ಮಂಗಳೂರಿನಲ್ಲಿ ಕೊವಿಡ್-19 ಸೋಂಕಿಗೆ ಇಬ್ಬರು ಬಲಿ
ಮಂಗಳೂರು, ಜೂನ್ 28: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾನುವಾರ ಕೊವಿಡ್-19 ಸೋಂಕಿನಿಂದ ಮತ್ತಿಬ್ಬರು ಸಾವನ್ನಪ್ಪುವುದರೊಂದಿಗೆ ಸಾವಿನ ಸಂಖ್ಯೆ 12 ಕ್ಕೆ ಏರಿದೆ.ಮೃತರ ಪೈಕಿ ಬಂಟ್ವಾಳ ಮೂಲದ 57 ವರ್ಷದ ಮಹಿಳೆ ಮತ್ತು ಸೂರತ್ಕಲ್ ನ 31 ವರ್ಷದ ಯುವಕ ಸೇರಿದ್ದಾನೆ ಎಂದು ಅಧಿಕೃತ ಮೂಲಗಳು ತಿಳಿಸಿವೆ.ಶನಿವಾರ ಒಂದೇ ಕುಟುಂಬದ 16 ಸದಸ್ಯರು ಸೇರಿದಂತೆ 49 ಜನರಿಗೆ ಕರೋನವೈರಸ್ ಸೋಂಕು ದೃಢಪಟ್ಟಿದೆ.
ಇದರೊಂದಿಗೆ ದಕ್ಷಿಣ ಕನ್ನಡದಲ್ಲಿ ಪ್ರಕರಣಗಳ ಒಟ್ಟು ಪ್ರಕರಣಗಳ ಸಂಖ್ಯೆ 566 ಕ್ಕೆ ಏರಿದೆ. 17 ಮಾದರಿಗಳ ಪರೀಕ್ಷೆಗಳ ಪೈಕಿ 7 ಪುರುಷರು,4 ಮಕ್ಕಳು, 4 ಮಹಿಳೆಯರು ಮತ್ತು ವೃದ್ಧೆ ಸೇರಿದಂತೆ 16 ಮಂದಿಗೆ ಸೋಂಕು ದೃಢಪಟ್ಟಿದೆ. ಮಹಿಳಾ ಉದ್ಯೋಗಿಯೊಬ್ಬರಿಗೆ ಶನಿವಾರ ಕರೋನವೈರಸ್ ಸೋಂಕು ದೃಢಪಟ್ಟ ನಂತರ ಅಧಿಕಾರಿಗಳು ಉಲ್ಲಾಳದ ಮಾಸ್ತಿಕಟ್ಟೆ ಪ್ರದೇಶ ಮತ್ತು ಉಜಿರೆಯ ಪೆಟ್ರೋಲ್ ಬಂಕ್ ಸೀಲ್ಡೌನ್ ಮಾಡಿದ್ದಾರೆ. ಉಳ್ಳಾಲ ಪಟ್ಟಣವನ್ನು ಕಂಟೈನ್ಮೆಂಟ್ ವಲಯವೆಂದು ಘೋಷಿಸಲಾಗಿದೆ. ಆರೋಗ್ಯ ಕಾರ್ಯಕರ್ತರು ಕೋಟೆಪುರ, ಮೊಗವೀರ ಪಟ್ಟಣ, ಅಬ್ಬಕ್ಕ ವೃತ್ತ, ಕಲ್ಲಾಪು, ಪಂಡಿತ್ಹೌಸ್ ಮತ್ತು ಕುತರ್ ಮುಂತಾದ ಪ್ರದೇಶಗಳನ್ನು ಸ್ಯಾನಿಟೈಸ್(ಸ್ಚಚ್ಛ) ಮಾಡುತ್ತಿದ್ದಾರೆ.
ಬೈಲಹೊಂಗಲದಲ್ಲಿ ಮಳೆಯ ಅರ್ಭಟ : ನದಿಯಂತಾದ ರಸ್ತೆಗಳು, ನೀರಿನ ಸೆಳೆತಕ್ಕೆ ಸಿಲುಕಿದ ದ್ವಿಚಕ್ರ ವಾಹನಗಳು
ಕನ್ನಡಪರ ನಿರ್ಣಯಕ್ಕೆ ಹಿಂದೇಟು : ಪಾಲಿಕೆಯಲ್ಲಿ ನಿರ್ಣಯ ಮಂಡಿಸಲು ಮುಂದಾದ ಶಾಸಕ ಸೇಠ್
ಒಬ್ಬರಿಗೆ ಒಂದೇ ಹುದ್ದೆ ಕಾಂಗ್ರೆಸ್ ಪಕ್ಷದ ನಿಯಮದಿಂದ ಕೆಪಿಸಿಸಿ ಅಧ್ಯಕ್ಷ ಸ್ಥಾನ ಕೈ ತಪ್ಪಿದೆ : ಸಚಿವ ಸತೀಶ ಜಾರಕಿಹೊಳಿ
ಖಾತೆ ಮುಟ್ಟುಗೋಲಾದರೂ ಶಿವಂ ಸಂಸ್ಥೆಗೆ ಜನರಿಂದ ಇನ್ನೂ ದುಡ್ಡು ಠೇವಣಿ : ವಂಚನೆ ಜಾಲದಿಂದ ದೂರ ಇರಿ, ಜನರಿಗೆ ಸಿಐಡಿ ಡಿಐಜಿಪಿ ಗುಳೇದ್ ಮನವಿ
ಬಹುಕೋಟಿ ಹಣ ವಂಚನೆ : ಆದಿತ್ಯರಾಜ್ ಕೇಸು ಸಿಐಡಿಗೆ, ಸಿಇಓ ವಿರುದ್ಧ ಲುಕ್ ಔಟ್ ನೋಟಿಸ್ ಜಾರಿ, ಏರ್ಪೋರ್ಟ್ ಗಳಿಗೆ ಮಾಹಿತಿ ರವಾನೆ
ಚಿನ್ನ ದೋಚಿದ್ದ ಖದೀಮನ ಬಂಧನ : 15.73 ಲಕ್ಷ ಮೌಲ್ಯದ 103.97 ಗ್ರಾಂ ಚಿನ್ನ ವಶ 