ವಿಜಯಪುರ: ಸೃಜನಶೀಲತೆಯ ಸದುಪಯೋಗ ಪಡೆದುಕೊಳ್ಳಿ: ಡಿವೈಎಸ್ಪಿ ಗಜಾಕೋಶ ಹೇಳಿಕೆ
ಲೋಕದರ್ಶನ ವರದಿ
ವಿಜಯಪುರ 14: ವಿದ್ಯಾರ್ಥಿಗಳಲ್ಲಿ ಸೃಜನಶೀಲತೆ ಇದ್ದು, ಇದರ ಸದುಪಯೋಗವಾಗಬೇಕು. ಪ್ರತಿಯೊಂದು ಹಂತದಲ್ಲಿ ಸೃಜನಾತ್ಮಕತೆ ಬೆಳೆಸಿಕೊಂಡು ಮುಂದೆ ಬರಬೇಕು ಉತ್ತಮ ಸಮಾಜಮುಖಿ ಬದುಕು ರೂಪಿಸಿಕೊಳ್ಳಬೇಕು ಎಂದು ಇಂಟಲಿಜನ್ಸ್ ವಿಭಾಗದ ಡಿವೈಎಸ್ಪಿ ಪಿ ಡಿ ಗಜಾಕೋಶ ಹೇಳಿದರು.
ನಗರದ ಸಿಕ್ಯಾಬ ಶಿಕ್ಷಣ ಸಂಸ್ಥೆಯ ಎಂ ಬಿ ಎ ವಿಭಾಗದ ವತಿಯಿಂದ ಹಮ್ಮಿಕೊಳ್ಳಲಾದ ಆಹಾರಮೇಳ ಉದ್ಘಾಟಿಸಿ ಮಾತನಾಡಿದ ಅವರು, ವಿದ್ಯಾಥರ್ಿಗಳು ಕಲಿಕೆಯ ಜೊತೆಗೆ ಕ್ರೀಯಾತ್ಮಕ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳುವುದರಿಂದ ನಮ್ಮಲ್ಲಿ ಉತ್ತಮ ವಿಚಾರಧಾರೆಗಳು ಮೂಡುತ್ತವೆ, ಹೊಸ ಹೊಸ ವಿಚಾರಗಳು ನಮ್ಮಲ್ಲಿ ಬಂದು ಜೀವನಮಾರ್ಗಕ್ಕೆ ಸಹಕಾರಿಯಾಗುತ್ತವೆ. ಈ ನಿಟ್ಟಿನಲ್ಲಿ ಸೃಜನಶೀಲತೆಗೆ ಪೂರಕವೆಂಬಂತೆ ಆಹಾರಮೇಳ ಹಮ್ಮಿಕೊಂಡಿರುವ ಕಾರ್ಯ ಶ್ಲಾಘನೀಯವಾಗಿದೆ ಎಂದರು.
ಅಧ್ಯಕ್ಷತೆ ವಹಿಸಿದ್ದ ಸಂಸ್ಥೆಯ ಸಂಸ್ಥಾಪಕ ಅಧ್ಯಕ್ಷ ಎಸ್ ಎ ಪುಣೇಕರ ಮಾತನಾಡಿ, ಕಲಿಕೆ ಜೊತೆಗೆ ನಮ್ಮ ಕಾಲೇಜಿನ ವಿದ್ಯಾಥರ್ಿಗಳು ಆಹಾರಮೇಳ ಹಮ್ಮಿಕೊಂಡು ಮಾದರಿಯಾಗಿದ್ದಾರೆ. ಜೀವನಮಾರ್ಗ ರೂಪಿಸಿಕೊಳ್ಳಲು ಸಹಕಾರಿಯಾಗಲಿದೆ ಎಂದರು.
ಕಾರ್ಯಕ್ರಮದಲ್ಲಿ ನಿವೃತ್ತ ಸೇನಾಧಿಕಾರಿಗಳಾದ ಮಲ್ಲಪ್ಪ ತೋಟದ, ಜೆ ಡಿ ಗುಲಬಾಬಿ, ಸಂಸ್ಥೆಯ ಕಾರ್ಯದಶರ್ಿ ಎ ಎಸ್ ಪಾಟೀಲ, ನಿದರ್ೇಶಕರಾದ ಸಲಾವುದ್ದೀನ ಪುಣೇಕರ, ಅಜರುದ್ದೀನ ಸಗರ, ಸಂದೀಪ ಪಾಟೀಲ, ಪರವೇಜ ರೋಜಿನದಾರ, ಅಂಝಲ,ಅರೆಲ್ಲಾ,ಅಶ್ವಿನಿ, ಈಸ್ಮಾಯಿಲ ಸೋಹೆಲ್ ಸೇರಿದಂತೆ ಕಾಲೇಜಿನ ವಿದ್ಯಾರ್ಥಿಗಳು ಕಾಲೇಜಿನ ಸಿಬ್ಬಂದಿ ಸಾರ್ವಜನಿಕರು ಪಾಲ್ಗೊಂಡಿದ್ದರು.
ಗಾಂಜಾ ಮಾರಾಟಗಾರರ ಮೇಲೆ ದಾಳಿ; 9,21 ಲಕ್ಷದ ವಸ್ತುಗಳ ವಶ, ಐವರ ಬಂಧನ
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ 