ಕಾಗವಾಡ ವಿಧಾನಸಭೆ ಕ್ಷೇತ್ರದ ಎಸ್ಎಲ್ಆರ್ ವೀಕ್ಷಕರಾಗಿ ಉಮೇಶ್ ಪಾಟೀಲ ನೇಮಕ
Umesh Patil appointed as SLR Observer for the Kagwad Assembly constituency
ಲೋಕದರ್ಶನ ವರದಿ
ಕಾಗವಾಡ 2: ಕಾಗವಾಡ ವಿಧಾನಸಭೆ ಕ್ಷೇತ್ರದ ಎಸ್ಎಲ್ಆರ್ ವೀಕ್ಷಕರಾಗಿ ಕಾಗವಾಡ ಬ್ಲಾಕ್ ಯುವ ಕಾಂಗ್ರೆಸ್ ಅಧ್ಯಕ್ಷ ಉಮೇಶ್ ಪಾಟೀಲ ಅವರನ್ನು ಚಿಕ್ಕೋಡಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಲಕ್ಷ್ಮಣರಾವ್ ಚಿಂಗಳೆ ನೇಮಕ ಮಾಡಿದ್ದಾರೆ. ಜುಗೂಳ ಗ್ರಾಮದ ನಿವಾಸಿಯಾಗಿರುವ ಉಮೇಶ್ ಪಾಟೀಲ ಅವರು ಹಲವು ವರ್ಷಗಳಿಂದ ಕಾಂಗ್ರೆಸ್ ಪಕ್ಷದ ಸಕ್ರಿಯ ಕಾರ್ಯಕರ್ತರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಪಕ್ಷ ಸಂಘಟನೆಯಲ್ಲಿ ತೊಡಗಿಸಿಕೊಂಡಿರುವ ಅವರ ಕಾರ್ಯವನ್ನು ಪರಿಗಣಿಸಿ ಕಳೆದ ವರ್ಷ ಕಾಗವಾಡ ಬ್ಲಾಕ್ ಯುವ ಕಾಂಗ್ರೆಸ್ ಅಧ್ಯಕ್ಷರಾಗಿ ನೇಮಕ ಮಾಡಲಾಗಿತ್ತು. ಈಗ ಪಕ್ಷ ಸಂಘಟನೆಗೆ ಮತ್ತಷ್ಟು ಬಲ ತುಂಬುವ ಉದ್ದೇಶದಿಂದ ಕಾಗವಾಡ ವಿಧಾನಸಭೆ ಕ್ಷೇತ್ರದ ಎಸ್ಎಲ್ಆರ್ ವೀಕ್ಷಕರ ಜವಾಬ್ದಾರಿಯನ್ನು ಪಕ್ಷವು ಅವರಿಗೆ ವಹಿಸಿದೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 