ವಿಜಯಪುರ: ತಂಬಾಕು ಉತ್ಪನ್ನಗಳ ಮಾರಾಟ ನಿಷೇಧ
ಲೋಕದರ್ಶನ ವರದಿ
ವಿಜಯಪುರ 23: ಜಿಲ್ಲೆಯ ಶಾಲಾ ಕಾಲೇಜು ಹಾಗೂ ಸರ್ಕಾರಿ ಕಚೇರಿಗಳ 100 ಯಾಡರ್್ ವ್ಯಾಪ್ತಿಯಲ್ಲಿ ತಂಬಾಕು ಉತ್ಪನ್ನಗಳ ಮಾರಾಟ ಮತ್ತು ಸೇವನೆಯನ್ನು ನಿಷೇಧಿಸಲಾಗಿದೆ ಎಂದು ಜಿಲ್ಲಾಧಿಕಾರಿ ವೈ.ಎಸ್.ಪಾಟೀಲ ತಿಳಿಸಿದ್ದಾರೆ.
ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಇಂದು ರಾಷ್ಟ್ರೀಯ ತಂಬಾಕು ನಿಯಂತ್ರಣ ಕಾರ್ಯಕ್ರಮದಡಿ ಜಿಲ್ಲಾ ಸಮನ್ವಯ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿದ್ದ ಜಿಲ್ಲೆಯಲ್ಲಿ ತಂಬಾಕು ಸೇವನೆಯಿಂದ ಆಗುವ ದುಷ್ಪರಿಣಾಮಗಳ ಎಚ್ಚರಿಕೆವಿಲ್ಲದ ತಂಬಾಕು ಉತ್ಪನ್ನ ಮತ್ತು ಇ-ಸಿಗರೇಟಗಳನ್ನು ನಿಶೇಧಿಸಲಾಗಿದ್ದು ಈ ಕುರಿತು ಸೂಕ್ತ ನಿಗಾ ಇಡುವಂತೆ ಅಧಿಕಾರಿಗಳಿಗೆ ಸೂಚಿಸಿದರು.
ಕೋಟ್ಪಾ ಕಾಯ್ದೆ ಉಲ್ಲಂಗಿಸಿ ತಂಬಾಕು ಉತ್ಪನ್ನ ಮಾರಾಟ ವಾಗದಂತೆ ಎಚ್ಚರ ವಹಿಸಬೇಕು. ಈ ಕಾಯ್ದೆಯಡಿ ಉನ್ನತ ಅನುಷ್ಟಾನಕ್ಕಾಗಿ ಆಯ್ಕೆಯಾದ ಸಿಂದಗಿ ಮತ್ತು ವಿಜಯಪುರ ತಂಬಾಕು ಮುಕ್ತವನ್ನಾಗಿಸಲು ಪ್ರಯತ್ನಿಸಬೇಕು, ಹೆಚ್ಚು ತಂಬಾಕು ಸೇವನೆ ಇರುವ ಪ್ರದೇಶ, ತಾಲೂಕುಗಳನ್ನು ಗುರುತಿಸಿ ಅರಿವು ಮೂಡಿಸಬೇಕು.
ತಂಬಾಕು ನಿಯಂತ್ರಣ ಘಟಕದ ನಿಯಂತ್ರಣಾಧಿಕಾರಿ ಮಹಾಂತೇಶ ಉಳ್ಳಾಗಡ್ಡಿ, ಜಿಲ್ಲಾ ತಂಬಾಕು ನಿಯಂತ್ರಣಾಧಿಕಾರಿ ಮಲ್ಲನಗೌಡ ಬಿರಾದಾರ ಸೇರಿದಂತೆ ಇತರ ಅಧಿಕಾರಿಗಳು ಉಪಸ್ಥಿತರಿದ್ದರು.
ಗಾಂಜಾ ಮಾರಾಟಗಾರರ ಮೇಲೆ ದಾಳಿ; 9,21 ಲಕ್ಷದ ವಸ್ತುಗಳ ವಶ, ಐವರ ಬಂಧನ
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ 