ಗೆಲುವಿನ ಆಶಾಭಾವನೆಯಿಂದ ಆಟವಾಡಿದಲ್ಲಿ ಗೆಲುವು ಸಾಧ್ಯ: ಕಸಾಳೆ
Victory is possible if you play with the hope of winning: Kasale
ನೇಸರಗಿ 09: ಕ್ರೀಡಾ ಸ್ಪರ್ಧಿಗಳು ಗೆಲುವಿನ ಆಶಾಭಾವನೆಯಿಂದ ಆಟವಾಡಿದಲ್ಲಿ ಗೆಲುವು ಸಾಧ್ಯ ಎಂದು ಪ್ರಭಾರಿ ಸಮನ್ವಯ ಅಧಿಕಾರಿ ಬಿ.ಎನ್. ಕಸಾಳೆ ಹೇಳಿದರು.
ಸಮೀಪದ ವಣ್ಣೂರ ಶಾಂತಿನಿಕೇತನ ಶಾಲೆಯಲ್ಲಿ ಪ್ರಾಥಮಿಕ ಶಾಲೆಗಳ ಹಣಬರಹಟ್ಟಿ ಕ್ಲಸ್ಟರದ ಮಟ್ಟದ ಕ್ರೀಡಾಕೂಟ ಉದ್ಘಾಟಿಸಿ ಮಾತನಾಡಿ, ವಿದ್ಯಾರ್ಥಿಗಳಿಗೆ ಕ್ರೀಡೆಯಲ್ಲಿ ಪಾಲ್ಗೊಳ್ಳುವದರಿಂದ ದೈಹಿಕ, ಮಾನಸಿಕ, ಶಾರೀರಿಕವಾಗಿ ಬಲಾಡ್ಯಗೊಳ್ಳಲು ಅನುಕೂಲವಾಗುತ್ತದೆ ಎಂದರು.
ಯೋಗ ಗುರು ಸಂಗಮೇಶ ಸವದತ್ತಿಮಠ ಮಾತನಾಡಿ, ಉತ್ತಮ ಆರೋಗ್ಯ ಕಾಪಾಡಿಕೊಳ್ಳಲು ದೈಹಿಕ ಆರೋಗ್ಯ ಮುಖ್ಯವಾಗಿದೆ. ಕ್ರೀಡೆಯಲ್ಲಿ ಪಾಲ್ಗೊಳ್ಳುವುದರಿಂದ ವಿದ್ಯಾರ್ಥಿಗಳು ಗಟ್ಟಿಗೊಳ್ಳುವರು ಎಂದರು.
ಶಾಂತಿನಿಕೇತನ ಸಂಸ್ಥೆ ಅಧ್ಯಕ್ಷ ಸುರೇಶ ಗಂಗಣ್ಣವರ, ಸಿಆರ್ಪಿಗಳಾದ ಎಸ್.ಬಿ.ಸಂಗನಗೌಡರ, ರಾಜು ಹಕ್ಕಿ, ಮಹೇಶ ಯರಗಟ್ಟಿ, ಎಚ್.ಡಿ.ಕಿಲ್ಲೇದಾರ, ಹಣಮಂತ ದೊಡ್ಡನ್ನವರ, ದೈಹಿಕ ಶಿಕ್ಷಕರ ಸಂಘದ ಅಧ್ಯಕ್ಷ ಎಸ್.ಐ.ಮಿರ್ಜನ್ನವರ, ಮುಖ್ಯೋಪಾಧ್ಯಾಯ ವಿ.ಬಿ.ಕರಲಿಂಗನ್ನವರ, ಜ್ಯೂಲಿಯಟ್ ಪರ್ನಾಂಡಿಸ್, ಶಿಕ್ಷಕರು, ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.
ಚಿನ್ನ ದೋಚಿದ್ದ ಖದೀಮನ ಬಂಧನ : 15.73 ಲಕ್ಷ ಮೌಲ್ಯದ 103.97 ಗ್ರಾಂ ಚಿನ್ನ ವಶ
ಕಣಗಲಾ ಬಳಿ ಲಾರಿ, ದ್ವಿಚಕ್ರವಾಹನ ನಡುವೆ ಅಪಘಾತ : ಇಬ್ಬರ ಸಾವು
ಗಾಂಜಾ ಮಾರಾಟಗಾರರ ಮೇಲೆ ದಾಳಿ; 9,21 ಲಕ್ಷದ ವಸ್ತುಗಳ ವಶ, ಐವರ ಬಂಧನ
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್ 