ಉನ್ನಾವೋ ಘಟನೆ : ಸಿಎಂ ಬರುವವರೆಗೂ ಅಂತ್ಯ ಸಂಸ್ಕಾರ ನಡೆಸದಿರಲು ಬಿಗಿಪಟ್ಟು
ಲಕ್ನೋ, ಡಿ 8 : ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಅದಿತ್ಯನಾಥ್ ಭೇಟಿ ನೀಡುವವರೆಗೂ ಉನ್ನಾವೋ ಅತ್ಯಾಚಾರ ಸಂತ್ರಸ್ತೆಯ ಅಂತ್ಯಸಂಸ್ಕಾರ ಮಾಡುವುದಿಲ್ಲವೆಂದು ಕುಟುಂಬದ ಸದಸ್ಯರು ಬಿಗಿಪಟ್ಟು ಹಿಡಿದಿದ್ದಾರೆ. ಶನಿವಾರ ಸಂಜೆಯೇ ಸಂತ್ರಸ್ತೆಯ ಮೃತದೇಹ ಉನ್ನಾವೋ ಗ್ರಾಮ ತಲುಪಿದ್ದು , ಇಂದು ಅಂತ್ಯಸಂಸ್ಕಾರ ನೆರವೇರಿಸಿಬೇಕಿತ್ತು. ಆದರೇ ಮುಖ್ಯಮಂತ್ರಿ ಭೇಟಿ ನೀಡುವವರೆಗೂ ಅಂತಿಮ ವಿಧಿ ವಿಧಾನ ನೆರವೇರಿಸುವುದಿಲ್ಲವೆಂದು ಕುಟುಂಬದ ಸದಸ್ಯರು ಬಿಗಿ ಪಟ್ಟು ಹಾಕಿದ್ದಾರೆ. ದೆಹಲಿಯ ಸಫ್ಜರ್ ಜಂಗ್ ಆಸ್ಪತ್ರೆಯಲ್ಲಿ ಸುಟ್ಟ ಗಾಯಗಳಿಂದ ಸಾವು -ಬದಕಿನ ಹೋರಾಟ ನಡೆಸಿದ್ದ ಉನ್ನಾವ್ ಅತ್ಯಾಚಾರ ಸಂತ್ರಸ್ತೆ ಶುಕ್ರವಾರ ರಾತ್ರಿ ದೆಹಲಿಯಲ್ಲೀ ಕೊನೆಯುಸಿರೆಳೆದಿದ್ದರು. ಆ ಬಳಿಕ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಸಂಪುಟದ ಸಚಿವರು ಸಂತ್ರಸ್ತೆಯ ಮನೆಗೆ ತೆರಳಿ ಸಾಂತ್ವನ ಹೇಳಿದ್ದರು.ಈ ವೇಳೆ ಗ್ರಾಮದಲ್ಇ ಬಿಗುವಿನ ಪರಿಸ್ಥಿತಿ ನಿರ್ಮಾಣವಾಗಿ, ಭಾರೀ ಪ್ರತಿಭಟನೆ ವ್ಯಕ್ತವಾಗಿತ್ತು. ಕುಟುಂಬದ ಸದಸ್ಯರಿಗೆ ಸರ್ಕಾರದ ವತಿಯಿಂದ 25 ಲಕ್ಷ ರೂಪಾಯಿ ಪರಿಹಾರ ಹಾಗೂ ಪ್ರಧಾನ ಮಂತ್ರಿ ಅವಾಸ್ ಯೋಜನೆಯಡಿ ಮನೆ ನೀಡುವ ಭರವಸೆ ಕೊಡಲಾಗಿತ್ತು.
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ 