ಮೌಲಾನಬಿಗೆ ವಾಸ್ತಲ್ಯ ಮನೆ ಹಸ್ತಾಂತರ
Vastalya house handed over to Maulana Bi
ಮೌಲಾನಬಿಗೆ ವಾಸ್ತಲ್ಯ ಮನೆ ಹಸ್ತಾಂತರ
ದೇವರ ಹಿಪ್ಪರಗಿ 17: ಸ್ವಾಭಿಮಾನದಿಂದ ಬದುಕು ನಡೆಸಲು ಉದ್ಯೋಗ ಹಾಗೂ ನೆಲೆಸಲು ಒಂದು ಸೂರಿನ ಅಗತ್ಯತೆಯಿದೆ. ಈ ನಿಟ್ಟಿನಲ್ಲಿ ಮನೆ ಇಲ್ಲದ ಸಂಕಷ್ಟದಲ್ಲಿರುವವರನ್ನು ಆಯ್ಕೆ ಮಾಡಿ, ಅವರಿಗೆ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಡಿ ವಾಸ್ತಲ್ಯ ಮನೆಗಳನ್ನು ನಿರ್ಮಿಸಿ ನೀಡಲಾಗುತ್ತಿದೆ ಎಂದು ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಜಿಲ್ಲಾ ನಿರ್ದೇಶಕರಾದ ಸಂತೋಷಕುಮಾರ ತಿಳಿಸಿದರು.ತಾಲ್ಲೂಕಿನ ಕೊಂಡಗೂಳಿ ಗ್ರಾಮದ ನಿವಾಸಿ ಶ್ರೀಮತಿ ಮೌಲಾನಬಿ ನದಾಫ್ ಅವರಿಗೆ ಮಾತೃಶ್ರೀ ಡಾ.ಹೇಮಾವತಿ ಹೆಗ್ಗಡೆ ಅವರ ಜ್ಞಾನವಿಕಾಸ ಕಾರ್ಯಕ್ರಮದಡಿ ನಿರ್ಮಿಸಿದ "ವಾಸ್ತಲ್ಯ ಮನೆ"ಯನ್ನು ಸೋಮವಾರದಂದು ಹಸ್ತಾಂತರಿಸುವ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.ಗ್ರಾಮ ಪಂಚಾಯಿತಿ ಸದಸ್ಯರುಗಳಾದ ಶಿವಾನಂದ ಹಾಗೂ ವೀರಗಂಟಿ ಅವರು ರಿಬ್ಬನ್ ಕಟ್ ಮಾಡುವ ಮೂಲಕ ಮನೆ ಹಸ್ತಾಂತರ ಮಾಡಲಾಯಿತು.ಇದೇ ಸಂದರ್ಭದಲ್ಲಿ ಜಿಲ್ಲಾ ರಿಕವರಿ ಯೋಜನಾಧಿಕಾರಿಗಳಾದ ಕೃಷ್ಣಮೂರ್ತಿ, ವಿಶ್ವನಾಥ್, ಮಾಜಿ ಗ್ರಾಮ ಪಂಚಾಯತಿ ಉಪಾಧ್ಯಕ್ಷರ ಪ್ರತಿನಿಧಿ ಸಂಗಮೇಶ ದಂಡೋತಿ ಸೇರಿದಂತೆ ಗ್ರಾಮದ ಪ್ರಮುಖರು, ಗಣ್ಯರು, ಸಂಘದ ವಲಯದ ಮೇಲ್ವಿಚಾರಕರು, ಸೇವಾ ಪ್ರತಿನಿಧಿಗಳು ಹಾಗೂ ಸಂಘದ ಸದಸ್ಯರು ಉಪಸ್ಥಿತರಿದ್ದರು.ಫೋಟೋ 17ಡಿಎ
ಚಿನ್ನ ದೋಚಿದ್ದ ಖದೀಮನ ಬಂಧನ : 15.73 ಲಕ್ಷ ಮೌಲ್ಯದ 103.97 ಗ್ರಾಂ ಚಿನ್ನ ವಶ
ಕಣಗಲಾ ಬಳಿ ಲಾರಿ, ದ್ವಿಚಕ್ರವಾಹನ ನಡುವೆ ಅಪಘಾತ : ಇಬ್ಬರ ಸಾವು
ಗಾಂಜಾ ಮಾರಾಟಗಾರರ ಮೇಲೆ ದಾಳಿ; 9,21 ಲಕ್ಷದ ವಸ್ತುಗಳ ವಶ, ಐವರ ಬಂಧನ
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್ 