ಕಾರವಾರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
Two tourists rescued from drowning in Karwar
ಕಾರವಾರ 14 : ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರನ್ನು ಸ್ಥಳೀಯ ಯುವಕರು ರಕ್ಷಣೆ ಮಾಡಿದ ಘಟನೆ ಇಲ್ಲಿನ ರವೀಂದ್ರನಾಥ್ ಟಾಗೋರ್ ಕಡಲ ತೀರದಲ್ಲಿ ನಡೆದಿದೆ. ಇಂದು ಬೆಳಿಗ್ಗೆ ರವೀಂದ್ರನಾಥ್ ಕಡಲ ತೀರದಲ್ಲಿ ಪ್ರವಾಸಿಗರು ಸಮುದ್ರಕ್ಕೆ ಇಳಿದಿದ್ದರು. ಮಳೆಗಾಲ ಸಮೀಪಿಸುತ್ತಿದ್ದಂತೆ ಸಮುದ್ರದ ಅಲೆಗಳ ಅಬ್ಬರ ಮತ್ತು ವೇಗ ಹೆಚ್ಚುತ್ತದೆ ಎಂಬುದನ್ನು ಅರಿಯದೆ ಪ್ರವಾಸಿಗರು ಕಡಲಿಗೆ ಮೋಜಿಗಾಗಿ ಇಳಿದಿದ್ದರು .
ಪರಿಣಾಮ ಅಲೆಗಳ ಅಬ್ಬರಕ್ಕೆ ಪ್ರವಾಸಿಗರು ಸಿಲುಕಿದರು. ಕಡಲ ತೀರದಲ್ಲಿ ಕ್ರಿಕೆಟ್ ಆಡುತ್ತಿದ್ದ ಸ್ಥಳೀಯ ಯುವಕರು ಸಮುದ್ರಕ್ಕೆ ಧುಮುಕಿ ಮುಳುಗುತ್ತಿದ್ದ ಓರ್ವಯುವಕ ಹಾಗೂ ಒಬ್ಬ ಬಾಲಕನನ್ನು ರಕ್ಷಣೆ ಮಾಡಿದರು. ಗೌತಮ್ ಬಾನಾವಳಿ, ಸಾಯಿನಾಥ್, ವಿಘ್ನೇಶ್, ಅಮನ್, ಅಜಯ್ ಎಂಬ ಯುವಕರು ಜೀವದ ಹಂಗು ತೊರೆದು ಪ್ರವಾಸಿಗರನ್ನು ರಕ್ಷಣೆ ಮಾಡಿದರು. ಕಡಲ ತೀರದಲ್ಲಿ ಸಮುದ್ರಕ್ಕೆ ಮಳೆಗಾಲ ಸಮೀಪಿಸುವ ಮುನ್ನ ಇಳಿಯಬಾರದು ಎಂದು ಪ್ರವಾಸಿಗರಿಗೆ ಸೂಚಿಸಿದರು. ಪ್ರಾಣ ಉಳಿದ ಕ್ಷಣ ನೆನೆದು ಇತರೆ ಪ್ರವಾಸಿಗರು ನಿಟ್ಟುಸಿರು ಬಿಟ್ಟರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 