ವಿಜಯಪುರ: ವಿಜ್ಞಾನ ವಸ್ತು ಪ್ರದರ್ಶನ: ಶಿರಿನಬಾನು ರಾಜ್ಯ ಮಟ್ಟಕ್ಕೆ ಆಯ್ಕೆ
ವಿಜಯಪುರ 26: ಜಿಲ್ಲಾ ಪಂಚಾಯತ ಹಾಗೂ ಸಾರ್ವಜನಿಕ ಶಿಕ್ಷಣ ಇಲಾಖೆ ಸಂಯುಕ್ತ ಆಶ್ರಯದಲ್ಲಿ ಏರ್ಪಡಿಸಿದ್ದ ಜಿಲ್ಲಾ ಮಟ್ಟದ ವಿಜ್ಞಾನ ವಸ್ತು ಪ್ರದರ್ಶನದಲ್ಲಿ ನಗರದ ಪಿಡಿಜೆ ಪದವಿಪೂರ್ವ ಮಹಾವಿದ್ಯಾಲಯ (ಮಾಧ್ಯಮಿಕ ವಿಭಾಗ) ವಿದ್ಯಾರ್ಥಿನಿ ಕುಮಾರಿ ಶಿರಿನಬಾನು ಅಕ್ಕಲಕೋಟ "ಮಾಲಿನ್ಯರಹಿತ ವಾಟರ್ ರಾಕೆಟ್ ಮಾದರಿಯನ್ನು ಪ್ರದರ್ಶಿಸಿ ಪ್ರಥಮ ಸ್ಥಾನ ಪಡೆದು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾಳೆ.
ಇದೇ ಶಾಲೆಯ ಕುಮಾರ ಸೌರಭ ಕಟ್ಟಿ ಈತನು ತಯಾರಿಸಿದ "ಸಾರಿಗೆ ಮತ್ತು ಸಂಪರ್ಕ ಮಾದರಿ ಪ್ರದರ್ಶಿಸಿ ಜಿಲ್ಲೆಗೆ ತೃತಿಯ ಸ್ಥಾನ ಪಡೆದಿದ್ದಾನೆ. ವಿಜ್ಞಾನ ಶಿಕ್ಷಕ ವಿ.ಆರ್. ಕಟ್ಟಿ ಅವರು ಈ ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ಮಾಡಿದ್ದರು.
ವಿದ್ಯಾರ್ಥಿಗಳ ಸಾಧನೆಗೆ ಪ್ರಾಚಾರ್ಯರು, ಉಪಪ್ರಾಚಾರ್ಯರು, ಆಡಳಿತ ಮಂಡಳಿ ಎಲ್ಲ ಸದಸ್ಯರು ಹಾಗೂ ಶಿಕ್ಷಕ ವೃಂದ ಹರ್ಷ ವ್ಯಕ್ತಪಡಿಸಿದ್ದಾರೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 