ಯುಪಿ, ಮದ್ಯಪ್ರದೇಶದಲ್ಲಿ ಪ್ರತ್ಯೇಕ ಅಪಘಾತ: 14 ಸಾವು
ನವದೆಹಲಿ , ಮೇ 14,ಉತ್ತರ ಪ್ರದೆಶದಲ್ಲಿ ಮತ್ತು ಮದ್ಯಪ್ರದೇಶದಲ್ಲಿ ಸಂಭವಿಸಿದ ಪ್ರತ್ಯೇಕ ರಸ್ತೆ ಅಪಘಾತದಲ್ಲಿ ಒಟ್ಟು 14 ಜನ ದುರ್ಣರಣಕ್ಕೀಡಾಗಿದ್ದಾರೆ. ಮಹಾರಾಷ್ಟ್ರದಿಂದ ಉತ್ತರ ಪ್ರದೇಶಕ್ಕೆ ಟ್ರಕ್ ನಲ್ಲಿ ಪ್ರಯಾಣಿಸುತ್ತಿದ್ದ ಎಂಟು ವಲಸೆ ಕಾರ್ಮಿಕರು ರಸ್ತೆಯಲ್ಲಿ ಸಾವನ್ನಪ್ಪಿದ್ದು, 55 ಕಾರ್ಮಿಕರು ಗಾಯಗೊಂಡಿದ್ದಾರೆ. ವಲಸೆ ಕಾರ್ಮಿಕರು ಪ್ರಯಾಣಿಸುತ್ತಿದ್ದ ಕಂಟೇನರ್ ಟ್ರಕ್ ಮಧ್ಯಪ್ರದೇಶದ ಗುನಾದ ಕ್ಯಾಂಟ್ ಪ್ರದೇಶದಲ್ಲಿ ಬಸ್ಗೆ ಡಿಕ್ಕಿ ಹೊಡೆದಿದೆ. ವಲಸೆ ಕಾರ್ಮಿಕರ ತಂಡ ಮಹಾರಾಷ್ಟ್ರದಿಂದ ಉತ್ತರ ಪ್ರದೇಶಕ್ಕೆ ಪ್ರಯಾಣಿಸುತ್ತಿತ್ತು ಎನ್ನಲಾಗಿದೆ.ಅಪಘಾತದಲ್ಲಿ 8 ಮಂದಿ ಮೃತಪಟ್ಟಿದ್ದುಇನ್ನು ಹಲವರು ಗಂಭೀರವಾಗಿ ಗಾಯಗೊಂಡಿದ್ದಾರೆ. ವಲಸೆ ಕಾರ್ಮಿಕ ಕುಟುಂಬಗಳು ತಡರಾತ್ರಿ ಬಸ್ಗೆ ಡಿಕ್ಕಿ ಹೊಡೆದ ಲಾರಿಯಲ್ಲಿ ಪ್ರಯಾಣಿಸುತ್ತಿದ್ದವು. ತಕ್ಷಣ ಕಂಟೇನರ್ ಟ್ರಕ್ ನ ಚಾಲಕ ಸ್ಥಳದಿಂದ ಪರಾರಿಯಾಗಿದ್ದಾನೆ. ರಾತ್ರಿ ಉತ್ತರ ಪ್ರದೇಶದ ಮುಜಫರ್ನಗರದಲ್ಲಿ ಸಂಭವಿಸಿದ ಮತ್ತೊಂದು ಅಪಘಾತದಲ್ಲಿ, ಪಂಜಾಬ್ನಿಂದ ಬಿಹಾರಕ್ಕೆ ಹೋಗುತ್ತಿದ್ದ 6 ವಲಸೆ ಕಾರ್ಮಿಕರ ಗುಂಪಿನ ಮೇಲೆ ಬಸ್ ಹರಿದು ಆರು ಜನ ಸಾವನ್ನಪ್ಪಿದ್ದಾರೆ
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 