ನೂತನ ಬಸ್ಗೆ ಗ್ರಾಮಸ್ಥರಿಂದ ಸ್ವಾಗತ
Villagers welcome new bus
ದೇವರಹಿಪ್ಪರಗಿ 28: ಬಸವನ ಬಾಗೇವಾಡಿಯಿಂದ ಕೊಂಡಗೂಳಿ ಮಾರ್ಗವಾಗಿ ಸಿಂದಗಿ ಪಟ್ಟಣಕ್ಕೆ ಸಂಚರಿಸುವ ನೂತನ ಬಸ್ಗೆ ಗ್ರಾಮಸ್ಥರು ಹಾರ ಹಾಕಿ, ಪೂಜೆ ಸಲ್ಲಿಸುವ ಮೂಲಕ ಸಂಭ್ರಮದಿಂದ ಸ್ವಾಗತ ಕೋರಿದರು.
ಬಹು ದಿನಗಳ ಬೇಡಿಕೆಗೆ ಸ್ಪಂದಿಸಿದ ಸಾರಿಗೆ ಇಲಾಖೆ, ಬಸವನ ಬಾಗೆವಾಡಿ - ಹೂವಿನ ಹಿಪ್ಪರಗಿ, ಕುದುರಿ ಸಾಲವಾಡಗಿ, ಯಾಳವಾರ, ಕೊಂಡಗೂಳಿ, ಕೋರವಾರ ಹಾಗೂ ಕೊಕಟನೂರ ಮಾರ್ಗವಾಗಿ ಸಿಂದಗಿ ಪಟ್ಟಣಕ್ಕೆ ನೂತನ ಬಸ್ ಸಂಚಾರ ಆರಂಭಿಸಿದೆ.
ಈ ಸೇವೆ ಆರಂಭಿಸಲು ಸಹಕರಿಸಿದ ಶಾಸಕ ರಾಜುಗೌಡ ಪಾಟೀಲ ಕುಡರಿಸಲವಾಡಗಿ ಹಾಗೂ ವಿಜಯಪುರ ವಿಭಾಗದ ಸಾರಿಗೆ ಅಧಿಕಾರಿಗಳಿಗೆ ಗ್ರಾಮಸ್ಥರು ಅಭಿನಂದನೆ ಸಲ್ಲಿಸಿದರು. ನೂತನ ಬಸ್ ಸೇವೆಯಿಂದ ವಿದ್ಯಾರ್ಥಿಗಳು, ರೈತರು, ವ್ಯಾಪಾರಿಗಳು ಹಾಗೂ ಸಾರ್ವಜನಿಕರಿಗೆ ಅನುಕೂಲವಾಗಲಿದೆ ಎಂದು ಗ್ರಾಮಸ್ಥರು ಸಂತಸ ವ್ಯಕ್ತಪಡಿಸಿದರು.
ಈ ಸಂದರ್ಭದಲ್ಲಿ ಶಿವು ಕೊಳ್ಳಾರಿ, ಬಾಬು ನದಾಫ್, ಉಮೇಶ ಹಣ್ಣಿ, ಕಾಸಿಲಿಂಗ ಸಿಂದಗೇರಿ, ಅಕ್ಷಯ ಗೊಬ್ಬರ, ಕಲ್ಲು ಅವರಾದಿ, ಶಿವಾನಂದ ಗೊಬ್ಬರ, ಮಹಿಬೂಬ ಖಾಜಿ, ಮುನೀರ್ ನದಾಫ್, ಬಸವಲಿಂಗಯ್ಯ ಹಿರೇಮಠ, ಬಸವರಾಜ ಕುಲಕರ್ಣಿ ಸೇರಿದಂತೆ ಹಲವರು ಉಪಸ್ಥಿತರಿದ್ದರು.
ಪರಿಷತ್ ಚುನಾವಣೆಯಲ್ಲಿ ಅಡ್ಡ ಮತದಾನ : ಜಿಲ್ಲೆಯ ಬಿಜೆಪಿ ಶಾಸಕನ ಹೆಸರು ತಳಕು, ಚರ್ಚೆ ಶುರು
ಸುಪ್ರೀಂನಲ್ಲಿರುವ ಬೆಳಗಾವಿ ಜಿಲ್ಲೆಯ 350 ಪ್ರಕರಣಗಳಿಗೆ ರಾಜಿ ಸಂಧಾನದಿಂದ ಇತೇರ್ಥಕ್ಕೆ ಪ್ರಯತ್ನ : ನ್ಯಾ. ಮಂಜುನಾಥ ನಾಯಕ
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ
ಸಚಿವ ಸತೀಶ್ ಜಾರಕಿಹೊಳಿ ಅಳಿಯನಿಗೆ ಇಡಿ ಶಾಕ್ ; ಮನೆ, ಕಚೇರಿ ಸೇರಿ 6 ಕಡೆ ದಾಳಿ
ಆತ್ಮನಿರ್ಭರ ಭಾರತ, ಮೇಕ್ ಇನ್ ಇಂಡಿಯಾ, ಇಂಧನ ಭದ್ರತೆ ರಾಷ್ಟ್ರದ ಪ್ರಮುಖ ಆದ್ಯತೆಗಳು: ಪ್ರಧಾನಿ ಮೋದಿ
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ 