ಜ.12ರಂದು ವಿದ್ಯಾರಣ್ಯಪುರ ಪರಿಸರ ಉತ್ಸವ-2020
ಬೆಂಗಳೂರು, ಜ.9 ಲಯನ್ಸ್ ಕ್ಲಬ್ ಹಾಗೂ ಸಾಯಿ ಲಕ್ಷ್ಮಣ್ ಫಿಲ್ಮ್ ಇನಸ್ಟಿಟ್ಯೂಟ್ ನಿಂದ ಜ.12ರಂದು ವಿದ್ಯಾರಣ್ಯಪುರ ಪರಿಸರ ಉತ್ಸವವನ್ನು ವಿದ್ಯಾರಣ್ಯಪುರದ ಎನ್ ಟಿಐ ಕ್ರೀಡಾಂಗಣದಲ್ಲಿ ಆಯೋಜಿಸಲಾಗಿದೆ ಎಂದು ಲಯನ್ಸ್ ಕ್ಲಬ್ ಸಂಚಾಲಕ ರವಿ ನಾಯ್ಡು ತಿಳಿಸಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ವಿದ್ಯಾರಣ್ಯಪುರ ದಲ್ಲಿರುವ ಎನ್ ಟಿ ಐ ಕ್ರೀಡಾಂಗಣದಲ್ಲಿ ಬೆ.10ರಿಂದ ರಾತ್ರಿ 10ರ ವರೆಗೆ ಈ ಕಾರ್ಯಕ್ರಮ ನಡೆಯಲಿದ್ದು, ಉತ್ಸವಕ್ಕೆ ಪರಿಸರ ವಾದಿಗಳು, ಪರಿಸರ ಚಿಂತಕರು, ರಾಜಕಾರಣಿಗಳು, ಚಲನಚಿತ್ರ ನಟ- ನಟಿಯರು, ನಿರ್ಮಾಪಕರು ಹಾಗೂ ಭಜರಂಗಿ 2 ಚಿತ್ರತಂಡ ಭಾಗವಹಿಸಲಿದೆ ಎಂದು ಹೇಳಿದರು.
ಈ ಪರಿಸರ ಉತ್ಸವದಲ್ಲಿ ಉಚಿತ ಆರೋಗ್ಯ ಶಿಬಿರ ಏರ್ಪಡಿಸಿದ್ದು, ಅಪೋಲೊ ಆಸ್ಪತ್ರೆ, ಡಾ.ಸೋಲಂಕಿ ನೇತ್ರಾಲಯ ಮತ್ತು ಶಿರಡಿ ಆಸ್ಪತ್ರೆಗಳ ಸಹಭಾಗಿತ್ವದಲ್ಲಿ ಆರೋಗ್ಯ ತಪಾಸಣೆ ನಡೆಯಲಿದ್ದು, 16 ವರ್ಷದ ಒಳಗಿನ ಮಕ್ಕಳಿಗೆ ಕಣ್ಣಿನ ತಪಾಸಣೆ ನಡೆಸಿ ಅವಶ್ಯವಿದ್ದಲ್ಲಿ ಕನ್ನಡಕ ವಿತರಿಸಲಾಗುತ್ತದೆ ಎಂದು ಅವರು ವಿವರಿಸಿದರು.
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ 