ವಿಜೃಂಭಣೆಯಿಂದ ಜರುಗಿದ ವೀರಭದ್ರೇಶ್ವರ ರಥೋತ್ಸವ
Veerabhadreshwara chariot festival celebrated with grandeur
ಯರಗಟ್ಟಿ, 04 : ಉತ್ತರ ಕರ್ನಾಟಕದ ಧರ್ಮಸ್ಥಳದ ಎಂಬ ಖ್ಯಾತಿ ಹೊಂದಿರುವ ಗೊಡಚಿ ಕ್ಷೇತ್ರದ ಶ್ರೀ ವೀರಭದ್ರೇಶ್ವರ ರಥೋತ್ಸವವು ಹೊಸ್ತಿಲ ಹುಣ್ಣಿಮೆ ದಿನ ಗುರುವಾರ ಅತ್ಯಂತ ವಿಜೃಂಭಣೆಯಿಂದ ಜರುಗಿತು. ಪ್ರತಿ ಸಲದಂತೆ ಈ ಸಲವೂ ಗುರುವಾರ ಸಂಜೆ 5ಕ್ಕೆ ವೀರಭದ್ರೇಶ್ವರನ ರಥೋತ್ಸವ ಲಕ್ಷಾಂತರ ಭಕ್ತರ ಸಮ್ಮುಖದಲ್ಲಿ ಅದ್ದೂರಿಯಾಗಿ ಜರುಗಿತು. ಈ ನಿಟ್ಟಿನಲ್ಲಿ ರಾತ್ರಿಯಿಂದಲೇ 11 ಜನ ಶಾಸ್ತ್ರಿಗಳಿಂದ ವೀರಭದ್ರ ದೇವರು, ಭದ್ರಕಾಳಿ ಮಾತೆಗೆ ಮಹಾಮಸ್ತಕಾಭಿಷೇಕ, ಸಹಸ್ರ ಬಿಲ್ವಾರ್ಚನೆ, ಅಮ್ಮನಿಗೆ ಕುಂಕುಮಾರ್ಚನೆ, ಮಹಾ ಮಂಗಳಾರತಿ ಕಾರ್ಯಕ್ರಮಗಳು ಜರುಗಿದವು.
ಕಲಿಯುಗದಲ್ಲಿಯೂ ನಂಬಿದ ಭಕ್ತರ ಇಷ್ಟಾರ್ಥಗಳನ್ನು ಈಡೇರಿಸಬಲ್ಲ ದೈವಾದಿ ಪುರಷನಾಗಿ ಪ್ರಸಿದ್ದಿ ಪಡೆದು ಭಕ್ತರ ಮನದಲ್ಲಿ ಮನೆ ಮಾಡಿರುವ ವೀರಭದ್ರನ ಜಾತ್ರೆ ಈ ಭಾಗದಲ್ಲಿಯೇ ಖ್ಯಾತಿ ಪಡೆದಿದೆ. ಗೊಡಚಿಯ ಶ್ರೀ ವೀರಭದ್ರೇಶ್ವರ ದೇವಸ್ಥಾನದಲ್ಲಿ ನಿರಂತರ ಅನ್ನದಾಸೋಹ ನಡೆಸುತ್ತ ಉತ್ತರ ಕರ್ನಾಟಕದ ಧರ್ಮಸ್ಥಳ ಎಂಬ ಹೆಗ್ಗಳಿಕೆಗೆ ಈ ದೇವಸ್ಥಾನವು ಪಾತ್ರವಾಗಿದೆ.ಈ ವೇಳೆ ನಂದಿಕೋಲು, ವೀರಗಾಸೆ ಪುರವಂತರ ಕುಣಿತ, ಸಕಲವಾದ್ಯ ಗೋಷ್ಠಿಗಳೊಂದಿಗೆ ಜರುಗಿತು.
ಪುನರ್ ಅಭಿವೃದ್ಧಿಗೊಂಡ ಚೆನ್ನೈ ಪಾರ್ಕ್ ಅಮೃತ್ ರೈಲು ನಿಲ್ದಾಣವನ್ನು ಜುಲೈ 17ರಂದು ಉದ್ಘಾಟಿಸಲಿರುವ ಪ್ರಧಾನಿ ಮೋದಿ
ಅನಾಮಧೇಯ ಶವ ಪತ್ತೆ: ಮಹಿಳೆ ಕೊಲೆ ಪ್ರಕರಣ ಭೇದಿಸಿದ ಸಂಕೇಶ್ವರ ಪೊಲೀಸರು : ಆರೋಪಿ ಬಂಧನ
ಶಿವಕುಮಾರ್–ಸಿದ್ದರಾಮಯ್ಯ ಚರ್ಚೆ; ಕರ್ನಾಟಕ ಸಂಪುಟ ವಿಸ್ತರಣೆ ಕುರಿತ ಊಹಾಪೋಹಗಳಿಗೆ ಮತ್ತಷ್ಟು ಬಲ
ಶ್ರೀವಾರಿ ದರ್ಶನ, ವಸತಿ ಹಾಗೂ ಸೇವೆಗಳ ಬುಕ್ಕಿಂಗ್ಗೆ ಅಧಿಕೃತ ಟಿಟಿಡಿ ವೆಬ್ಸೈಟ್ನ್ನೇ ಬಳಸುವಂತೆ ಭಕ್ತರಿಗೆ ಟಿಟಿಡಿ ಮನವಿ
ಗಿಲ್ ಗಾಯದ ಆತಂಕದ ನಡುವೆ ಭಾರತಕ್ಕೆ ಏಕದಿನ ಸರಣಿ ಗೆಲ್ಲುವ ಅವಕಾಶ
ಜಿಎಸ್ಟಿ ಇಳಿಕೆ, ಸುಲಭ ಹಣಕಾಸು ನೆರವಿನಿಂದ ಆಟೋ ಉದ್ಯಮದ ಪ್ರಮುಖ ವಿಭಾಗಗಳಲ್ಲಿ ದಾಖಲೆಯ ಮೊದಲ ತ್ರೈಮಾಸಿಕ ಮಾರಾಟ 