ಎಲ್ಲದಕ್ಕೂ ಹಿಂಸಾಚಾರವೇ ಪರಿಹಾರವಲ್ಲ: ರಜನಿಕಾಂತ
ಚನ್ನೈ, ಡಿ
20 ಪೌರತ್ವ ತಿದ್ದುಪಡಿ ಮಸೂದೆಯ ಕುರಿತು ಮೌನ ಮುರಿದಿರುವ ನಟ ರಜನಿಕಾಂತ್ ಎಲ್ಲದಕ್ಕೂ ಹಿಂಸೆಯೇ ಸಮಸ್ಯೆಗೆ ಪರಿಹಾರವಾಗುವುದಿಲ್ಲ ಎಂದು ಹೇಳಿದ್ದಾರೆ.ಈ ಕುರಿತು ಟ್ವೀಟ್ ಮಾಡಿರುವ ಅವರು ಇದು ಪರ-ವಿರೋಧ ಚರ್ಚೆಗೆ ಕಾರಣವಾಗಿದೆ.ಭಾರತೀಯ ಪ್ರಜೆಗಳು ರಾಷ್ಟ್ರದ ಭದ್ರತೆ ಮತ್ತು ಐಕ್ಯತೆ ಕುರಿತು ಒಗ್ಗಟ್ಟಿನಿಂದಿರಬೇಕು ಮತ್ತು ಜಾಗೃತರಾಗಿರಬೇಕು
ಎಂಬುದು ಸರಿ. ಆದರೇ ದೇಶಾದ್ಯಂತ ಹಿಂಸಾಚಾರದ ಘಟನೆ ನಡೆಯುತ್ತಿರುವುದು ಬಹಳ ನೋವು, ದುಃಖ ತಂದಿದೆ ಎಂದು ಅವರು ಟ್ವೀಟ್ ಮಾಡಿದ್ದಾರೆ.ಕೆಟ್ಟ ಆಲೋಚನೆಗಳು ಮೊದಲು
ನಮ್ಮನ್ನು ಆಕರ್ಷಿಸುತ್ತದೆ, ಜೊತೆಗೆ ಸಮಸ್ಯೆಯನ್ನು
ಪರಿಹರಿಸುವ ಬದಲು ಇನ್ನಷ್ಟು ಬಿಗಡಾಯಿಸುವಂತೆ ಮಾಡುತ್ತವೆ. ಅಹಿಂಸೆ ಮತ್ತು ಉತ್ತಮ ಆಲೋಚನೆಗಳು ಆರಂಭದಲ್ಲಿ
ನಮಗೆ ಹಿತ ಎನಿಸುವುದಿಲ್ಲ ಆದರೆ ಅವುಗಳೇ ಸಮಸ್ಯೆಗಳಿಗೆ
ನಿಜವಾದ , ಶಾಶ್ವತ ಪರಿಹಾರ ಒದಗಿಸಲಿವೆ ಎಂಬುದನ್ನು ಯಾರೊಬ್ಬರು ಮರೆಯಬಾರದು ಎಂದೂ ಅವರು ಹೇಳಿದ್ದಾರೆ.
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ 