ವಿಜಯಪುರ: ಬಿಜೆಪಿ ನೂತನ ಅಧ್ಯಕ್ಷರಾಗಿ ಆರ್.ಎಸ್.ಪಾಟೀಲ
ವಿಜಯಪುರ 13: ಜಿಲ್ಲಾ ಭಾರತೀಯ ಜನತಾ ಪಕ್ಷದ ನೂತನ ಅಧ್ಯಕ್ಷರಾಗಿ ಆರ್.ಎಸ್. ಪಾಟೀಲ (ಕೂಚಬಾಳ) ಅಧಿಕಾರ ಸ್ವೀಕರಿಸಿದರು.
ವಿಜಯಪುರದ ಗುರುದತ್ತ ಮಂಗಲ ಕಾರ್ಯಾಲಯದಲ್ಲಿ ಜರುಗಿದ ಪದಗ್ರಹಣ ಸಮಾರಂಭದಲ್ಲಿ ನಿಕಟಪೂರ್ವ ಅಧ್ಯಕ್ಷ ಚಂದ್ರಶೇಖರ ಕವಟಗಿ ಅವರು ನೂತನ ಜಿಲ್ಲಾಧ್ಯಕ್ಷ ಆರ್.ಎಸ್. ಪಾಟೀಲ ಅವರಿಗೆ ಪಕ್ಷದ ಬಾವುಟ ನೀಡಿ ಅಧಿಕಾರ ಹಸ್ತಾಂತರಿಸಿದರು.
ಈ ಸಂದರ್ಭದಲ್ಲಿ ಪಕ್ಷದ ರಾಜ್ಯ ಚುನಾವಣೆ ಸಹ ಉಸ್ತುವಾರಿ ಹಾಗೂ ಶಾಸಕ ಹಾಲಪ್ಪ ಆಚಾರ್ಯ, ಸಂಸದ ರಮೇಶ ಜಿಗಜಿಣಗಿ, ಶಾಸಕ ಸೋಮನಗೌಡ ಪಾಟೀಲ (ಸಾಸನೂರ), ಪಕ್ಷದ ಜಿಲ್ಲಾ ಚುನಾವಣೆ ಉಸ್ತುವಾರಿ ಅಮರನಾಥ ಪಾಟೀಲ, ಮಾಜಿ ಸಚಿವರಾದ ಅಪ್ಪಾಸಾಹೇಬ ಪಟ್ಟಣಶೆಟ್ಟಿ, ಎಸ್.ಕೆ. ಬೆಳ್ಳುಬ್ಬಿ, ಡಾ.ಗೋಪಾಲ ಕಾರಜೋಳ, ದಯಾಸಾಗರ ಪಾಟೀಲ, ಸಿದ್ಧಲಿಂಗ ಹಂಜಗಿ, ಪ್ರಕಾಶ ಅಕ್ಕಲಕೊಟ, ವಿಜುಗೌಡ ಪಾಟೀಲ, ರವಿಕಾಂತ ಬಗಲಿ, ಸಂಗರಾಜ ದೇಸಾಯಿ, ವಿವೇಕಾನಂದ ಡಬ್ಬಿ ಹಾಗೂ ಪಕ್ಷದ ಎಲ್ಲ ಮಂಡಲಗಳ ಅಧ್ಯಕ್ಷರುಗಳು ಉಪಸ್ಥಿತರಿದ್ದರು.
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ
ಹಳೆದಿಗ್ಗೆವಾಡಿ ಗ್ರಾಮದ ಮಹಾದೇವ ಗಂಗಾಯಿ ಅಜ್ಜ ವಿಧಿವಶ 