ವಸಂತ ಪಂಚಮಿ ಹಿಂದೂಗಳ ಪವಿತ್ರ ದಿನ: ಶಿವಾನಂದ ತಿಪ್ಪಾ
Vasant Panchami is a holy day for Hindus: Shivanand Tippa
ಮಹಾಲಿಂಗಪುರ 24: ಇಂದು ಹಿಂದೂಗಳಿಗೆ ಪವಿತ್ರವಾದ ವಸಂತ ಪಂಚಮಿ ಆ ನಿಮಿತ್ಯ ನಮ್ಮ ಶಾಲೆಯಲ್ಲಿ ಸರಸ್ವತಿ ಮಂದಿರದಲ್ಲಿ ಪಂಚ ಲೋಹದ ಸರಸ್ವತಿ ವಿಗ್ರಹ ಪ್ರತಿಷ್ಠಾಪನೆ ಮಾಡಲಾಗುತ್ತಿದೆ ಎಂದು ಸಂಸ್ಥೆಯ ಉಪಾಧ್ಯಕ್ಷ ಶಿವಾನಂದ ತಿಪ್ಪಾ ಹೇಳಿದರು. ಸ್ಥಳೀಯ ಜೆಸಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ನೆರವೇರಿದ ಸರಸ್ವತಿ ಮೂರ್ತಿ ಪ್ರತಿಷ್ಠಾಪನ ಸಂದರ್ಭದಲ್ಲಿ ಮಾತನಾಡಿದ ಅವರು ಇಂದು ಸರಸ್ವತಿ ಮಾತೆ ಅವತರಿಸಿದ ದಿನ, ಸರಸ್ವತಿ ಮಾತೆಯ ಕೃಪೆಯಿಂದ ಸರ್ವರೂ ಜ್ಞಾನ ಸಂಪಾದಿಸಬಹುದು. ಹಣ, ಅಂತಸ್ತು, ಐಶ್ವರ್ಯ ಮುಂತಾದ ಎಲ್ಲಾ ಸಂಪತ್ತುಗಳಿಗಿಂತ ಜ್ಞಾನ ಸಂಪತ್ತು ಶ್ರೇಷ್ಠ ಆ ಜ್ಞಾನವನ್ನು ಸಂಪಾದಿಸಲು ಸರ್ವರು ಸರಸ್ವತಿ ಮಾತೆಯ ಕೃಪೆಗೆ ಪಾತ್ರರಾಗಲು ಈ ದಿನ ಸುಸಂದರ್ಭ ಎಂದರು. ಪತ್ರಕರ್ತರಾದ ಎಸ್.ಎಸ್. ಈಶ್ವರ್ಪಗೋಳ, ನಾರನಗೌಡ ಉತ್ತಂಗಿ, ಮುಖ್ಯೋಪಾಧ್ಯಾಯ ಎಸ್.ಜಿ.ಕೌಜಲಗಿ, ಶಿಕ್ಷಕರಾದ ಸುರೇಶ ಮಾಟಗಾರ, ಎನ್.ಎಂ.ನಾಡಗೌಡ, ಐ.ಎಂ.ಬಡಿಗೇರ ಮತ್ತು ಮಕ್ಕಳ ಸಮ್ಮುಖದಲ್ಲಿ ಪ್ರತಿಷ್ಠಾಪಿಸಲಾಯಿತು.
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ
ಹಳೆದಿಗ್ಗೆವಾಡಿ ಗ್ರಾಮದ ಮಹಾದೇವ ಗಂಗಾಯಿ ಅಜ್ಜ ವಿಧಿವಶ
ಆರೈಕೆಗಿದ್ದವನಿಂದ 1.02 ಕೋಟಿಯ 930 ಗ್ರಾಂ ಚಿನ್ನ ಕಳ್ಳತನ: ಇಬ್ಬರ ಬಂಧನ, 73.03 ಲಕ್ಷದ ಚಿನ್ನ ವಶಕ್ಕೆ
ಹಳೆ ವೈಷಮ್ಯ : ಬೆಳಗಾವಿಯಲ್ಲಿ ಯುವಕನ ಕೊಚ್ವಿ ಹತ್ಯೆ 