ಸೈಕಲ್ ಬಳಸಿದರೆ ದೇಹ, ಪರಿಸರಕ್ಕೆ ಸಹಕಾರಿ : ಭೋವಿ
Using a bicycle is good for the body and the environment: Bhovi
ಲೋಕದರ್ಶನ ವರದಿ
ಯರಗಟ್ಟಿ 08 : ಸಮೀಪದ ತಲ್ಲೂರ ಗ್ರಾಮದ ಸರ್ಕಾರಿ ಪ್ರಾಥಮಿಕ ಶಾಲಾ ಹಾಗೂ ಗ್ರಾಮ ಪಂಚಾಯತ ಆವರಣದಲ್ಲಿ ಸೋಮವಾರ ವಿಶ್ವ ಬೈಸಿಕಲ್ ದಿನಾಚರಣೆ ಆಚರಿಸಲಾಯಿತು. ಸೈಕಲ್ ಬೆಲ್ ಮಾಡುವ ಮೂಲಕ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಶಾಲಾ ಪ್ರಧಾನಗುರುಳಾದ ಡಿ. ಡಿ ಭೋವಿ ಸೈಕಲ್ ಓಡಿಸುವುದರಿಂದ ದೇಹಕ್ಕೆ ವ್ಯಾಯಾಮಮಾಗುತ್ತದೆ. ದೇಹವನ್ನು ಸದೃಢವಾಗಿಡುವುದರ ಜೊತೆಗೆ ಹೃದಯದ ಆರೋಗ್ಯ ಕಾಪಾಡುತ್ತದೆ. ನಿಯಮಿತವಾಗಿ ಸೈಕಲ್ ಓಡಿಸುವುದರಿಂದ ಆರೋಗ್ಯಯುತವಾಗಿರಬಹುದು ಎಂದರು.
ಈಚೆಗೆ ಸೈಕಲ್ ಬದಲಾಗಿ ದ್ವಿಚಕ್ರ ವಾಹನಗಳ ಬಳಕೆ ಹೆಚ್ಚಾಗಿದ್ದು ಮಾಲಿನ್ಯವೂ ಹೆಚ್ಚುತ್ತಿದೆ. ಕಡಿಮೆ ದೂರದ ಪ್ರಯಾಣಗಳಿಗೆ ಸೈಕಲ್ ಬಳಸುವ ಅಭ್ಯಾಸ ಬೆಳೆಸಿಕೊಳ್ಳಬೇಕು. ಇದರಿಂದ ಇಂಧನ ಉಳಿತಾಯವಾಗುವುದರ ಜೊತೆಗೆ ಆರೋಗ್ಯ ಮತ್ತು ಪರಿಸರ ಸುರಕ್ಷಿತವಾಗಿರುತ್ತದೆ ಎಂದರು. ಈ ವೇಳೆ ಪಿಡಿಓ ರಾಘವೇಂದ್ರಕುಮಾರ ಎಸ್. ಪಿ, ದೈಹಿಕ ಶಿಕ್ಷಣ ಶಿಕ್ಷಕ ಎಸ್.ಎಂ.ಹಂಜಿ, ಎಸ್.ಎಫ್.ಮುರಗನ್ನವರ, ಮಲ್ಲಿಕಾರ್ಜುನ ಬದಾಮಿ, ಎಸ್.ಎಫ್.ಬಡಿಗೇರ, ಗ್ರಾ.ಪಂ. ಕಾರ್ಯದರ್ಶಿ ಸತೀಶ ಬಡಿಗೇರ, ಗ್ರಾ. ಪಂ. ಕ್ಲಾರ್ಕ ರಾಜಶೇಖರ ಅಣ್ಣಿಗೇರಿ ಸೇರಿದಂತೆ ವಿದ್ಯಾರ್ಥಿಗಳು ಇದ್ದರು.
ಕನ್ನಡಪರ ನಿರ್ಣಯಕ್ಕೆ ಹಿಂದೇಟು : ಪಾಲಿಕೆಯಲ್ಲಿ ನಿರ್ಣಯ ಮಂಡಿಸಲು ಮುಂದಾದ ಶಾಸಕ ಸೇಠ್
ಕನ್ನಡಪರ ನಿರ್ಣಯಕ್ಕೆ ಹಿಂದೇಟು : ಪಾಲಿಕೆಯಲ್ಲಿ ನಿರ್ಣಯ ಮಂಡಿಸಲು ಮುಂದಾದ ಶಾಸಕ ಸೇಠ್
ಒಬ್ಬರಿಗೆ ಒಂದೇ ಹುದ್ದೆ ಕಾಂಗ್ರೆಸ್ ಪಕ್ಷದ ನಿಯಮದಿಂದ ಕೆಪಿಸಿಸಿ ಅಧ್ಯಕ್ಷ ಸ್ಥಾನ ಕೈ ತಪ್ಪಿದೆ : ಸಚಿವ ಸತೀಶ ಜಾರಕಿಹೊಳಿ
ಖಾತೆ ಮುಟ್ಟುಗೋಲಾದರೂ ಶಿವಂ ಸಂಸ್ಥೆಗೆ ಜನರಿಂದ ಇನ್ನೂ ದುಡ್ಡು ಠೇವಣಿ : ವಂಚನೆ ಜಾಲದಿಂದ ದೂರ ಇರಿ, ಜನರಿಗೆ ಸಿಐಡಿ ಡಿಐಜಿಪಿ ಗುಳೇದ್ ಮನವಿ
ಬಹುಕೋಟಿ ಹಣ ವಂಚನೆ : ಆದಿತ್ಯರಾಜ್ ಕೇಸು ಸಿಐಡಿಗೆ, ಸಿಇಓ ವಿರುದ್ಧ ಲುಕ್ ಔಟ್ ನೋಟಿಸ್ ಜಾರಿ, ಏರ್ಪೋರ್ಟ್ ಗಳಿಗೆ ಮಾಹಿತಿ ರವಾನೆ
ಚಿನ್ನ ದೋಚಿದ್ದ ಖದೀಮನ ಬಂಧನ : 15.73 ಲಕ್ಷ ಮೌಲ್ಯದ 103.97 ಗ್ರಾಂ ಚಿನ್ನ ವಶ 