ಅಂಡರ್ -19 ವಿಶ್ವಕಪ್ : ದಿವ್ಯಾಂಶ್ ಬದಲಿಗೆ ಸಿದ್ಧೇಶ್ ವೀರ್ ಗೆ ಸ್ಥಾನ
ನವದೆಹಲಿ, ಜ.10: ಭುಜದ ಗಾಯದ ಸಮಸ್ಯೆಯಿಂದ ಬಳಲುತ್ತಿರುವ ಆಲ್ ರೌಂಡರ್ ದಿವ್ಯಾಂಶ್ ಜೋಶಿ ದಕ್ಷಿಣ ಆಫ್ರಿಕಾದಲ್ಲಿ ನಡೆಯಲಿರುವ 19 ವರ್ಷದೊಳಗಿನವರ ವಿಶ್ವಕಪ್ ತಂಡದಿಂದ ಹೊರಗುಳಿದಿದ್ದು, ಇವರ ಸ್ಥಾನವನ್ನು ಸಿದ್ಧೇಶ್ ವೀರ್ ತುಂಬಲಿದ್ದಾರೆ.
ಭಾರತದ ಕ್ರಿಕೆಟ್ ನಿಯಂತ್ರಣ ಮಂಡಳಿಯ (ಬಿಸಿಸಿಐ) ಕಿರಿಯರ ಆಯ್ಕೆ ಸಮಿತಿಯು ಈ ನಿರ್ಧಾರವನ್ನು ತೆಗೆದುಕೊಂಡಿದೆ. ಶುಕ್ರವಾರ ಈ ಬಗ್ಗೆ ಬಿಸಿಸಿಐ ಮಾಹಿತಿ ನೀಡಿದೆ. ದಕ್ಷಿಣ ಆಫ್ರಿಕಾ ವಿರುದ್ಧದ ಏಕದಿನ ಸರಣಿಯ ಮೊದಲ ಪಂದ್ಯದಲ್ಲಿ ಫೀಲ್ಡಿಂಗ್ ಮಾಡುವಾಗ ದಿವ್ಯಾಂಶ್ ಬಲ ಭುಜಕ್ಕೆ ಗಾಯ ಮಾಡಿಕೊಂಡಿದ್ದು, ಈ ಗಾಯವು ವಿಶ್ವಕಪ್ ಆಡುವ ಅವರ ಕನಸಿಗೆ ಪೆಟ್ಟು ನೀಡಿದೆ.
ಆಯ್ಕೆ ಸಮಿತಿ ದಿವ್ಯಾಂಶ್ ಬದಲಿಗೆ ಮಹಾರಾಷ್ಟ್ರದ ಸಿದ್ಧೇಶ್ ವೀರ್ ಅವರನ್ನು ಭಾರತ ತಂಡಕ್ಕೆ ಸೇರಿಸಿದೆ. ಉತ್ತರ ಪ್ರದೇಶದ ಪ್ರಿಯಮ್ ಗರ್ಗ್ವಿಶ್ವಕಪ್ನಲ್ಲಿ ಭಾರತ ತಂಡದ ನಾಯಕತ್ವ ವಹಿಸುಕೊಂಡಿದ್ದಾರೆ. ಈ ವಿಶ್ವಕಪ್ಗೆ ತಯಾರಿ ನಡೆಸಲು ಭಾರತ ನಾಲ್ಕು ದಿನಗಳ ಏಕದಿನ ಪಂದ್ಯಾವಳಿಯನ್ನು ಗೆದ್ದುಕೊಂಡಿದೆ.
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ
ಹಳೆದಿಗ್ಗೆವಾಡಿ ಗ್ರಾಮದ ಮಹಾದೇವ ಗಂಗಾಯಿ ಅಜ್ಜ ವಿಧಿವಶ 