ಸ್ವಯಂಪ್ರೇರಿತ ರಕ್ತದಾನ ಶಿಬಿರ ಯಶಸ್ವಿ

ಸ್ವಯಂಪ್ರೇರಿತ ರಕ್ತದಾನ ಶಿಬಿರ ಯಶಸ್ವಿ  Voluntary blood donation camp successful


ಸವದತ್ತಿ  03: ಶಿಕ್ಷಕರ ದಿನಾಚರಣೆ ಅಂಗವಾಗಿ ನಗರದ ಗುರ್ಲಹೊಸೂರ ಸರ್ಕಾರಿ ಶಾಸಕರ ಮಾದರಿ ಶಾಲೆಯ ಆವರಣದಲ್ಲಿ ಆಯೋಜಿಸಿದ್ದ ಸ್ವಯಂಪ್ರೇರಿತ ರಕ್ತದಾನ ಶಿಬಿರ ಯಶಸ್ವಿಯಾಗಿ ನಡೆಯಿತು. ಕಾಂಗ್ರೆಸ್ ಮುಖಂಡ ಅಶ್ವಥ್ ವೈದ್ಯ ಶಿಬಿರಕ್ಕೆ ಚಾಲನೆ ನೀಡಿ ಮಾತನಾಡಿ, ರಕ್ತದಾನ ಮಹಾದಾನವಾಗಿದ್ದು, ಒಬ್ಬರು ನೀಡುವ ರಕ್ತದಿಂದ ಮೂರು ಜೀವಗಳನ್ನು ಉಳಿಸಲು ಸಾಧ್ಯ. ಶಿಕ್ಷಕರ ದಿನಾಚರಣೆಯ ಸಂದರ್ಭದಲ್ಲಿ ಜೀವ ರಕ್ಷಿಸುವ ಹಾಗೂ ಸಾಮಾಜಿಕ ಜಾಗೃತಿ ಮೂಡಿಸುವ ಕಾರ್ಯಕ್ರಮ ಆಯೋಜಿಸಿರುವುದು ಶ್ಲಾಘನೀಯ ಎಂದರು. ತಹಶೀಲ್ದಾರ ಮಲ್ಲಿಕಾರ್ಜುನ ಹೆಗ್ಗನ್ನವರ ಮಾತನಾಡಿ, ರಕ್ತದಾನದ ಮಹತ್ವ ಅರಿತು ಪ್ರತಿಯೊಬ್ಬರೂ ಸ್ವಯಂಪ್ರೇರಿತರಾಗಿ ರಕ್ತದಾನ ಮಾಡುವ ಮೂಲಕ ಸಾಮಾಜಿಕ ಹೊಣೆಗಾರಿಕೆ ಮೆರೆಯಬೇಕು ಎಂದು ಕರೆ ನೀಡಿದರು. ಶಿಬಿರದಲ್ಲಿ ನಗರಸಭೆ ಪೌರಾಯುಕ್ತ ಸಂಗನಬಸಯ್ಯ ಗದಗಿಮಠ, ಬಿಇಒ ಎ.ಎ. ಖಾಜಿ, ಡಾ. ಶ್ರೀಪಾದ ಸಬನಿಸ್ ಸೇರಿದಂತೆ ಅಧಿಕಾರಿಗಳು, ಶಿಕ್ಷಕರು, ಶಾಲಾ ಸಿಬ್ಬಂದಿ, ಸ್ಥಳೀಯ ಯುವಕರು ಹಾಗೂ ಸಾರ್ವಜನಿಕರು ಉತ್ಸಾಹದಿಂದ ಪಾಲ್ಗೊಂಡು ರಕ್ತದಾನ ಮಾಡಿದರು.