ಇಂದು ಕೈಲಾಸ ವರಸಿದ್ಧಿ ಗಣಪತಿ ದೇವಸ್ಥಾನದಲ್ಲಿ ವಿವಿಧ ಕಾರ್ಯಕ್ರಮಗಳು
Various programs at Kailash Varasiddhi Ganapati Temple today
ಗದಗ 04 : ಮಂಗಳವಾರ ದಿ. 05ರಂದು ಅಂಗಾರಕ ಸಂಕಷ್ಟಿ ನಿಮಿತ್ಯ ಲೋಕ ಕಲ್ಯಾಣಾರ್ಥವಾಗಿ ಕೈಲಾಸ ವರಸಿದ್ಧಿ ಗಣಪತಿ ದೇವಸ್ಥಾನದಲ್ಲಿ ಬೆಳಿಗ್ಗೆಯಿಂದ ರಾತ್ರಿವರೆಗೆ ವಿಶೇಷ ಪೂಜಾ ಕೈಂಕರ್ಯಗಳನ್ನು ಹಮ್ಮಿಕೊಳ್ಳಲಾಗಿದೆ. 05ಮಂಗಳವಾರದಂದು ಕೈಲಾಸ ವರಸಿದ್ಧಿ ಗಣಪತಿ ದೇವಸ್ಥಾನದಲ್ಲಿ ಬೆಳಿಗ್ಗೆ 7-00 ಗಂಟೆಗೆ ಫಲ ಪಂಚಾಮೃತ ಅಭಿಷೇಕ, 11-00 ಗಂಟೆಗೆ ಗಣ ಹೋಮ, ಸಂಜೆ 7-30ಕ್ಕೆ ಸಂಕಷ್ಟಿ ಪೂಜೆ, ರಂಗ ಪೂಜೆ, ಪಲ್ಲಕ್ಕಿ ಸೇವೆ ನಡೆಯಲಿದ್ದು ರಾತ್ರಿ 9-59ಕ್ಕೆ ಚಂದ್ರೊದಯದ ನಂತರ ರಾತ್ರಿ 10 ಗಂಟೆಗೆ ಸಾರ್ವಜನಿಕ ಅನ್ನಸಂತರೆ್ಣ ಜರುಗಲಿದೆ. ಅಂಗಾರಕ ಸಂಕಷ್ಟಿಯ ವಿಶೇಷ ಪೂಜಾ ಕಾರ್ಯಕ್ರಮಗಳಲ್ಲಿ ಭಕ್ತಾದಿಗಳು ಭಾಗವಹಿಸಿ ತನು, ಮನ, ಧನದಿಂದ ಸೇವೆಗೈದು ಗಣಪತಿಯ ಕೃಪೆಗೆ ಪಾತ್ರರಾಗಬೇಕೆಂದು ಕೈಲಾಸ ವರಸಿದ್ದಿ ಗಣಪತಿ ದೇವಸ್ಥಾನ ಟ್ರಸ್ಟ್ ಅಧ್ಯಕ್ಷರಾದ ಬಿ.ಪ್ರಸನ್ನಕುಮಾರ, ಕಾರ್ಯದರ್ಶಿ ಯೋಗೇಶ ವೋರಾ, ಕೋಶಾಧ್ಯಕ್ಷರಾದ ಪ್ರದೀಪಕುಮಾರ, ವ್ಯವಸ್ಥಾಪಕರಾದ ರಾಮಚಂದ್ರ ಹೆಗಡೆ ಸೇರಿ ಇತರ ಪದಾಧಿಕಾರಿಗಳು, ಸರ್ವ ಸದಸ್ಯರು ವಿನಂತಿಸಿದ್ದಾರೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 