ರಾಜಣ್ಣ, ನಾಗೇಂದ್ರರಿಗೆ ಮತ್ತೆ ಸಚಿವ ಸ್ಥಾನ ನೀಡಲುವಾಲ್ಮೀಕಿ ಸಮಾಜದ ಮುಖಂಡರ ಆಗ್ರಹ
Valmiki Samaj leaders demand that Rajanna and Nagendra be given ministerial positions again
ಬಳ್ಳಾರಿ 14: ರಂದು ನಗರದ ನೇರ, ನಿಷ್ಟುರ, ಕಳಂಕ ರಹಿತ ರಾಜಕಾರಣಿ ಕೆ.ಎನ್.ರಾಜಣ್ಣ ಮತ್ತು ಗ್ರಾಮೀಣ ಶಾಸಕ ಬಿ.ನಾಗೇಂದ್ರ ಅವರಿಗೆ ಮತ್ತೆ ಸಚಿವ ಸ್ಥಾನ ಕಲ್ಪಿಸಿಕೊಡಬೇಕೆಂದು ಜಿಲ್ಲೆಯ ವಾಕ್ಮೀಕಿ ಸಮಾಜದ ಮುಖಂಡರು ಕಾಂಗ್ರೆಸ್ ಹೈ ಕಮಾಂಡಿಗೆ ಒತ್ತಾಯಿಸಿದ್ದಾರೆ.
ಜೆಡಿಎಸ್ ಜಿಲ್ಲಾಧ್ಯಕ್ಷ, ವಾಲ್ಮೀಕಿ ಸಮಾಜದ ಮುಖಂಡ ಮೀನಳ್ಳಿ ತಾಯಣ್ಣ ಮೊದಲಾದವರು ನಿನ್ನೆ ಸಂಜೆ ನಗರದಲ್ಲಿ ಸುದ್ದಿಗೋಷ್ಠಿ ನಡೆಸಿ. ರಾಜಣ್ಣಅವರನ್ನು ಸಚಿವ ಸ್ಥಾನದಿಂದ ವಜಾಗೊಳಿಸಿರುವುದು ಖಂಡನೀಯ, ಅದೇರೀತಿ ಸುಳ್ಳು ಹಗರಣಗಳನ್ನು ಹೊರೆಸಿ ಒತ್ತಾಯದ ಮೂಲಕ ರಾಜೀನಾಮೆಯನ್ನು ಪಡೆದ ಬಿ.ನಾಗೇಂದ್ರ ಇವರಿಬ್ಬರಿಗೂ ಕೂಡಲೇ ಯಾವುದೇ ನೆಪ ಹೇಳದೇ ಮತ್ತೆ ಸಂಪುಟ ದರ್ಜೆ ಸಚಿವ ಸ್ಥಾನ ನೀಡಬೇಕು, ಈ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿಕುಮಾರ್ ಹಾಗೂ ಹೈಕಮಾಂಡ್ ನಿರ್ಲಕ್ಷ್ಯ ವಹಿಸಿದರೆ ರಾಜ್ಯಾದ್ಯಂತ ಪ್ರತಿಭಟನೆಯ ಸ್ವರೂಪ ಬದಲಾಗಲಿದೆ ಎಂದು ಎಚ್ಚರಿಕೆ ನೀಡಿದ್ದಾರೆ.ರಾಜಣ್ಣ ಅವರನ್ನ ವಜಾ ಮಾಡಿ ವಾಲ್ಮೀಕಿ ಸಮಾಜಕ್ಕೆ ಮಾಡಿದ ಅಪಮಾನವಾಗಿದೆ. ಮಾಜಿ ಸಚಿವ ಬಿ.ನಾಗೇಂದ್ರ ಅವರು ಏನೂ ತಪ್ಪು ಮಾಡದಿದ್ದರೂ ಅವರನ್ನು ಒತ್ತಾಯದ ಮೂಲಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಪಡೆದರು. 178 ಕೋಟಿ ವಾಲ್ಮೀಕಿ ಅಭಿವೃದ್ದಿ ನಿಗಮದ ಹಗರಣ ಅಂದ್ರೆ, ಹಣಕಾಸು ಇಲಾಖೆ ಸಿ.ಎಂ.ಸಿದ್ದರಾಮಯ್ಯ ಅವರ ಬಳಿಯೇ ಇದೆ, ಇವರ ಗಮನಕ್ಕೆ ಬಾರದೇ ಎಲ್ಲವನ್ನೂ ಬಿ.ನಾಗೇಂದ್ರ ಅವರ ಮೇಲೆ ಹೊರೆಸಿ ಅವರಿಂದಲೂ ರಾಜ್ಯ ಕಾಂಗ್ರೆಸ್ ಸರ್ಕಾರದ ಸಿ.ಎಂ.ಸಿದ್ದರಾಮಯ್ಯ ಅವರು ಒತ್ತಾಯದ ಮೂಲಕ ರಾಜೀನಾಮೆ ಪಡೆದರು, ಇದು ಅತ್ಯಂತ ಖಂಡನೀಯ.
ಮಾಜಿ ಸಚಿವ ರಮೇಶ್ ಜಾರಕಿಹೊಳಿ ಅವರನ್ನು ಇದೆ ರೀತಿ ಮಾಡಿ ರಾಜಕೀಯ ಭವಿಷ್ಯ ಹಾಳು ಮಾಡಿದ್ರು, ಮಾಜಿ ಸಚಿವ ಬಿ.ಶ್ರೀರಾಮುಲು ಅವರನ್ನು ಡಿಸಿಎಂ ಮಾಡಲಾಗುವುದು ಎಂದು ಈ ಹಿಂದೆ ಬಿಜೆಪಿ ಅವರು ಭರವಸೆ ನೀಡಿ, ಪುಕ್ಕಟೆ ಪ್ರಚಾರ ಪಡೆದರು.ಎಲ್ಲ ಪಕ್ಷಗಳೂ ನಮ್ಮ ವಾಲ್ಮೀಕಿ ಸಮಾಜದ ನಾಯಕರನ್ನು ಪರೋಕ್ಷವಾಗಿ ಬೆಳೆಯಲು ಬಿಡುತ್ತಿಲ್ಲ, ಇದೆ ರೀತಿ ಮುಂದುವರೆದರೆ ಸಮಾಜ ಇಡಿ ರಾಜ್ಯಾದ್ಯಂತ ಸಿಡಿದೇಳಲಿದೆ ಎಂದು ಎಚ್ಚರಿಸಿದರು. ಯುವ ಮುಖಂಡ ಜೋಳದರಾಶಿ ತಿಮ್ಮಪ್ಪ, ನ್ಯಾಯವಾದಿ ಜಯರಾಂ, ಪಾಲಿಕೆ ಸದಸ್ಯ ಕೆ.ಹನುಮಂತಪ್ಪ ಮೊದಲಾದವರು ಇದ್ದರು.
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ 