ವಿಜಯಪುರ: ಸೃಜನಶೀಲತೆಯ ಸದುಪಯೋಗ ಪಡೆದುಕೊಳ್ಳಿ: ಡಿವೈಎಸ್ಪಿ ಗಜಾಕೋಶ ಹೇಳಿಕೆ
ಲೋಕದರ್ಶನ ವರದಿ
ವಿಜಯಪುರ 14: ವಿದ್ಯಾರ್ಥಿಗಳಲ್ಲಿ ಸೃಜನಶೀಲತೆ ಇದ್ದು, ಇದರ ಸದುಪಯೋಗವಾಗಬೇಕು. ಪ್ರತಿಯೊಂದು ಹಂತದಲ್ಲಿ ಸೃಜನಾತ್ಮಕತೆ ಬೆಳೆಸಿಕೊಂಡು ಮುಂದೆ ಬರಬೇಕು ಉತ್ತಮ ಸಮಾಜಮುಖಿ ಬದುಕು ರೂಪಿಸಿಕೊಳ್ಳಬೇಕು ಎಂದು ಇಂಟಲಿಜನ್ಸ್ ವಿಭಾಗದ ಡಿವೈಎಸ್ಪಿ ಪಿ ಡಿ ಗಜಾಕೋಶ ಹೇಳಿದರು.
ನಗರದ ಸಿಕ್ಯಾಬ ಶಿಕ್ಷಣ ಸಂಸ್ಥೆಯ ಎಂ ಬಿ ಎ ವಿಭಾಗದ ವತಿಯಿಂದ ಹಮ್ಮಿಕೊಳ್ಳಲಾದ ಆಹಾರಮೇಳ ಉದ್ಘಾಟಿಸಿ ಮಾತನಾಡಿದ ಅವರು, ವಿದ್ಯಾಥರ್ಿಗಳು ಕಲಿಕೆಯ ಜೊತೆಗೆ ಕ್ರೀಯಾತ್ಮಕ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳುವುದರಿಂದ ನಮ್ಮಲ್ಲಿ ಉತ್ತಮ ವಿಚಾರಧಾರೆಗಳು ಮೂಡುತ್ತವೆ, ಹೊಸ ಹೊಸ ವಿಚಾರಗಳು ನಮ್ಮಲ್ಲಿ ಬಂದು ಜೀವನಮಾರ್ಗಕ್ಕೆ ಸಹಕಾರಿಯಾಗುತ್ತವೆ. ಈ ನಿಟ್ಟಿನಲ್ಲಿ ಸೃಜನಶೀಲತೆಗೆ ಪೂರಕವೆಂಬಂತೆ ಆಹಾರಮೇಳ ಹಮ್ಮಿಕೊಂಡಿರುವ ಕಾರ್ಯ ಶ್ಲಾಘನೀಯವಾಗಿದೆ ಎಂದರು.
ಅಧ್ಯಕ್ಷತೆ ವಹಿಸಿದ್ದ ಸಂಸ್ಥೆಯ ಸಂಸ್ಥಾಪಕ ಅಧ್ಯಕ್ಷ ಎಸ್ ಎ ಪುಣೇಕರ ಮಾತನಾಡಿ, ಕಲಿಕೆ ಜೊತೆಗೆ ನಮ್ಮ ಕಾಲೇಜಿನ ವಿದ್ಯಾಥರ್ಿಗಳು ಆಹಾರಮೇಳ ಹಮ್ಮಿಕೊಂಡು ಮಾದರಿಯಾಗಿದ್ದಾರೆ. ಜೀವನಮಾರ್ಗ ರೂಪಿಸಿಕೊಳ್ಳಲು ಸಹಕಾರಿಯಾಗಲಿದೆ ಎಂದರು.
ಕಾರ್ಯಕ್ರಮದಲ್ಲಿ ನಿವೃತ್ತ ಸೇನಾಧಿಕಾರಿಗಳಾದ ಮಲ್ಲಪ್ಪ ತೋಟದ, ಜೆ ಡಿ ಗುಲಬಾಬಿ, ಸಂಸ್ಥೆಯ ಕಾರ್ಯದಶರ್ಿ ಎ ಎಸ್ ಪಾಟೀಲ, ನಿದರ್ೇಶಕರಾದ ಸಲಾವುದ್ದೀನ ಪುಣೇಕರ, ಅಜರುದ್ದೀನ ಸಗರ, ಸಂದೀಪ ಪಾಟೀಲ, ಪರವೇಜ ರೋಜಿನದಾರ, ಅಂಝಲ,ಅರೆಲ್ಲಾ,ಅಶ್ವಿನಿ, ಈಸ್ಮಾಯಿಲ ಸೋಹೆಲ್ ಸೇರಿದಂತೆ ಕಾಲೇಜಿನ ವಿದ್ಯಾರ್ಥಿಗಳು ಕಾಲೇಜಿನ ಸಿಬ್ಬಂದಿ ಸಾರ್ವಜನಿಕರು ಪಾಲ್ಗೊಂಡಿದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 