ವಿಜಯಪುರ: ಅನಾಮಧೇಯ ಗಂಡುಮಗು ರಕ್ಷಣೆ
ಲೋಕದರ್ಶನ ವರದಿ
ವಿಜಯಪುರ 11: ಸಿಂದಗಿ ತಾಲೂಕಿನ ತೋಟದ ವಸ್ತಿಯಲ್ಲಿ ಪತ್ತೆಯಾಗಿದ್ದ ಅನಾಮಧೇಯ ಗಂಡು ಮಗುವನ್ನು ರಕ್ಷಿಸಿ ಮಕ್ಕಳ ಸಹಾಯವಾಣಿ ತಂಡ ವಿಜಯಪುರ ಜಿಲ್ಲಾ ಆಸ್ಪತ್ರೆಗೆ ದಾಖಲಿಸಿದೆ.
ಕಳೆದ ದಿ.7 ರಂದು ಸಾಯಂಕಾಲ ಈ ಮಗು ತೋಟದವಸ್ತಿಯಲ್ಲಿ ಪತ್ತೆಯಾಗಿತ್ತು, ಈ ಮಗುವನ್ನು ಗಮನಿಸಿದ ಸಾರ್ವಜನಿಕರೊಬ್ಬರು ತಮ್ಮ ಮನೆಯಲ್ಲಿ ತಂದು ಸಾಕಿರುವ ಬಗ್ಗೆ ಮಕ್ಕಳ ಸಹಾಯವಾಣಿಗೆ ಮಕ್ಕಳ ಸಹಾಯವಾಣಿ ತಂಡಕ್ಕೆ ಮಂಗಳವಾರ ಸಾಯಂಕಾಲ ದೂರವಾಣಿ ಮೂಲಕ ಮಾಹಿತಿ ಬಂದಿತ್ತು. ತಕ್ಷಣವೇ ಮಕ್ಕಳ ಸಹಾಯವಾಣಿ ಸಂಯೋಜಕಿ ಸುನಂದಾ ತೋಳಬಂದಿ ನೇತೃತ್ವದ ಮೂರು ಜನರ ತಂಡ ಸಿಂದಗಿ ಪೊಲೀಸ್ ಸಿಬ್ಬಂದಿಯೊಂದಿಗೆ ಮಗು ಇದ್ದ ಸ್ಥಳಕ್ಕೆ ತೆರಳಿ ಮಗುವನ್ನು ರಕ್ಷಿಸಿ ವಿಜಯಪುರ ಜಿಲ್ಲಾ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಿದೆ. ಮಗು ಆರೋಗ್ಯವಾಗಿದೆ.
ಈ ರಕ್ಷಣಾ ಕಾರ್ಯಾಚರಣೆಯಲ್ಲಿ ಮಕ್ಕಳ ಸಹಾಯವಾಣಿ ತಂಡದ ಸದಸ್ಯರಾದ ಶಶಿಕಲಾ ಜಾಬೇನವರ, ಸುವಣರ್ಾ ವಾಲಿಕಾರ, ಪೊಲೀಸ್ ಸಿಬ್ಬಂದಿ ಆರ್.ಬಿ. ಕಗ್ಗೋಡ ಅವರು ಭಾಗವಹಿಸಿದ್ದರು.
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ
ಹಳೆದಿಗ್ಗೆವಾಡಿ ಗ್ರಾಮದ ಮಹಾದೇವ ಗಂಗಾಯಿ ಅಜ್ಜ ವಿಧಿವಶ
ಆರೈಕೆಗಿದ್ದವನಿಂದ 1.02 ಕೋಟಿಯ 930 ಗ್ರಾಂ ಚಿನ್ನ ಕಳ್ಳತನ: ಇಬ್ಬರ ಬಂಧನ, 73.03 ಲಕ್ಷದ ಚಿನ್ನ ವಶಕ್ಕೆ 