ನವೋದಯ ಆಯ್ಕೆ ಪರೀಕ್ಷೆಯಲ್ಲಿ ಅನನ್ಯ ಮುಗಳೊಳ್ಳಿ ಸಾಧನೆ
Unique achievement in Navodaya selection exam
ಕೊಲ್ಹಾರ 27 : ಪಟ್ಟಣದ ಜ್ಞಾನ ಜ್ಯೋತಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಬಾಗಲಕೋಟೆ ಜಿಲ್ಲೆಯ ಬಾದಾಮಿ ತಾಲೂಕಿನ ಬೆಳವಲಕೊಪ್ಪ ಗ್ರಾಮದ ವಿದ್ಯಾರ್ಥಿನಿ ಅನನ್ಯ ಮುಗಳೊಳ್ಳಿ ಕಳೆದ ಮೂರು ವರ್ಷಗಳಿಂದ ತರಬೇತಿ ಪಡೆದುಕೊಂಡು 2026- 27ನೇ ಸಾಲಿನಲ್ಲಿ ನಡೆದ ಜವಾಹರ ನವೋದಯ ಆಯ್ಕೆ ಪರೀಕ್ಷೆಯಲ್ಲಿ ಶೇ 97.50 ಅಂಕಗಳನ್ನು ಪಡೆದು ಬಾಗಲಕೋಟೆ ಜಿಲ್ಲೆಗೆ 16ನೇಸ್ಥಾನ ಗಿಟ್ಟಿಸಿಕೊಂಡಿದ್ದಾಳೆ ವಿದ್ಯಾರ್ಥಿನಿಯ ಸಾಧನೆಗೆ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ವಿವೇಕಾನಂದ ಹರನಟ್ಟಿ ಹಾಗೂ ಸಂಸ್ಥೆಯ ಉಪಾಧ್ಯಕ್ಷ ಪಾರ್ವತಿ ಹರನಟ್ಟಿ ಸನ್ಮಾನಿಸಿ ಹರ್ಷ ವ್ಯಕ್ತಪಡಿಸಿದರು ಸಾಧನೆಗೈದ ವಿದ್ಯಾರ್ಥಿನಿಯ ತಂದೆ ಶರಣಪ್ಪ ಮುಗಳೊಳ್ಳಿ , ಶಿಕ್ಷಕಿ ರೇಣುಕಾ ಪತಂಗಿ, ಸೇರಿದಂತೆ ಹಲವರು ಇದ್ದರು.
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ
ಹಳೆದಿಗ್ಗೆವಾಡಿ ಗ್ರಾಮದ ಮಹಾದೇವ ಗಂಗಾಯಿ ಅಜ್ಜ ವಿಧಿವಶ
ಆರೈಕೆಗಿದ್ದವನಿಂದ 1.02 ಕೋಟಿಯ 930 ಗ್ರಾಂ ಚಿನ್ನ ಕಳ್ಳತನ: ಇಬ್ಬರ ಬಂಧನ, 73.03 ಲಕ್ಷದ ಚಿನ್ನ ವಶಕ್ಕೆ 