ವಸಂತ ಪಂಚಮಿ ಹಿಂದೂಗಳ ಪವಿತ್ರ ದಿನ: ಶಿವಾನಂದ ತಿಪ್ಪಾ
Vasant Panchami is a holy day for Hindus: Shivanand Tippa
ಮಹಾಲಿಂಗಪುರ 24: ಇಂದು ಹಿಂದೂಗಳಿಗೆ ಪವಿತ್ರವಾದ ವಸಂತ ಪಂಚಮಿ ಆ ನಿಮಿತ್ಯ ನಮ್ಮ ಶಾಲೆಯಲ್ಲಿ ಸರಸ್ವತಿ ಮಂದಿರದಲ್ಲಿ ಪಂಚ ಲೋಹದ ಸರಸ್ವತಿ ವಿಗ್ರಹ ಪ್ರತಿಷ್ಠಾಪನೆ ಮಾಡಲಾಗುತ್ತಿದೆ ಎಂದು ಸಂಸ್ಥೆಯ ಉಪಾಧ್ಯಕ್ಷ ಶಿವಾನಂದ ತಿಪ್ಪಾ ಹೇಳಿದರು. ಸ್ಥಳೀಯ ಜೆಸಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ನೆರವೇರಿದ ಸರಸ್ವತಿ ಮೂರ್ತಿ ಪ್ರತಿಷ್ಠಾಪನ ಸಂದರ್ಭದಲ್ಲಿ ಮಾತನಾಡಿದ ಅವರು ಇಂದು ಸರಸ್ವತಿ ಮಾತೆ ಅವತರಿಸಿದ ದಿನ, ಸರಸ್ವತಿ ಮಾತೆಯ ಕೃಪೆಯಿಂದ ಸರ್ವರೂ ಜ್ಞಾನ ಸಂಪಾದಿಸಬಹುದು. ಹಣ, ಅಂತಸ್ತು, ಐಶ್ವರ್ಯ ಮುಂತಾದ ಎಲ್ಲಾ ಸಂಪತ್ತುಗಳಿಗಿಂತ ಜ್ಞಾನ ಸಂಪತ್ತು ಶ್ರೇಷ್ಠ ಆ ಜ್ಞಾನವನ್ನು ಸಂಪಾದಿಸಲು ಸರ್ವರು ಸರಸ್ವತಿ ಮಾತೆಯ ಕೃಪೆಗೆ ಪಾತ್ರರಾಗಲು ಈ ದಿನ ಸುಸಂದರ್ಭ ಎಂದರು. ಪತ್ರಕರ್ತರಾದ ಎಸ್.ಎಸ್. ಈಶ್ವರ್ಪಗೋಳ, ನಾರನಗೌಡ ಉತ್ತಂಗಿ, ಮುಖ್ಯೋಪಾಧ್ಯಾಯ ಎಸ್.ಜಿ.ಕೌಜಲಗಿ, ಶಿಕ್ಷಕರಾದ ಸುರೇಶ ಮಾಟಗಾರ, ಎನ್.ಎಂ.ನಾಡಗೌಡ, ಐ.ಎಂ.ಬಡಿಗೇರ ಮತ್ತು ಮಕ್ಕಳ ಸಮ್ಮುಖದಲ್ಲಿ ಪ್ರತಿಷ್ಠಾಪಿಸಲಾಯಿತು.
ಪುನರ್ ಅಭಿವೃದ್ಧಿಗೊಂಡ ಚೆನ್ನೈ ಪಾರ್ಕ್ ಅಮೃತ್ ರೈಲು ನಿಲ್ದಾಣವನ್ನು ಜುಲೈ 17ರಂದು ಉದ್ಘಾಟಿಸಲಿರುವ ಪ್ರಧಾನಿ ಮೋದಿ
ಅನಾಮಧೇಯ ಶವ ಪತ್ತೆ: ಮಹಿಳೆ ಕೊಲೆ ಪ್ರಕರಣ ಭೇದಿಸಿದ ಸಂಕೇಶ್ವರ ಪೊಲೀಸರು : ಆರೋಪಿ ಬಂಧನ
ಶಿವಕುಮಾರ್–ಸಿದ್ದರಾಮಯ್ಯ ಚರ್ಚೆ; ಕರ್ನಾಟಕ ಸಂಪುಟ ವಿಸ್ತರಣೆ ಕುರಿತ ಊಹಾಪೋಹಗಳಿಗೆ ಮತ್ತಷ್ಟು ಬಲ
ಶ್ರೀವಾರಿ ದರ್ಶನ, ವಸತಿ ಹಾಗೂ ಸೇವೆಗಳ ಬುಕ್ಕಿಂಗ್ಗೆ ಅಧಿಕೃತ ಟಿಟಿಡಿ ವೆಬ್ಸೈಟ್ನ್ನೇ ಬಳಸುವಂತೆ ಭಕ್ತರಿಗೆ ಟಿಟಿಡಿ ಮನವಿ
ಗಿಲ್ ಗಾಯದ ಆತಂಕದ ನಡುವೆ ಭಾರತಕ್ಕೆ ಏಕದಿನ ಸರಣಿ ಗೆಲ್ಲುವ ಅವಕಾಶ
ಜಿಎಸ್ಟಿ ಇಳಿಕೆ, ಸುಲಭ ಹಣಕಾಸು ನೆರವಿನಿಂದ ಆಟೋ ಉದ್ಯಮದ ಪ್ರಮುಖ ವಿಭಾಗಗಳಲ್ಲಿ ದಾಖಲೆಯ ಮೊದಲ ತ್ರೈಮಾಸಿಕ ಮಾರಾಟ 