ಸಿರಿಯಾದಲ್ಲಿ ಭುಗಿಲೆದ್ದ ಹಿಂಸಾಚಾರ:ಭಾರತೀಯ ನಾಗರೀಕರು ಈ ತಕ್ಷಣವೇ ಹೊರಟುಬರಲು ಸೂಚಿ
Violence broke out in Syria: Indian citizens advised to leave immediately
ನವದೆಹಲಿ 07: ಸಿರಿಯಾದಲ್ಲಿ ಹಿಂಸಾಚಾರ ಭುಗಿಲೆದ್ದಿದೆ. ಇಸ್ಲಾಮಿಕ್ ಬಂಡುಕೋರರು ಹಾಗೂ ಸಿರಿಯಾ ಸರ್ಕಾರದ ವಿರುದ್ಧದ ಅಂತರ್ಯುದ್ಧ ತಾರಕಕ್ಕೇರಿದ್ದು ಇದೀಗ ಸಿರಿಯಾದಲ್ಲಿ ಆತಂಕದ ವಾತಾವರಣ ಸೃಷ್ಟಿಯಾಗಿರುವ ಹಿನ್ನೆಲೆಯಲ್ಲಿ ಸಿರಿಯಾಗೆ ಅಥವಾ ಸಿರಿಯಾ ಮೂಲಕ ಯಾರೂ ಪ್ರಯಾಣಿಸಬೇಡಿ, ಸಿರಿಯಾಲ್ಲಿರುವ ಭಾರತೀಯ ನಾಗರೀಕರು ಲಭ್ಯವಿರುವ ವಾಣಿಜ್ಯ ವಿಮಾನಗಳ ಮೂಲಕ ತಕ್ಷಣವೆ ಹೊರಟು ಬರಲು ಭಾರತೀಯ ವಿದೇಶಾಂಗ ಸಚಿವಾಲಯ ಸೂಚನೆ ನೀಡಿದೆ.
ಸಿರಿಯಾದಲ್ಲಿನ
ಪರಿಸ್ಥಿತಿ ಹದಗೆಡುತ್ತಿದ್ದು, ಪರಿಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು ಮುಂದಿನ ಆದೇಶದವರೆಗೂ ಭಾರತೀಯ
ಪ್ರಜೆಗಳು ಸಿರಿಯಾ ಭೇಟಿಯನ್ನು ನಿಯಂತ್ರಿಸಬೇಕು.
ಪ್ರಸ್ತುತ ಸಿರಿಯಾದಲ್ಲಿರುವ ಭಾರತೀಯ ಪ್ರಜೆಗಳು ಡಮಾಸ್ಕಸ್ನಲ್ಲಿರುವ ಭಾರತೀಯ ರಾಯಭಾರ ಕಚೇರಿಯೊಂದಿಗೆ
ಸಂಪರ್ಕದಲ್ಲಿರಿ. ಭಾರತೀಯ ಪ್ರಜೆಗಳಿಗೆ ತುರ್ತು
ಸಹಾಯವಾಣಿ ಸಂಖ್ಯೆ +963 993385973 ಹಾಗೂ hoc.domascus@mea.gov.in ಇಮೇಲ್ ಐಡಿ ಮೂಲಕ
ಸಂಪರ್ಕಿಸುವಂತೆ ತಿಳಿಸಿವೆ.
ಜೊತೆಗೆ
ಈ ತಕ್ಷಣಕ್ಕೆ ಹೊರಡಲು
ಸಾಧ್ಯವಾಗುವ ಭಾರತೀಯರಿಗೆ ವಾಣಿಜ್ಯ ವಿಮಾನಗಳು ಲಭ್ಯವಿದೆ.
ಈ ವಿಮಾನದ ಮೂಲಕ
ಭಾರತಕ್ಕೆ ವಾಪಾಸ್ ಆಗುವಂತೆ ಮಾರ್ಗಸೂಚಿ
ಬಿಡುಗಡೆ ಮಾಡಿದೆ.
ಎಂಇಎ
ವಕ್ತಾರ ರಣಧೀರ್ ಜೈಸ್ವಾಲ್ ಅವರು
ಮಾತನಾಡಿ, ಸಿರಿಯಾದ ಉತ್ತರದಲ್ಲಿ ಇತ್ತೀಚಿನ
ಪರಿಸ್ಥಿತಿಯನ್ನು ಗಮನಿಸಲಾಗಿದೆ. ಪರಿಸ್ಥಿತಿಯನ್ನು ಸೂಕ್ಷ್ಮವಾಗಿ ಗಮನಿಸಲಾಗುತ್ತಿದೆ. ಸಿರಿಯಾದಲ್ಲಿ ಸುಮಾರು 90 ಭಾರತೀಯರಿದ್ದಾರೆ, ಇದರಲ್ಲಿ 14 ಮಂದಿ ಯುಎನ್ ಸಂಸ್ಥೆಗಳಲ್ಲಿ
ಕೆಲಸ ಮಾಡುತ್ತಿದ್ದಾರೆ. ವಿದೇಶಾಂಗ ಸಚಿವಾಲಯ ಸುರಕ್ಷತೆ ಮತ್ತು
ಭದ್ರತೆಗಾಗಿ ಭಾರತೀಯರೊಂದಿಗೆ ನಿಕಟ ಸಂಪರ್ಕದಲ್ಲಿದೆ ಎಂದು
ಹೇಳಿದ್ದಾರೆ.
ಸಿರಿಯಾದಲ್ಲಿ
ರಷ್ಯಾ ಹಾಗೂ ಇರಾನ್ ಬೆಂಬಲಿತ
ಬಶರ್ ಅಲ್ ಅಸ್ಸಾದ್ ನೇತೃತ್ವದ
ಸರ್ಕಾರವಿದೆ. ಆದರೆ, ಈ ಸರ್ಕಾರ
ವಿರುದ್ಧ ಸ್ಥಳೀಯ ಇಸ್ಲಾಮಿಕ್ ಭಯೋತ್ಪಾದಕ
ಗುಂಪು ತಿರುಗಿ ಬಿದ್ದಿದೆ. ಟರ್ಬಿ
ಬೆಂಬಿಲಿತ ಈ ಇಸ್ಲಾಮಿಕ್ ಬಂಡಾಯ
ಗುಂಪು ಕಳೆದ ವಾರ ಸಿರಿಯಾ
ಅಧ್ಯಕ್ಷ ಬಶರ್ ಅಲ್ ಅಸ್ಸಾದ್
ಕಿತ್ತೆಸೆಯುವ ಎಚ್ಚರಿಕೆ ನೀಡಿತ್ತು. ಸಿರಿಯಾದ ಹಲವು ನಗರಗಳ
ಮೇಲೆ ಈ ಗುಂಪು ದಾಳಿ
ನಡೆಸಿದೆ. ಭಾರೀ ಹಿಂಸಾಚಾರದ ಮೂಲಕ
ನಗರಗಳನ್ನು ವಶಕ್ಕೆ ಪಡೆದಿದ್ದಾರೆ. ಈ
ಗುಂಪು ಡಮಾಸ್ಕಸ್ ಸೇರಿದಂತೆ ಕೆಲ ನಗರಗಳ ವಿದ್ಯುತ್
ಸಂಪರ್ಕ ಕಡಿತಗೊಳಿಸಿದ್ದಾರೆ. ಇದೀಗ ಸರ್ಕಾರದ ಪ್ರಮುಖ
ಕೇಂದ್ರಗಳನ್ನು ಗುರಿ ಮಾಡಿಕೊಂಡಿದ್ದಾರೆ.
ಬೆಳಗಾವಿಗೆ ಮೋಹನ್ ಭಾಗವತ್ ಭೇಟಿ: 9 ದಿನ ಡ್ರೋನ್ ಹಾರಾಟಕ್ಕೆ ನಿಷೇಧ, 3 ಸ್ಥಳಗಳು ರೆಡ್ ಝೋನ್ : ಡಿಸಿ ಆದೇಶ
ಕೋಲ್ಕತ್ತಾ ಟಿಎಂಸಿ ಕಚೇರಿ ವಿವಾದದ ಮೇಲೆ ಬಂಡಾಯ ಗುಂಪಿಗೆ ಮಮತಾ ಬ್ಯಾನರ್ಜಿ ತೀವ್ರ ವಾಗ್ದಾಳಿ, “ಸಂಸ್ಥೆಗಳನ್ನು ಸ್ವಾಧೀನಪಡಿಸಿಕೊಳ್ಳಲು ಸಾಧ್ಯವಿಲ್ಲ” ಎಂದು ಹೇಳಿಕೆ
ಸಿಸಿಬಿ ಪೊಲೀಸರ ದಾಳಿ–4.96 ಲಕ್ಷ ಮೌಲ್ಯದ ಹೆರಾಯಿನ್ ವಶ, ಓರ್ವ ಬಂಧನ
ಬೆಂಗಳೂರು ಕ್ವಾರಿ ಬಂಡೆ ಕುಸಿತ: ಬಿಹಾರದ ಏಳು ಕಾರ್ಮಿಕರು ಮೃತ
11 ವರ್ಷಗಳಲ್ಲಿ ಡಿಜಿಟಲ್ ಇಂಡಿಯಾ ಆಡಳಿತವನ್ನು ಪರಿವರ್ತಿಸಿ, ನಾಗರಿಕರನ್ನು ಸಬಲಗೊಳಿಸಿದೆ: ಪ್ರಧಾನಿ ಮೋದಿ
ಮುಂಬೈನ ಚೆಂಬೂರಿನಲ್ಲಿ ಶಾಲಾ ಬಸ್ ಮೇಲೆ ಮರ ಉರುಳಿ ಬಿದ್ದು ವಿದ್ಯಾರ್ಥಿ ಸಾವು; ನಾಲ್ವರಿಗೆ ಗಾಯ 