ಅಂಡರ್ -19 ವಿಶ್ವಕಪ್ : ದಿವ್ಯಾಂಶ್ ಬದಲಿಗೆ ಸಿದ್ಧೇಶ್ ವೀರ್ ಗೆ ಸ್ಥಾನ
ನವದೆಹಲಿ, ಜ.10: ಭುಜದ ಗಾಯದ ಸಮಸ್ಯೆಯಿಂದ ಬಳಲುತ್ತಿರುವ ಆಲ್ ರೌಂಡರ್ ದಿವ್ಯಾಂಶ್ ಜೋಶಿ ದಕ್ಷಿಣ ಆಫ್ರಿಕಾದಲ್ಲಿ ನಡೆಯಲಿರುವ 19 ವರ್ಷದೊಳಗಿನವರ ವಿಶ್ವಕಪ್ ತಂಡದಿಂದ ಹೊರಗುಳಿದಿದ್ದು, ಇವರ ಸ್ಥಾನವನ್ನು ಸಿದ್ಧೇಶ್ ವೀರ್ ತುಂಬಲಿದ್ದಾರೆ.
ಭಾರತದ ಕ್ರಿಕೆಟ್ ನಿಯಂತ್ರಣ ಮಂಡಳಿಯ (ಬಿಸಿಸಿಐ) ಕಿರಿಯರ ಆಯ್ಕೆ ಸಮಿತಿಯು ಈ ನಿರ್ಧಾರವನ್ನು ತೆಗೆದುಕೊಂಡಿದೆ. ಶುಕ್ರವಾರ ಈ ಬಗ್ಗೆ ಬಿಸಿಸಿಐ ಮಾಹಿತಿ ನೀಡಿದೆ. ದಕ್ಷಿಣ ಆಫ್ರಿಕಾ ವಿರುದ್ಧದ ಏಕದಿನ ಸರಣಿಯ ಮೊದಲ ಪಂದ್ಯದಲ್ಲಿ ಫೀಲ್ಡಿಂಗ್ ಮಾಡುವಾಗ ದಿವ್ಯಾಂಶ್ ಬಲ ಭುಜಕ್ಕೆ ಗಾಯ ಮಾಡಿಕೊಂಡಿದ್ದು, ಈ ಗಾಯವು ವಿಶ್ವಕಪ್ ಆಡುವ ಅವರ ಕನಸಿಗೆ ಪೆಟ್ಟು ನೀಡಿದೆ.
ಆಯ್ಕೆ ಸಮಿತಿ ದಿವ್ಯಾಂಶ್ ಬದಲಿಗೆ ಮಹಾರಾಷ್ಟ್ರದ ಸಿದ್ಧೇಶ್ ವೀರ್ ಅವರನ್ನು ಭಾರತ ತಂಡಕ್ಕೆ ಸೇರಿಸಿದೆ. ಉತ್ತರ ಪ್ರದೇಶದ ಪ್ರಿಯಮ್ ಗರ್ಗ್ವಿಶ್ವಕಪ್ನಲ್ಲಿ ಭಾರತ ತಂಡದ ನಾಯಕತ್ವ ವಹಿಸುಕೊಂಡಿದ್ದಾರೆ. ಈ ವಿಶ್ವಕಪ್ಗೆ ತಯಾರಿ ನಡೆಸಲು ಭಾರತ ನಾಲ್ಕು ದಿನಗಳ ಏಕದಿನ ಪಂದ್ಯಾವಳಿಯನ್ನು ಗೆದ್ದುಕೊಂಡಿದೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 