ವಿಜಯವಾಡ,: ಜನಸೇನಾ ಪಕ್ಷಕ್ಕೆ ತೆಲುಗು ನಟ ನಾಗಬಾಬು ಸೇರ್ಪಡೆ
ವಿಜಯವಾಡ, ಮಾ 20 : ಖ್ಯಾತ ತೆಲುಗು ನಟ ಹಾಗೂ ನಿರ್ಮಾಪಕ ಕೋನಿಡೆಲ ನಾಗೇಂದ್ರ ಬಾಬು(ನಾಗ ಬಾಬು) ಬುಧವಾರ ತಮ್ಮ ಸಹೋದರ ಪವನ್ ಕಲ್ಯಾಣ್ ಅವರ ಜನಸೇನಾ ಪಕ್ಷಕ್ಕೆ ಅಧಿಕೃತವಾಗಿ ಸೇರ್ಪಡೆಗೊಂಡರು.
ಈ ಕುರಿತು ಸುದ್ದಿಗಾರರಿಗೆ ಮಾಹಿತಿ ನೀಡಿದ ಪವನ್ ಕಲ್ಯಾಣ್, ನಾಗಬಾಬು ಅವರಲ್ಲಿನ ರಾಜಕೀಯ ಜಾಣ್ಮೆ ಅರಿತು ಅವರನ್ನು ಪಕ್ಷಕ್ಕೆ ಸೇರಿಸುವಂತೆ ಒತ್ತಡ ಹೇರಿದ್ದೆ. ಅವರಿಗೆ ಪ್ರಸಕ್ತ ರಾಜಕೀಯ ಚಿತ್ರಣದ ಸ್ಪಷ್ಟ ಚಿತ್ರಣವಿದೆ. ಏಪ್ರಿಲ್ 11ರಂದು ನಡೆಯಲಿರುವ ಲೋಕಸಭಾ ಚುನಾವಣೆಯಲ್ಲಿ ನಾಗಬಾಬು ಅವರು ಪೂರ್ವ ಗೋದಾವರಿ ಜಿಲ್ಲೆಯ ನರಸಾಪುರ ಕ್ಷೇತ್ರದಿಂದ ಸ್ಪರ್ಧಿಸಲಿದ್ದಾರೆ ಎಂದರು.
ನಾಗಬಾಬು ಮಾತನಾಡಿ, ತಮ್ಮನ ಒತ್ತಾಯಕ್ಕೆ ಮಣಿದು ಬೇರೆಲ್ಲಾ ಚಟುವಟಿಕೆಗಳನ್ನು ಬದಿಗೊತ್ತಿ ರಾಜಕೀಯ ಪ್ರವೇಶಿಸಿದ್ದೇನೆ ಎಂದರು.
ನಾಗಬಾಬು ಪಕ್ಷ ಸೇರುವ ಕುರಿತು ಬಹಳ ಹಿಂದಿನಿಂದಲೇ ವದಂತಿ ಹರಿದಾಡುತ್ತಿತ್ತು. ಕೆಳ ದಿನಗಳ ಹಿಂದಷ್ಟೇ ಅವರು ಪಕ್ಷದ ಸಾರ್ವಜನಿಕ ಸಭೆಯಲ್ಲಿ ಪಾಲ್ಗೊಂಡಿದ್ದರು.
ನಾಗಬಾಬು ಹಾಗೂ ಪವನ್ ಕಲ್ಯಾಣ್ ಅವರು ಈ ಹಿಂದೆ ಪ್ರಜಾ ರಾಜ್ಯ ಪಕ್ಷ ಸ್ಥಾಪಿಸಿ ನಂತರ ಕಾಂಗ್ರೆಸ್ ಸೇರ್ಪಡೆಗೊಂಡ ಮಾಜಿ ಕೇಂದ್ರ ಸಚಿವ ಕೆ.ಚಿರಂಜೀವಿ ಅವರ ಸಹೋದರರಾಗಿದ್ದಾರೆ.
ಗಾಂಜಾ ಮಾರಾಟಗಾರರ ಮೇಲೆ ದಾಳಿ; 9,21 ಲಕ್ಷದ ವಸ್ತುಗಳ ವಶ, ಐವರ ಬಂಧನ
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ 