ಮೇ. 23ರಿಂದ ವಣ್ಣೂರ ಗ್ರಾಮದೇವಿಯರ ಜಾತ್ರಾ ಮಹೋತ್ಸವ
Vannur Grama Devi Yatra Mahotsava from May 23
ಮೇ. 23ರಿಂದ ವಣ್ಣೂರ ಗ್ರಾಮದೇವಿಯರ ಜಾತ್ರಾ ಮಹೋತ್ಸವ
ನೇಸರಗಿ, 05 : ಸಮೀಪದ ವಣ್ಣೂರ ಗ್ರಾಮದ ಶ್ರೀ ಗ್ರಾಮದೇವತೆಯರ ಜಾತ್ರಾ ಮಹೋತ್ಸವವು ದಿ. 23-05-2025 ರಿಂದ ದಿ. 31-05-2025 ರ ವರೆಗೆ ಅದ್ದೂರಿಯಾಗಿ ನೆರವೇರಲಿದೆ. ಕಾರ್ಯಕ್ರಮದ ದಿವ್ಯ ಸಾನಿಧ್ಯವನ್ನು ಹಣಬರಹಟ್ಟಿಯ ಕೆಳದಿಮಠದ ಪಟ್ಟದ ದೇವರು ಷ ಭ್ರ, ಬಸವಲಿಂಗ ಶಿವಾಚಾರ್ಯರು ವಹಿಸುವರು ಮತ್ತು ಜಾತ್ರಾ ಮಹೋತ್ಸವದಲ್ಲಿ ಮುರುಗೋಡ ದುರದುಂಡೇಶ್ವರ ಮಠದ ಶ್ರೀ ನೀಲಕಂಠ ಮಹಾಸ್ವಾಮಿಗಳು, ಮಲ್ಲಾಪೂರ ಕೆ ಎನ್ ಗಾಳೇಶ್ವರ ಮಠದ ಶ್ರೀ ಚಿದಾನಂದ ಮಹಾಸ್ವಾಮಿಗಳು, ಸಂಗೊಳ್ಳಿಯ ಗುರು ಸಂಸ್ಥಾನ ಮಠದ ಗುರುಲಿಂಗ ಶಿವಾಚಾರ್ಯರು, ತಾರೀಹಾಳ ಅಡವಿ ಸಿದ್ದೇಶ್ವರ ಮಠದ ಅಡಿವೇಶ ದೇವರು, ಸುತಗಟ್ಟಿ ಹಿರೇಮಠದ ಸಿದ್ದಲಿಂಗ ಶಿವಾಚಾರ್ಯರು ಸಾನಿಧ್ಯ ವಹಿಸುವರು.
ಮೇ 23 ರಂದು ಬೆಳಿಗ್ಗೆ 8 ಘಂಟೆಗೆ ಗ್ರಾಮದ ಸುಮಂಗಲೆಯಂರಿಂದ ಬ್ರಹತ್ ಕುಂಭಮೇಳ ಆರತಿಯೊಂದಿಗೆ ಬರಮಾಡಿಕೊಳ್ಳುವದು, 9 ಘಂಟೆಗೆ ಹೋಮ, ಹವನ, ದೈವದ ವತಿಯಿಂದ ಉಡಿ ತುಂಬುವದು, ನಂತರ ಶ್ರೀಗಳ ಪ್ರವಚನ, ಮಹಾಪ್ರಸಾದ ನಡೆಯಲಿದೆ, ಅಂದು ರಾತ್ರಿ 10 ಘಂಟೆಗೆ ಶ್ರೀ ರೇಣುಕಾ ನಾಟ್ಯ ಸಂಘ ವಣ್ಣೂರ ಇವರಿಂದ ಬಡವನ ಒಡಿಲು ಬೆಂಕಿಯ ಸಿಡಿಲು ಎಂಬ ಸಾಮಾಜಿಕ ನಾಟಕ ನೆರವೇರಲಿದೆ. ಮೇ 24 ರಂದು ಬೆಳಿಗ್ಗೆ ಪೂಜೆ, ಬಾಬದಾರರು ಉಡಿ ತುಂಬುವದು ಸಂಜೆ 5 ಘಂಟೆಗೆ ದೇವಿಯರ ಮಹಾ ರಥೋತ್ಸವ ನಡೆಯಲಿದೆ, ರಾತ್ರಿ 10 ಘಂಟೆಗೆ ಚಿಪ್ಪಲಕಟ್ಟಿಯ ಶ್ರೀ ದುರ್ಗಾದೇವಿ ಹೆಣ್ಣುಮಕ್ಕಳ ಸಂಗ್ಯಾ ಬಾಳ್ಯಾ ನಾಟ್ಯ ಸಂಘ ಇವರಿಂದ ಸಂಗ್ಯಾ ಬಾಳ್ಯಾ ನಾಟಕ ನೆರವೇರಲಿದೆ. ಮೇ 25 ರಂದು ಪೂಜೆ, ಭಕ್ತರಿಂದ ಉಡಿ ತುಂಬುವದು, ರಾತ್ರಿ 10 ಘಂಟೆಗೆ ವಣ್ಣೂರ ಮಹರ್ಷಿ ವಾಲ್ಮೀಕಿ ನಾಟ್ಯ ಸಂಘದಿಂದ ರಾಜಧಾನಿಗೆ ಕಾಲಿಟ್ಟ ರೈತ ಅರ್ಥಾರ್ಥ ಹಸಿರು ಸೇನೆಯ ಹುಲಿ ಎಂಬ ನಾಟಕ ಪ್ರದರ್ಶನಗೊಳ್ಳಲಿದೆ. ಮೇ. 26ರಂದು ಭಕ್ತರಿಂದ ಉಡಿ ತುಂಬುವದು, ಸಂಜೆ 4 ಘಂಟೆಗೆ ಭಾರಿ ಜಂಗಿ ಕುಸ್ತಿ ನಡೆಯಲಿವೆ. ಮೇ. 27 ರಂದು ಪೂಜೆ, ಉಡಿ ತುಂಬುವದು ಸಂಜೆ 4 ಘಂಟೆಗೆ ಜಂಗಿ ಕುಸ್ತಿ ನಡೆಯಲಿವೆ. ಮೇ 28 ರಂದು ಪೂಜೆ, ಸಂಜೆ 4 ಘಂಟೆಗೆ ಜಂಗಿ ಕುಸ್ತಿ,ರಾತ್ರಿ 10 ಘಂಟೆಗೆ ವಣ್ಣೂರ ಜೈ ಹನುಮನ ನಾಟ್ಯ ಸಂಘದಿಂದ ಸಾವಿರ ಹಳ್ಳಿಯ ಸರದಾರ ನಾಟಕ ನಡೆಯಲಿದೆ. ಮೇ 29 ರಂದು ಮಾಸ್ತಮರ್ಡಿ, ಸುನಕುಂಪಿ ಗ್ರಾಮಸ್ಥರಿಂದ ಉಡಿ ತುಂಬುವದು, ರಾತ್ರಿ 10 ಘಂಟೆಗೆ ಗ್ರಾಮದೇವಿ ನಾಟ್ಯಸಂಘ ವಣ್ಣೂರ ಇವರಿಂದ ಹುತ್ತದಲ್ಲಿ ಕೈ ಇಟ್ಟ ಮುತ್ತೈದೆ ಎಂಬ ಸಾಮಾಜಿಕ ನಾಟಕ ನಡೆಯಲಿದೆ. ಮೇ 30 ಕ್ಕೆ ಪೂಜೆ ಸಂಜೆ 5 ಘಂಟೆಗೆ ಕೊನೆಯ ರಥೋತ್ಸವ ನೆರವೇರಲಿದೆ.
ಮೇ 31ರಂದು ಶ್ರೀ ದೇವಿಯರನ್ನು ಪೂಜೆಯೊಂದಿಗೆ ಗದ್ದಿಗೆ ಗೊಳಿಸುವದು ನಡೆಯಲಿದ್ದು, ಜಾತ್ರೆಯ ಪ್ರತಿ ದಿನ ಶ್ರೀ ಬಸವೇಶ್ವರ ದೇವಸ್ಥಾನದಲ್ಲಿ ಎಲ್ಲರಿಗೂ ಪ್ರಸಾದ ವ್ಯವಸ್ಥೆ ಕಲ್ಪಿಸಲಾಗಿದೆ ಎಂದು ಬೈಲಹೊಂಗಲ ಟಿಎಪಿಸಿ ಎಮ್ ಎಸ್ ಅಧ್ಯಕ್ಷರು, ವಣ್ಣೂರ ಪಿಕೆಪಿಎಸ್ ಅಧ್ಯಕ್ಷರಾದ ಬಾಳಾಸಾಹೇಬ ದೇಸಾಯಿ ಮತ್ತು ಜಾತ್ರಾ ಕಮಿಟಿಯ ಸದಸ್ಯರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಒಬ್ಬರಿಗೆ ಒಂದೇ ಹುದ್ದೆ ಕಾಂಗ್ರೆಸ್ ಪಕ್ಷದ ನಿಯಮದಿಂದ ಕೆಪಿಸಿಸಿ ಅಧ್ಯಕ್ಷ ಸ್ಥಾನ ಕೈ ತಪ್ಪಿದೆ : ಸಚಿವ ಸತೀಶ ಜಾರಕಿಹೊಳಿ
ಖಾತೆ ಮುಟ್ಟುಗೋಲಾದರೂ ಶಿವಂ ಸಂಸ್ಥೆಗೆ ಜನರಿಂದ ಇನ್ನೂ ದುಡ್ಡು ಠೇವಣಿ : ವಂಚನೆ ಜಾಲದಿಂದ ದೂರ ಇರಿ, ಜನರಿಗೆ ಸಿಐಡಿ ಡಿಐಜಿಪಿ ಗುಳೇದ್ ಮನವಿ
ಬಹುಕೋಟಿ ಹಣ ವಂಚನೆ : ಆದಿತ್ಯರಾಜ್ ಕೇಸು ಸಿಐಡಿಗೆ, ಸಿಇಓ ವಿರುದ್ಧ ಲುಕ್ ಔಟ್ ನೋಟಿಸ್ ಜಾರಿ, ಏರ್ಪೋರ್ಟ್ ಗಳಿಗೆ ಮಾಹಿತಿ ರವಾನೆ
ಚಿನ್ನ ದೋಚಿದ್ದ ಖದೀಮನ ಬಂಧನ : 15.73 ಲಕ್ಷ ಮೌಲ್ಯದ 103.97 ಗ್ರಾಂ ಚಿನ್ನ ವಶ
ಕಣಗಲಾ ಬಳಿ ಲಾರಿ, ದ್ವಿಚಕ್ರವಾಹನ ನಡುವೆ ಅಪಘಾತ : ಇಬ್ಬರ ಸಾವು
ಗಾಂಜಾ ಮಾರಾಟಗಾರರ ಮೇಲೆ ದಾಳಿ; 9,21 ಲಕ್ಷದ ವಸ್ತುಗಳ ವಶ, ಐವರ ಬಂಧನ 