ವಿಜಯಪುರ: ರೇಡಿಯೋ ಜಾಕಿ ಕಾರ್ಯಾಗಾರ
ವಿಜಯಪುರ 22: ರೇಡಿಯೋದಲ್ಲಿ ನಾವು ಕಾರ್ಯನಿರ್ವಹಿಸುವ ಮೂಲಕ ನಾವು ಕೇಳುಗರ ಹೃದಯವನ್ನು ಮುಟ್ಟಬೇಕಾದರೆ ನಮ್ಮಲ್ಲಿ ಉತ್ತಮ ಭಾಷಾ ಶೈಲಿ, ಶಬ್ಧ ಬಂಡಾರವನ್ನು ಹೆಚ್ಚಿಸಿಕೊಳ್ಳಬೇಕಾಗಿದ್ದು ಅವಶ್ಯ ಎಂದು ಧಾರವಾಡ ಆಕಾಶವಾಣಿ ಕೇಂದ್ರದ ಡಾ.ಶಶಿಧರ ನರೇಂದ್ರ ಅಭಿಪ್ರಾಯಪಟ್ಟರು.
ನಗರದ ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯದ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗ ಹಾಗೂ ಬೆಂಗಳೂರು ವಾತರ್ಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಇವರ ಸಂಯುಕ್ತಾಶ್ರಯದಲ್ಲಿ ಮಂಗಳವಾರ ಹಮ್ಮಿಕೊಂಡಿದ್ದ ಮೂರು ದಿನದ ರೇಡಿಯೋ ಜಾಕಿ ಕಾಯರ್ಾಗಾರವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಸಹಾಯಕ ಪ್ರಾಧ್ಯಾಪಕಿ ಡಾ.ತಹಮೀನಾ ಕೋಲಾರ ಸ್ವಾಗತಿಸಿದರು. ಸಹಾಯಕ ಪ್ರಾಧ್ಯಾಪಕ ಸಂದೀಪ ಪ್ರಾಸ್ತಾವಿಕ ಮಾತನಾಡಿದರು. ಸಂಶೋಧನಾ ಸಂಯೋಜಕಿ ದೀಪಾ ತಟ್ಟಿಮನಿ ಹಾಗೂ ಸಹ ಸಂಶೋಧಕಿ ಸೃಷ್ಟಿ ಜವಳೆಕರ ಅತಿಥಿಗಳ ಪರಿಚವಿಸಿದರು, ಸಂಶೋಧನಾ ವಿದ್ಯಾರ್ಥಿನಿ ಜ್ಞಾನಜ್ಯೋತಿ.ಅ.ಚಾಂದಕವಠೆ ನಿರೂಪಿಸಿದರು, ಸಂಶೋಧನಾ ವಿದ್ಯಾರ್ಥಿನಿ ಸುವರ್ಣ ಕಂಬಿ ವಂದಿಸಿದರು.
ಕಾರ್ಯಕ್ರಮದಲ್ಲಿ ರಾಜ್ಯದ ನಾನಾ ಜಿಲ್ಲೆಗಳ ಕಾಲೇಜುಗಳಿಂದ ಬಂದಂತಹ ವಿದ್ಯಾರ್ಥಿನಿಯರು, ವಿಭಾಗದ ವಿದ್ಯಾರ್ಥಿನಿಯರು ಮತ್ತು ವಿಭಾಗದ ಸಿಬ್ಬಂದಿ ಉಪಸ್ಥಿತರಿದ್ದರು.
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ
ಹಳೆದಿಗ್ಗೆವಾಡಿ ಗ್ರಾಮದ ಮಹಾದೇವ ಗಂಗಾಯಿ ಅಜ್ಜ ವಿಧಿವಶ
ಆರೈಕೆಗಿದ್ದವನಿಂದ 1.02 ಕೋಟಿಯ 930 ಗ್ರಾಂ ಚಿನ್ನ ಕಳ್ಳತನ: ಇಬ್ಬರ ಬಂಧನ, 73.03 ಲಕ್ಷದ ಚಿನ್ನ ವಶಕ್ಕೆ 