ಅವಿರೋಧವಾಗಿ ಅಧ್ಯಕ್ಷ- ಉಪಾಧ್ಯಕ್ಷರಾಗಿ ಆಯ್ಕೆ
ಲೋಕದರ್ಶನ ವರದಿ
ರಾಮದುರ್ಗ 01: ಕೃಷಿ ಉತ್ಪನ್ನ ಮಾರುಕಟ್ಟ ಸಮಿತಿಯ ಮೂರನೇ ಅವಧಿಗೆ ಅಧ್ಯಕ್ಷರಾಗಿ ದ್ಯಾವಪ್ಪ ಬೆಳವಡಿ ಮತ್ತು ಉಪಾಧ್ಯಕ್ಷರಾಗಿ ಪ್ರಕಾಶ ಬರದೇಲಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಇಂದು ನಡೆದ ಚುನಾವಣೆಯಲ್ಲಿ ಅಧ್ಯಕ್ಷ ಸ್ಥಾನಕ್ಕೆ ಬಿಜೆಪಿಯ ದ್ಯಾವಪ್ಪ ಬೆಳವಡಿ ಮತ್ತು ಉಪಾಧ್ಯಕ್ಷ ಸ್ಥಾನಕ್ಕೆ ಪ್ರಕಾಶ ಬರದೇಲಿ ಮಾತ್ರ ನಾಮಪತ್ರ ಸಲ್ಲಿಸಿದ್ದು ಅವಿರೋಧವಾಗಿ ಆಯ್ಕೆಯಾಗಿದ್ದಾರೆ ಎಂದು ಚುನಾವಣಾಧಿಕಾರಿಯಾಗಿ ಕಾರ್ಯನಿವರ್ಾಹಿಸಿದ ತಹಶೀಲ್ದಾರ ಗೀರಿಶ ಸ್ವಾದಿ ತಿಳಿಸಿದರು. ಅಧ್ಯಕ್ಷರಾಗಿ ಚುನಾಯಿತಗೊಂಡ ದ್ಯಾಮಪ್ಪ ಬೆಳವಡಿ ಮಾತನಾಡುತ್ತಾ ಶಾಸಕ ಮಹಾದೇವಪ್ಪ ಯಾದವಾಡರ ಮಾರ್ಗದರ್ಶನ ಹಾಗೂ ಎಲ್ಲ ಸದಸ್ಯರರನ್ನು ವಿಶ್ವಾಸಕ್ಕೆ ತಗೆದುಕೊಂಡು ಎಪಿಎಮ್ಸಿಯ ಅಭಿವೃದ್ದಿ ಮತ್ತು ರೈತರ ಏಳಿಗೆಗೆ ಶ್ರಮಿಸುತ್ತೆನೆ ಎಂದು ನುಡಿದರು. ಶಾಸಕ ಮಹಾದೇವಪ್ಪ ಯಾದವಾಡ ಹಾಗೂ ತಾಲೂಕಿನ ಎಲ್ಲ ಜನಪ್ರತಿನಿಧಿಗಳೂ ನೂತನ ಅಧ್ಯಕ್ಷ ಮತ್ತು ಉಪಾಧ್ಯಕ್ಷರಿಗೆ ಅಭಿನಂದಿಸಿದರು.
ಬೆಳಗಾವಿಯ ಹೃದಯಭಾಗದಲ್ಲಿ ಚಿನ್ನಾಭರಣ ಅಂಗಡಿ ಲೂಟಿ : ಸ್ಥಳಕ್ಕೆ ಪೊಲೀಸರ ದೌಡು
ಕೌಟುಂಬಿಕ ಕಲಹ ಹಿನ್ನೆಲೆಯಲ್ಲಿ ಜೋಡಿ ಕೊಲೆ : ಗ್ರಾಮದಲ್ಲಿ ತ್ವೇಷಮಯ ವಾತಾವರಣ
ಪುನರ್ ಅಭಿವೃದ್ಧಿಗೊಂಡ ಚೆನ್ನೈ ಪಾರ್ಕ್ ಅಮೃತ್ ರೈಲು ನಿಲ್ದಾಣವನ್ನು ಜುಲೈ 17ರಂದು ಉದ್ಘಾಟಿಸಲಿರುವ ಪ್ರಧಾನಿ ಮೋದಿ
ಅನಾಮಧೇಯ ಶವ ಪತ್ತೆ: ಮಹಿಳೆ ಕೊಲೆ ಪ್ರಕರಣ ಭೇದಿಸಿದ ಸಂಕೇಶ್ವರ ಪೊಲೀಸರು : ಆರೋಪಿ ಬಂಧನ
ಶಿವಕುಮಾರ್–ಸಿದ್ದರಾಮಯ್ಯ ಚರ್ಚೆ; ಕರ್ನಾಟಕ ಸಂಪುಟ ವಿಸ್ತರಣೆ ಕುರಿತ ಊಹಾಪೋಹಗಳಿಗೆ ಮತ್ತಷ್ಟು ಬಲ
ಶ್ರೀವಾರಿ ದರ್ಶನ, ವಸತಿ ಹಾಗೂ ಸೇವೆಗಳ ಬುಕ್ಕಿಂಗ್ಗೆ ಅಧಿಕೃತ ಟಿಟಿಡಿ ವೆಬ್ಸೈಟ್ನ್ನೇ ಬಳಸುವಂತೆ ಭಕ್ತರಿಗೆ ಟಿಟಿಡಿ ಮನವಿ 