ಎರಡು ಹುಲ್ಲಿನ ಬಣವೆಗೆ ಬೆಂಕಿ: ಲಕ್ಷಾಂತರ ರೂ.ನಷ್ಟ
ತುಮಕೂರು, ಮೇ12,ಆಕಸ್ಮಿಕ ಬೆಂಕಿ ಬಿದ್ದ ಪರಿಣಾಮ ಎರಡು ಹುಲ್ಲಿನ ಬಣವೆ ಸುಟ್ಟು ಕರಕಲಾಗಿರುವ ಘಟನೆ ಜಿಲ್ಲೆಯ ತುರುವೇಕೆರೆ ತಾಲೂಕಿನ ಸಂಗಲಾಪುರದಲ್ಲಿ ಮಂಗಳವಾರ ಸಂಭವಿಸಿದೆ.
ಸಂಗಲಾಪುರದ ಮಹಾಲಿಂಗಪ್ಪ ಹಾಗೂ ರುದ್ರೇಶ್ ಎಂಬುವವರಿಗೆ ಸೇರಿದ ಹುಲ್ಲಿನ ಬಣವೆ ಇದಾಗಿದೆ ಎಂದು ತಿಳಿದು ಬಂದಿದೆ.ವಿಷಯ ತಿಳಿಯುತ್ತಿದ್ದಂತೆ ಅಗ್ನಿ ಶಾಮಕ ಸಿಬ್ಬಂದಿ ಸ್ಥಳಕ್ಕೆ ದೌಡಾಯಿಸಿ ಹರಸಹಾಸ ಪಟ್ಟು ಬೆಂಕಿ ನಂದಿಸಿದ್ದಾರೆ. ಆದರೆ ಬಹುತೇಕ ಹುಲ್ಲು ಬೆಂಕಿಗೆ ಆಹುತಿಯಾಗಿದೆ.ಎರಡು ಹುಲ್ಲು ಬಣವೆಗೆ ಬೆಂಕಿ ಬಿದ್ದ ಹಿನ್ನೆಲೆಯಲ್ಲಿ ಲಕ್ಷಾಂತರ ರೂ. ನಷ್ಟವಾಗಿದೆ ಎಂದು ಅಂದಾಜಿಸಲಾಗಿದೆ.ಘಟನೆಗೆ ಸಂಬಂಧಿಸಿದಂತೆ ತುರುವೇಕೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 