ವಿಜಯ ಹಜಾರೆ: ಕರ್ನಾಟಕದ ದಾಳಿಗೆ ನಲುಗಿದ ಗೋವಾ
ಬೆಂಗಳೂರು, ಅ.16: ವಿಜಯ ಹಜಾರೆ ಏಕದಿನ ಕ್ರಿಕೆಟ್ ಸರಣಿಯಲ್ಲಿ ಆತಿಥೇಯ ಕರ್ನಾಟಕ ತಂಡದ ಸಂಘಟಿತ ದಾಳಿಗೆ ನಲುಗಿದ ಗೋವಾ 171 ರನ್ ಗಳಿಗೆ ಸರ್ವ ಪತನ ಹೊಂದಿದೆ.
ಮೊದಲು ಬ್ಯಾಟ್ ಮಾಡಿದ ಗೋವಾ ತಂಡದ ಆರಂಭಿಕ ಆದಿತ್ಯ ಕೌಶಿಕ್ ಅವರನ್ನು ಹೊರತು ಪಡಿಸಿದರೆ, ಉಳಿದ ಯಾವ ಬ್ಯಾಟ್ಸ್ ಮನ್ ಗಳು ರನ್ ಕಲೆ ಹಾಕುವಲ್ಲಿ ಸಫಲರಾಗಲಿಲ್ಲ. ಪರಿಣಾಮ ಪ್ರವಾಸಿ ತಂಡ 47.5 ಓವರ್ ಗಳಲ್ಲಿ 171 ರನ್ ಗಳಿಗೆ ಆಲೌಟ್ ಆಯಿತು.
ಕರ್ನಾಟಕದ ತಂಡದ ಪರ ವರ್ಷಗಳ ಕಾಲ ಆಡಿದ ಅನುಭವ ಹೊಂದಿರುವ ಸಿಎಂ ಗೌತಮ್ 17 ಹಾಗೂ ಅಮಿತ್ ವರ್ಮಾ 10 ರನ್ ಬಾರಿಸಿದರು. ಉಳಿದಂತೆ ಕೆಳ ಮಧ್ಯಮ ಕ್ರಮಾಂಕದಲ್ಲಿ ದರ್ಶನ್ ಮಿಸಳ್ 76 ಎಸೆತಗಳಲ್ಲಿ 33 ರನ್ ಬಾರಿಸಿ ತಂಡದ ಮೊತ್ತ ಹಿಗ್ಗಿಸಿದರು.
ಆರಂಭಿಕ ಆದಿತ್ಯ 86 ಎಸೆತಗಳಲ್ಲಿ 4 ಬೌಂಡರಿ, 4 ಸಿಕ್ಸರ್ ಸಹಾಯದಿಂದ 75 ರನ್ ಬಾರಿಸಿ ತಂಡಕ್ಕೆ ಆಸರೆಯಾದರು.
ಕರ್ನಾಟಕದ ಪರ ಸ್ಪಿನ್ ಬೌಲರ್ ಗಳು ಕಮಾಲ್ ಪ್ರದರ್ಶನ ನೀಡಿದರು. ಪ್ರವೀಣ್ ದುಬೆ 29 ರನ್ ನೀಡಿ ಮೂರು ವಿಕೆಟ್ ಕಬಳಿಸಿದರು. ಜೆ.ಸುಚಿತ್ ಹಾಗೂ ಅಭಿಮನ್ಯು ಮಿಥುನ್ ತಲಾ ಎರಡು ವಿಕೆಟ್ ಪಡೆದರು.
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ
ಹಳೆದಿಗ್ಗೆವಾಡಿ ಗ್ರಾಮದ ಮಹಾದೇವ ಗಂಗಾಯಿ ಅಜ್ಜ ವಿಧಿವಶ
ಆರೈಕೆಗಿದ್ದವನಿಂದ 1.02 ಕೋಟಿಯ 930 ಗ್ರಾಂ ಚಿನ್ನ ಕಳ್ಳತನ: ಇಬ್ಬರ ಬಂಧನ, 73.03 ಲಕ್ಷದ ಚಿನ್ನ ವಶಕ್ಕೆ 