ನಾಳೆ ಉಪ್ಪಿ ಹುಟ್ಟು ಹಬ್ಬ : ಹಾರ ತುರಾಯಿ ಬೇಡ, ಗಿಡ ತೆಗೆದುಕೊಂಡು ಹೋಗಿ
ಬೆಂಗಳೂರು, ಸೆ 17 ಚಂದನವನದ ಬುದ್ಧಿವಂತ ನಟ, ನಿರ್ದೇಶಕ ಉಪೇಂದ್ರ ಬುಧವಾರ 52ನೇ ವರ್ಷಕ್ಕೆ ಕಾಲಿಡಲಿದ್ದಾರೆ ಸದ್ಗುರು ಜಗ್ಗಿ ವಾಸುದೇವ್ ಅವರ ಕಾವೇರಿ ಕೂಗು ಅಭಿಯಾನಕ್ಕೆ ಬೆಂಬಲ ನೀಡಿರುವ ಉಪ್ಪಿ, ಈ ಬಾರಿಯ ಜನ್ಮದಿನಕ್ಕೆ ಯಾರೂ ಯಾವುದೇ ಗಿಫ್ಟ್ ತರಬೇಡಿ ಎಂದು ಮೂರು ದಿನ ಮೊದಲೇ ಮನವಿ ಮಾಡಿದ್ದಾರೆ
ಪ್ರೀತಿಯ ಅಭಿಮಾನಿಗಳಲ್ಲಿ ವಿನಂತಿ... ಸೆಪ್ಟೆಂಬರ್ 18 "ಅಭಿಮಾನಿಗಳ ದಿನ", ಅಂದು ದಯವಿಟ್ಟು ತಾವುಗಳು ಯಾರೂ ಕೇಕ್, ಹೂವಿನ ಹಾರ ಹೂಗುಚ್ಛ ಮತ್ತು ಉಡುಗೊರೆಗಳನ್ನು ತರಬೇಡಿ.. ತರಲೇ ಬೇಕು ಎಂದೆನಿಸಿದರೆ ಗಿಡಗಳನ್ನು ತನ್ನಿ. ಮುಂದೆ ಅದನ್ನು ಪೋಷಿಸುವ ಜವಾಬ್ದಾರಿ ನಾನು ತೆಗೆದುಕೊಳ್ಳುತ್ತೇನೆ ಎಂದು ತಿಳಿಸಿದ್ದಾರೆ
ಉಪೇಂದ್ರ ಅವರಿಗೆ ಟ್ವಿಟರ್ ಮೂಲಕ ಈಗಾಗಲೇ ಜನ್ಮದಿನದ ಶುಭಾಶಯ ಸಲ್ಲಿಕೆಯಾಗುತ್ತಿದ್ದು, ಅಭಿಮಾನಿಯೋರ್ವ ಅಭಿಮಾನಿಗಳ ದಿನದಂದು ತಮ್ಮ ಮಾತುಗಳನ್ನು ಕೇಳಲು ಕಾತರದಿಂದ ಕಾಯುತ್ತಿರುವೆ ವಿಳಾಸ ತಿಳಿಸಿ ಎಂದು ಬರೆದುಕೊಂಡಿದ್ದಾರೆ ಜತೆಗೆ ಪೆನ್ಸಿಲ್ ನಲ್ಲಿ ಬರೆದಿರುವ ಉಪ್ಪಿಯ ಚಿತ್ರವನ್ನು ಶೇರ್ ಮಾಡಿದ್ದಾರೆ
ಅಂದ ಹಾಗೆ ಸೆಪ್ಟೆಂಬರ್ 18 ರಂದು ಉಪೇಂದ್ರ ಹುಟ್ಟುಹಬ್ಬ ಮಾತ್ರವಲ್ಲ, ದಿವಂಗತ ನಟ ವಿಷ್ಣುವರ್ಧನ್ ಜನ್ಮದಿನವೂ ಹೌದು ನಟಿ ಶ್ರುತಿ ಕೂಡ ತಮ್ಮ 45ನೇ ಜನ್ಮದಿನ ಆಚರಿಸಿಕೊಳ್ಳಲಿದ್ದಾರೆ.
ಗಾಂಜಾ ಮಾರಾಟಗಾರರ ಮೇಲೆ ದಾಳಿ; 9,21 ಲಕ್ಷದ ವಸ್ತುಗಳ ವಶ, ಐವರ ಬಂಧನ
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ 