ಕೊಲ್ಹಾಪುರದ ಶ್ರೀ ಮಹಾಲಕ್ಷ್ಮಿ ದೇವಸ್ಥಾನಕ್ಕೆ ಉದ್ಧವ್ ಠಾಕ್ರೆ ಭೇಟಿ : ವಿಶೇಷ ಪ್ರಾರ್ಥನೆ
ಕೊಲ್ಹಾಪುರ, ಜ 18 ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಶನಿವಾರ ಕೊಲ್ಹಾಪುರ ಶ್ರೀ ಮಹಾಲಕ್ಷ್ಮಿ ದೇವಸ್ಥಾನದಲ್ಲಿ ಪ್ರಾರ್ಥನೆ ಸಲ್ಲಿಸಿದರು. ಮುಖ್ಯಮಂತ್ರಿಯನ್ನು ಪಶ್ಚಿಮ ಮಹಾರಾಷ್ಟ್ರ ದೇವಸ್ತಾನ್ ಸಮಿತಿ ಅಧ್ಯಕ್ಷ ಮಹೇಶ್ ಜಾಧವ್ ಸ್ವಾಗತಿಸಿದರು.ಅವರೊಂದಿಗೆ ರಾಜ್ಯ ಸಚಿವ ರಾಜೇಂದ್ರ ಪಾಟೀಲ್-ಯಾದ್ರವ್ಕರ್, ಶಿವಸೇನೆ ಸಂಸದ ಧರಿಶೀಲ್ ಮಾನೆ, ಮಾಜಿ ಸಂಸದ ನಿವೇದಿತಾ ಮಾನೆ, ರಾಜ್ಯ ಯೋಜನಾ ಆಯೋಗದ ಕಾರ್ಯಾಧ್ಯಕ್ಷ ರಾಜೇಶ್ ಖಿರ್ಸಾಗರ್, ಕಲೆಕ್ಟರ್ ದೌಲತ್ ದೇಸಾಯಿ ಮತ್ತು ಪುರಸಭೆ ಆಯುಕ್ತ ಮಲ್ಲಿನಾಥ ಕಲ್ಶೆಟ್ಟಿ ಇದ್ದರು.ಶುಕ್ರವಾರ ಸಾಂಗ್ಲಿ ಜಿಲ್ಲೆಯಲ್ಲಿ ಪ್ರವಾಸ ಕೈಗೊಂಡ ಮುಖ್ಯಮಂತ್ರಿ ಉದ್ಧವ್ ಠಾಕ್ರೆ, ಇಂದು ಪುಣೆಗೆ ತೆರಳಿದ್ದಾರೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 