ವಿನಾಯಕ ಶೇಟ್ಗೆ ರಾಜ್ಯಮಟ್ಟದ ಬಸವ ಭೂಷಣ ಪ್ರಶಸ್ತಿ
Vinayak Shet receives state-level Basava Bhushan award
ಮುಂಡಗೋಡ 30 : ತಾಲೂಕಿನ ಶಿಕ್ಷಕ, ಸಾಹಿತಿ ಹಾಗೂ ಕಲಾವಿದ ವಿನಾಯಕ ಶೇಟ್ ಅವರಿಗೆ ವಿಜಯಪುರ ಜಿಲ್ಲೆಯ ಬಸವನ ಬಾಗೇವಾಡಿಯಲ್ಲಿ ನಡೆದ ರಾಜ್ಯಮಟ್ಟದ ಲೇಖಕರ ಮಹಾಸಮ್ಮೇಳನದಲ್ಲಿ ಪ್ರತಿಷ್ಠಿತ ಬಸವ ಭೂಷಣ ಪ್ರಶಸ್ತಿ ಪ್ರದಾನ ಮಾಡಲಾಯಿತು.
ಕರ್ನಾಟಕ ರಾಜ್ಯ ನಾಟಕ ಬರಹಗಾರರ ಸಂಘದ ವತಿಯಿಂದ ಗಾನಯೋಗಿ ಪಂಚಾಕ್ಷರಿ ಪುಟ್ಟರಾಜ ಗವಾಯಿಗಳ ಜಯಂತ್ಯುತ್ಸವ ಅಂಗವಾಗಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಶಾಸಕ ಭೀಮನಗೌಡ ಬಿ. ಪಾಟೀಲ ಪ್ರಶಸ್ತಿ ಪ್ರದಾನ ಮಾಡಿದರು.
ಈ ಸಂದರ್ಭದಲ್ಲಿ ಸಂಘದ ಗೌರವಾಧ್ಯಕ್ಷ ಡಾ. ಆರ್. ಪೂಜಾರ್, ರಾಜ್ಯಾಧ್ಯಕ್ಷ ಶಂಕರ ಹಿಪ್ಪರಗಿ, ವಿಜಯಪುರ ಜಿಲ್ಲಾ ಘಟಕದ ಅಧ್ಯಕ್ಷ ಸಿದ್ದಪ್ಪ ಅಲಗೋಡ ಸೇರಿದಂತೆ ಸಂಘದ ಪದಾಧಿಕಾರಿಗಳು, ಸಾಹಿತಿಗಳು ಹಾಗೂ ಗಣ್ಯರು ಉಪಸ್ಥಿತರಿದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 