ಶಾಸಕ ನಾಗೇಂದ್ರವರ ಕಚೇರಿಯಲ್ಲಿ ವಿಶ್ವಕರ್ಮ ಜಯಂತಿ ಆಚರಣೆ
Vishwakarma Jayanti celebrated at MLA Nagendra's office
ಬಳ್ಳಾರಿ 19: ರಂದು ಮಾಜಿ ಬಳ್ಳಾರಿ ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಗ್ರಾಮಾಂತರ ವಿಧಾನಸಭಾ ಕ್ಷೇತ್ರದ ಹಾಲಿ ಶಾಸಕರಾದ ಬಿ.ನಾಗೇಂದ್ರವರ ಕಛೇರಿಯಲ್ಲಿ "ವಿಶ್ವಕರ್ಮ " ಜಯಂತಿಯನ್ನು ಆಚರಿಸಲಾಯಿತು.
ಈ ಕಾರ್ಯಕ್ರಮದಲ್ಲಿ ಮಾಜಿ ಸಚಿವರು ಹಾಗೂ ಹಾಲಿ ಶಾಸಕ ಬಿ.ನಾಗೇಂದ್ರವರ ಆಪ್ತರು, ಕಾಂಗ್ರೇಸ್ ಪಕ್ಷದ ಮುಖಂಡರುಗಳು ಹಾಗೂ ವಿಶ್ವ ಕರ್ಮ ಸಮುದಾಯದ ಮುಖಂಡರು ಸೇರಿ ವಿಶ್ವಕರ್ಮ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಿದರು.ಶಾಸಕರ ಕಚೇರಿಯಲ್ಲಿ ವಿಶ್ವಕರ್ಮ ಜಯಂತ್ಯೋತ್ಸವದ ನಿಮಿತ್ತ ವಿಶ್ವಕರ್ಮ ಮಹಿಳಾ ಅಧ್ಯಕ್ಷರಾದ ತ್ರಿವೇಣಿ ಪತ್ತಾರ್ ಅವರಿಗೆ, ವಿಶ್ವಕರ್ಮ ಅಭಿವೃದ್ಧಿ ನಿಗಮದ ನಾಮ ನಿರ್ದೇಶಕ ಶ್ರೀಧರಗಡ್ಡೆ ಚಂದ್ರಶೇಖರ ಆಚಾರ್, ವಿಶ್ವಕರ್ಮ ಎಜುಕೇಶನ್ ಟ್ರಸ್ಟ್ ಅಧ್ಯಕ್ಷ ಕಪ್ಪಾಗಲ್ ಚಂದ್ರಶೇಖರ ಆಚಾರ್, ವೀರಶ್ ಶಿಲ್ಪಿ ಇವರುಗಳಿಗೆ ಸನ್ಮಾನ ಕಾರ್ಯಕ್ರಮ ಆಯೋಜಿಸಲಾಗಿತ್ತು.
ಈ ಸಂದರ್ಭದಲ್ಲಿ ಜಿಲ್ಲಾ ಗ್ಯಾರಂಟಿಗಳ ಅಧ್ಯಕ್ಷರಾದ ಕೆಇ.ಚಿದಾನಂದಪ್ಪ, ಸಮಾಜ ಸೇವಕ ಹಾಗೂ ಕಾಂಗ್ರೆಸ್ ಮುಖಂಡ ಪಿ.ಜಗನ್, ಪಕ್ಷದ ಮುಖಂಡರುಗಳಾದ ಕೊಳಗಲ್ ಎರ್ರಿಸ್ವಾಮಿ, ಎರಗುಡಿ ಮಲ್ಲಯ್ಯ, ನಾಗಲಕೆರೆ ಗೋವಿಂದ, ಶ್ರೀನಾಥ್, ಸಂಗನಕಲ್ಲು ವಿಜಯ ಕುಮಾರ್, ಎಪಿಎಂಸಿ ಸದಸ್ಯ ಕುದನ್ ಸಾಬ್, ಇಂಟೆಕ್ ಜಿಲ್ಲಾಧ್ಯಕ್ಷ ರೂಪನಗುಡಿ ರಾಮಂಜಿನಿ, ಧನಂಜಯ ಹಮಾಲ್, ಚಾಗನೂರು ರಾಮಕೃಷ್ಣ, ನರೇಂದ್ರ, ಅಥವುಲ್ಲ, ಬಿ.ಎ.ಮಲ್ಲೇಶ್ವರಿ ಸೇರಿದಂತೆ ಶಾಸಕರ ಅಭಿಮಾನಿ ಬಳಗದವರು ಹಾಗೂ ಪಕ್ಷದ ಮುಖಂಡರು ಮತ್ತು ಕಾರ್ಯಕರ್ತರು ಭಾಗವಹಿಸಿದ್ದರು.
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ 