ಕಮಲಾಪುರದಲ್ಲಿ ಮತದಾರರ ಜಾಗೃತಿ ಜಾಥಾ ಅಭಿಯಾನ
Voter awareness rally campaign in Kamalapura
ಲೋಕದರ್ಶನ ವರದಿ
ಧಾರವಾಡ 07: ಇಲ್ಲಿಯ ಕಮಲಾಪುರದ ಸರಕಾರಿ ಪ್ರೌಢಶಾಲೆಯ ಮಕ್ಕಳಿಂದ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣಿ ಕುರಿತು ಜಾಗೃತಿ ಜಾಥಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಶಾಲೆಯ ಮುಖ್ಯೋಪಾಧ್ಯಾಯರಾದ ರಮೇಶ ಯರಳಿ ಅವರು ಧ್ವಜ ತೋರಿಸುವ ಮೂಲಕ ಜಾಗೃತಿ ಜಾಥಾಕ್ಕೆ ಚಾಲನೆ ನೀಡಿ, ಪ್ರತಿಯೊಬ್ಬ ಜಾಗೃತ ಮತದಾರರು, ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ ಅಭಿಯಾನದಲ್ಲಿ ಪಾಲ್ಗೊಂಡು ಚುನಾವಣಾ ಆಯೋಗಕ್ಕೆ ಸಹಕರಿಸಬೇಕೆಂದು ಕರೆ ನೀಡಿದರು.
ಕಮಲಾಪುರ ಗ್ರಾಮದ ಕಮತಿ ಓಣಿ, ಕೋಟಿ ಓಣಿ, ಈಶ್ವರ ಗುಡಿ ಓಣಿ, ಬಾಳಗಿ ಓಣಿ ಹಾಗೂ ಪ್ರಮುಖ ಬೀದಿಗಳಲ್ಲಿ ಜಾಥಾ ಅಭಿಯಾನ ನಡೆಸಲಾಯಿತು. ಶಾಲೆಯ ಚುನಾವಣಾ ಕ್ಲಬ್ ನೋಡಲ್ ಅಧಿಕಾರಿ ಶಿವಾನಂದ ಭಾಗೋಡಿ, ಜೆಡ್. ಆಯ್. ಮುಲ್ಲಾ, ಆರ್.ಜಿ. ನಾಯಕ, ವಾರಿಜಾಕ್ಷೀ ಭಟ್, ಕೆ. ಎಸ್.ಪಾಟೀಲ, ಎಂ.ಎಫ್.ಅಂಕಲಗಿ, ಮಂಜುಳಾ ಬಡಿಗೇರ, ವರ್ಷಾ ಪವಾರ ಮುಂತಾದವರು ಪಾಲ್ಗೊಂಡಿದ್ದರು.
ಮಳೆಯಿಂದ ಕಾರಲಗಾ ಗ್ರಾಮ ಜಲಾವೃತ; ವಿದ್ಯಾರ್ಥಿಗಳ ಪರದಾಟ : ಶಾಲಾ ಕಾಲೇಜುಗಳಿಗೆ ರಜೆ
ಆಲಂದಿಯಲ್ಲಿ ಪ್ರವಾಹ: ಭಾರೀ ಮಳೆಯಿಂದ ಇಂದ್ರಾಯಣಿ ನದಿ ಉಕ್ಕಿ ಹರಿದು ಸೇತುವೆಗಳು ಮುಚ್ಚಲ್ಪಟ್ಟವು; ನದಿತೀರ ಪ್ರದೇಶಗಳು ಜಲಾವೃತ
ಕುಟುಂಬಕ್ಕೆ ಸಾಮಾಜಿಕ ಬಹಿಷ್ಕಾರ, ಜೀವ ಬೆದರಿಕೆ, ನ್ಯಾಯಕ್ಕಾಗಿ ಡಿಸಿ, ಎಸ್ಪಿಗೆ ಉಪನ್ಯಾಸಕನ ಮೊರೆ
ಗೌರಿ ಸ್ಪ್ರಾಟ್ ಅವರನ್ನು ವಿವಾಹವಾದ ಅಮೀರ್ ಖಾನ್; ಮುಂಬೈಯಲ್ಲಿ ಆಪ್ತರ ಸಮ್ಮುಖದಲ್ಲಿ ಸರಳ ವಿವಾಹ ಸಮಾರಂಭ
ಬೆಳಗಾವಿಗೆ ಮೋಹನ್ ಭಾಗವತ್ ಭೇಟಿ: 9 ದಿನ ಡ್ರೋನ್ ಹಾರಾಟಕ್ಕೆ ನಿಷೇಧ, 3 ಸ್ಥಳಗಳು ರೆಡ್ ಝೋನ್ : ಡಿಸಿ ಆದೇಶ
ಕೋಲ್ಕತ್ತಾ ಟಿಎಂಸಿ ಕಚೇರಿ ವಿವಾದದ ಮೇಲೆ ಬಂಡಾಯ ಗುಂಪಿಗೆ ಮಮತಾ ಬ್ಯಾನರ್ಜಿ ತೀವ್ರ ವಾಗ್ದಾಳಿ, “ಸಂಸ್ಥೆಗಳನ್ನು ಸ್ವಾಧೀನಪಡಿಸಿಕೊಳ್ಳಲು ಸಾಧ್ಯವಿಲ್ಲ” ಎಂದು ಹೇಳಿಕೆ 