ಹಸು ಕುರಿತ ವಿವಾದಾತ್ಮಕ ಹೇಳಿಕೆಗೆ ಕೇಂದ್ರ ಸಚಿವ ದಾನ್ವೆ ಸ್ಪಷ್ಟನೆ
ಔರಂಗಾಬಾದ್, ಅ 23: ಚುನಾವಣಾ ಪ್ರಚಾರದ ಸಂದರ್ಭದಲ್ಲಿ ವಿವಾದಾತ್ಮಕ ಹೇಳಿಕೆ ನೀಡಿದ ನಂತರ, ಕೇಂದ್ರ ರಾಜ್ಯ ಸಚಿವ ರಾವ್ ಸಾಹೇಬ್ ದಾನ್ವೆ ಅವರು ತಮ್ಮ ಭಾಷಣವನ್ನು ಕೆಲವು ವಾಹಿನಿಗಳು ತಿರುಚಿವೆ ಎಂದು ಬುಧವಾರ ಹೇಳಿದ್ದಾರೆ.
ಮರಾಠವಾಡ ಪ್ರದೇಶದ ಜಲ್ನಾದ ಬಿಜೆಪಿ ಸಂಸದರೂ ಆಗಿರುವ ದಾನ್ವೆ ಅವರ ವಿಡಿಯೋ ವೈರಲ್ ಆಗಿದ್ದು, ಅದರಲ್ಲಿ ಅವರು ನಾನು ಇಲ್ಲಿರುವವರೆಗೂ ಬಕ್ರೀದ್ ಹಬ್ಬದಂದು ಯಾರೂ ಹಸು ವಧೆ ಮಾಡಲು ಸಾಧ್ಯವಿಲ್ಲ ಎಂದು ಹೇಳಿದ್ದರು. ವೀಡಿಯೋ ವೈರಲ್ ಆಗುತ್ತಿದ್ದಂತೆ ದಾನ್ವೆ ಅವರು ಈ ಬಗ್ಗೆ ಮಾಧ್ಯಮಗಳಿಗೆ ಈಮೇಲ್ ಮೂಲಕ ಸ್ಪಷ್ಟನೆ ನೀಡಿದ್ದಾರೆ. ಈ ಹಿಂದೆಯೂ ದಾನ್ವೆ ಅವರು ಹಲವು ವಿವಾದಾತ್ಮಕ ಹೇಳಿಕೆಗಳನ್ನು ನೀಡಿದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 