಕೆ, ಸುಲಭ ಹಣಕಾಸು ನೆರವಿನಿಂದ ಆಟೋ ಉದ್ಯಮದ ಪ್ರಮುಖ ವಿಭಾಗಗಳಲ್ಲಿ ದಾಖಲೆಯ ಮೊದಲ ತ್ರೈಮಾಸಿಕ ಮಾರಾಟ
ಬಿಗಿ ಭದ್ರತೆಯ ನಡುವೆ 6,200ಕ್ಕೂ ಹೆಚ್ಚು ಅಮರನಾಥ ಯಾತ್ರಿಕರು ಜಮ್ಮುವಿನಿಂದ ಪ್ರಯಾಣ ಬೆಳೆಸಿದರು 