ವಿಜಯಪುರ: ವೃದ್ಧೆ ಕೊಲೆ: ಆರೋಪಿ ಬಂಧನ
ಲೋಕದರ್ಶನ ವರದಿ
ವಿಜಯಪುರ 05: ವಿಜಯಪುರ ಶಾಸ್ತ್ರೀನಗರದ ಜನ್ನತ್ ಮ್ಯಾರೇಜ್ ಹಾಲ್ ಹತ್ತಿರವಿರುವ ತನ್ನ ಮನೆಯಲ್ಲಿ ಒಬ್ಬಂಟಿಯಾಗಿ ವಾಸವಾಗಿದ್ದ ವೃದ್ಧ ಮಹಿಳೆ ರೇಖಾ ಶಿವಾನಂದ ದೇಶಮಾನೆ (ನಿವೃತ್ತ ನರ್ಸ) ಅವರನ್ನು ಕೊಲೆ ಮಾಡಿದ ಆರೋಪಿಯನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.
ಬಂಧಿತ ಆರೋಪಿಯನ್ನು ಅಥಣಿಯ ಕೇದಾರಿ ಉರ್ಫ್ ಜ್ಯೊತಿಬಾ ಪರಶುರಾಮ ಪೋಳ (37) ಎಂಬಾತನೇ ಬಂಧಿತ ಆರೋಪಿ. ಕಳೆದ ಅಕ್ಟೋಬರ್ 13 ರಂದು ರಾತ್ರಿ ಜನ್ನತ್ ಮ್ಯಾರೇಜ್ ಹಾಲ್ ಬಳಿ ಇರುವ ತನ್ನ ಮನೆಯಲ್ಲಿ ವಾಸವಿದ್ದ ರೇಖಾ ದೇಶಮಾನೆ ಅವರನ್ನು ಯಾರೋ ಆರೋಪಿತರು ಅವರ ಸೀರೆಯಿಂದ ಕುತ್ತಿಗೆಗೆ ಬಿಗಿದು ಬರ್ಬರವಾಗಿ ಹತ್ಯೆ ಮಾಡಿದ ಬಗ್ಗೆ ನಗರದ ಗಾಂಧಿಚೌಕ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ಈ ಪ್ರಕರಣದ ತನಿಖೆ ಕೈಕೊಂಡ ಪೊಲೀಸರು ಕೊಲೆ ಆರೋಪಿ ಕೇದಾರಿ ಯನ್ನು ಬಂಧಿಸಿದ್ದಾರೆ. ಮೃತ ರೇಖಾ ದೇಶಮಾನೆ ಅವರ ಮನೆಯಲ್ಲಿ ಬಾಡಿಗೆದಾರನಾಗಿದ್ದ ಆರೋಪಿತನು ಕೊಲೆ ನಡೆದ ದಿನದಿಂದ ನಾಪತ್ತೆಯಾಗಿದ್ದ. ದಿ. 4 ರಂದು ಮಹಾಲಿಂಗಪುರ ಬಸ್ ನಿಲ್ದಾಣದಲ್ಲಿ ಪೊಲೀಸರು ಬಂದಿಸಿದ್ದು, ನಂತರ ವಿಚಾರಣೆಗೊಳಪಡಿಸಿದಾಗ ಆರೋಪಿತನು ರೇಖಾ ದೇಶಮಾನೆ ಅವರನ್ನು ಕತ್ತು ಹಿಸುಕಿ ಕೊಲೆ ಮಾಡಿದ ಬಗ್ಗೆ ಒಪ್ಪಿಕೊಂಡಿರುತ್ತಾನೆ ಎಂದು ಎಸ್ಪಿ ನಿಕ್ಕಂ ಹೇಳಿದರು.
ಕೊಲೆ ಪ್ರಕರಣ ಪತ್ತೆ ಹಚ್ಚಲು ಎಎಸ್ಪಿ ಬಿ.ಎಸ್. ನೇಮಿಗೌಡ ಅವರ ನೇತೃತ್ವದಲ್ಲಿ ಡಿವೈಎಸ್ಪಿ ಲಕ್ಷ್ಮೀನಾರಾಯಣ, ಸಿಪಿಐ ರವೀಂದ್ರ ನಾಯ್ಕೋಡಿ, ಪಿಎಸ್ಐ ಶರಣಗೌಡ ಗೌಡರ, ಪಿಎಸ್ಐ ಸತೀಶ ಕಣಮೇಶ್ವರ, ಸಿಬ್ಬಂದಿಗಳಾದ ಎಸ್.ಬಿ. ಚನಶೆಟಿಟ, ಬಾಬು ಗುಡಿಮನಿ, ಎಚ್.ಎಚ್. ಜಮಾದಾರ, ಜಿ.ವೈ. ದಾಸರ, ಎನ್.ಕೆ. ಮುಲ್ಲಾ, ಎಂ.ಬಿ. ಢವಳಗಿ, ಸಿದ್ದು ಬಿರಾದಾರ, ತಾಂತ್ರಿಕ ನೆರವು ನೀಡಿದ ಸುನೀಲ ಗೌಳಿ, ಗುಂಡು ಗಿರಣಿವಡ್ಡರ ಮೊದಲಾದವರನ್ನೊಳಗೊಂಡ ತಂಡ ರಚಿಸಲಾಗಿತ್ತು. ಎಸಿ ಆರೋಪಿಯನ್ನು ಬಂಧಿಸಿದೆ. ಈ ತಂಡದ ಕಾರ್ಯವನ್ನು ಶ್ಲ್ಯಾಘಿಸಿ ಬಹುಮಾನ ಘೋಷಿಸಲಾಗಿದೆ
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ
ಹಳೆದಿಗ್ಗೆವಾಡಿ ಗ್ರಾಮದ ಮಹಾದೇವ ಗಂಗಾಯಿ ಅಜ್ಜ ವಿಧಿವಶ
ಆರೈಕೆಗಿದ್ದವನಿಂದ 1.02 ಕೋಟಿಯ 930 ಗ್ರಾಂ ಚಿನ್ನ ಕಳ್ಳತನ: ಇಬ್ಬರ ಬಂಧನ, 73.03 ಲಕ್ಷದ ಚಿನ್ನ ವಶಕ್ಕೆ 