ವಂದೇಮಾತರಂ ಹೇಳಿ, ಇಲ್ಲ ದೇಶ ಬಿಡಿ: ಕೇಂದ್ರ ಸಚಿವರ ಅಣಿಮುತ್ತು.!
ಅಹಮದಾಬಾದ್, ಜ 19 : ವಂದೇಮಾತರಂ ಹೇಳುವುದಿಲ್ಲ ಎಂದಾದರೆ ಭಾರತದಲ್ಲಿ ಬದುಕುವ, ವಾಸ ಮಾಡುವ ಹಕ್ಕು ನಿಮಗಿಲ್ಲ ಎಂದು ಕೇಂದ್ರ ಸಚಿವ ಪ್ರತಾಪ್ ಚಂದ್ರ ಸಾರಂಗಿ ಹೇಳಿ ದೊಡ್ಡ ವಿವಾದ ಎಳೆದುಕೊಂಡಿದ್ದಾರೆ.
ಪೌರತ್ವ ತಿದ್ದುಪಡಿ ಕಾಯ್ದೆ ವಿಚಾರವಾಗಿ ಪ್ರತಿಕ್ರಿಯೆ ನೀಡುವ ಸಮಯದಲ್ಲಿ ಈ ಅಭಿಪ್ರಾಯವಾಗಿ ವ್ಯಕ್ತಪಡಿಸಿದ್ದಾರೆ.
70 ವರ್ಷಗಳ ಹಿಂದೆಯೇ ಪೌರತ್ವ ತಿದ್ದುಪಡಿ ಕಾಯ್ದೆ ಜಾರಿಗೆ ಬರಬೇಕಾಗಿತ್ತು. ಆದರೆ, ಕಾಂಗ್ರೆಸ್ಸಿಗರು ಪೌರತ್ವ ತಿದ್ದುಪಡಿ ಕಾಯ್ದೆಯನ್ನು ವಿಭಜನೆಯ ಪ್ರತೀಕ ಎಂಬಂತೆ ಬಿಂಬಿಸುತ್ತಿದ್ದಾರೆ ಎಂದೂ ದೂರಿದರು. ರಾಜಕಾರಣಿಗಳು ಮತ್ತು ನಾಯಕರು ದೇಶ ವಿಭಜನೆ ನಡೆಯುವ ಸಮಯದಲ್ಲಿ ಮೌನವಾಗಿದ್ದರು ಎಂದೂ ಟೀಕಿಸಿದರು.
ಪಾಕಿಸ್ತಾನ, ಬಾಂಗ್ಲಾದೇಶ, ಆಫ್ಘನ್ನಲ್ಲಿ ಹಿಂದುಗಳ ಸಂಖ್ಯೆ ವರ್ಷದಿಂದ ವರ್ಷಕ್ಕೆ ಕಡಿಮೆಯಾಗುತ್ತಿದೆ . ಆ ದೇಶಗಳಲ್ಲಿ ಅವರಿಗೆ ಕಿರುಕುಳ ನೀಡಲಾಗುತ್ತಿದೆ ಭಾರತಬಿಟ್ಟರೆ ಬೇರೆ ಕಡೆ ಅವರಿಗೆ ನೆಲೆಯಿಲ್ಲ ಎಂದೂ ಸಚಿವರು ಹೇಳಿದ್ದಾರೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 